ಬ್ರೇಕಿಂಗ್ ನ್ಯೂಸ್
24-09-20 03:37 pm Mangaluru Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 24: ಸ್ಯಾಂಡಲ್ ವುಡ್ ಡ್ರಗ್ ಲಿಂಕ್ ಈಗ ಕನ್ನಡದ ಖ್ಯಾತ ನಟಿ ಕಂ ಆಂಕರ್ ಅನುಶ್ರೀಗೂ ಸುತ್ತಿಕೊಂಡಿದೆ. ಮಂಗಳೂರಿನಲ್ಲಿ ವಾರದ ಹಿಂದೆ ಬಂಧಿಸಲ್ಪಟ್ಟ ಕಿಶೋರ್ ಶೆಟ್ಟಿ ಸಂಪರ್ಕದಲ್ಲಿ ಅನುಶ್ರೀಗೆ ಮಂಗಳೂರು ಸಿಸಿಬಿ ಪೊಲೀಸರು ನೋಟೀಸ್ ನೀಡಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.
ಕಿಶೋರ್ ಶೆಟ್ಟಿ ಜೊತೆ ಸಂಪರ್ಕ ಇರುವ ಹಲವು ಯುವಕರು ಮತ್ತು ಯುವತಿಯರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ ತರುಣ್ ಎಂಬಾತನನ್ನೂ ಪೊಲೀಸರು ವಿಚಾರಣೆ ನಡೆಸಿದ ಸಂದರ್ಭದಲ್ಲಿ ಅನುಶ್ರೀ ಹೆಸರು ಹೇಳಿದ್ದಾನೆ ಎನ್ನಲಾಗುತ್ತಿದೆ. ಹೀಗಾಗಿ ಆಕೆಯನ್ನು ವಿಚಾರಣೆ ನಡೆಸುವುದಕ್ಕಾಗಿ ಮಂಗಳೂರು ಪೊಲೀಸರು ನೋಟೀಸ್ ನೀಡಿದ್ದಾರೆ.
ಸ್ಯಾಂಡಲ್ ವುಡ್ ಡ್ರಗ್ ಲಿಂಕ್ ಹಿನ್ನೆಲೆಯಲ್ಲೇ ಕಿಶೋರ್ ಶೆಟ್ಟಿ ಬಂಧನ ಆಗಿತ್ತು. ಆತನ ಬಂಧನ ಆಗುತ್ತಿದ್ದಂತೆ ಮೊದಲಿಗೆ ಕನ್ನಡದ ನಿರೂಪಕಿಯ ಹೆಸರು ಕೇಳಿಬಂದಿತ್ತು. ಅನುಶ್ರೀ ಮತ್ತು ಅಕುಲ್ ಜೊತೆ ಕಿಶೋರ್ ಶೆಟ್ಟಿಗೆ ನಂಟು ಇದೆ ಎನ್ನುವ ವದಂತಿ ಹರಡಿತ್ತು. ಆದರೆ ಇದ್ಯಾವುದೂ ಕನ್ಫರ್ಮ್ ಆಗಿರಲಿಲ್ಲ. ಇದೀಗ ಮಂಗಳೂರು ಮೂಲದ ನಟಿ ಅನುಶ್ರೀಗೆ ಮಂಗಳೂರು ಸಿಸಿಬಿ ಪೊಲೀಸರೇ ನೋಟೀಸ್ ನೀಡಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಪ್ರಶ್ನಿಸಿದ ಮಾಧ್ಯಮಕ್ಕೆ ಅನುಶ್ರೀ ತನಗೇನು ನೋಟೀಸ್ ಬಂದಿಲ್ಲ ಅಂತ ಉತ್ತರಿಸಿದ್ದಾರೆ.
ಕಿಶೋರ್ ಶೆಟ್ಟಿ ಮತ್ತು ಅಕಿಲ್ ನೌಶೀಲ್, ಡ್ರಗ್ ಪೆಡ್ಲರ್ ಆಗಿದ್ದು ಹಲವರಿಗೆ ಡ್ರಗ್ ಪೂರೈಕೆ ಮಾಡುತ್ತಿದ್ದರು. ಮಂಗಳೂರಿನಲ್ಲಿ ಡ್ರಗ್ ಪಾರ್ಟಿ ಮಾಡುತ್ತಿದ್ದರು ಎಂದು ಹೇಳಲಾಗ್ತಿತ್ತು. ಇದೀಗ ಅನುಶ್ರೀಗೆ ನೋಟೀಸ್ ನೀಡಿರುವ ಬಗ್ಗೆ ಮಂಗಳೂರು ಡಿಸಿಪಿ ವಿನಯ್ ಗಾಂವಕರ್ ಬಳಿ ಪ್ರಶ್ನೆ ಮಾಡಿದಾಗ ಪೋಲೀಸರು ನೋಟಿಸ್ ನೀಡಲು ಬೆಂಗಳೂರಿಗೆ ತೆರಳಿರುವುದಾಗಿ ತಿಳಿಸಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm