ಬ್ರೇಕಿಂಗ್ ನ್ಯೂಸ್
28-04-22 01:39 pm Mangalore Correspondent ಕರಾವಳಿ
ಮಂಗಳೂರು, ಎ.28: ಕ್ರಿಶ್ಚಿಯನ್ ಶಾಲೆಗಳಲ್ಲಿ ಧರ್ಮಕ್ಕೆ ಸಂಬಂಧಿಸಿದ ತರಗತಿಗಳನ್ನ ನಡೆಸುವಂತಿಲ್ಲ. ಶಾಲೆಯ ಆವರಣದಲ್ಲಿ ಬೈಬಲ್, ಕುರಾನ್ ರೀತಿಯ ಧರ್ಮಾಧಾರಿತ ತರಗತಿಗಳಿಗೆ ಅವಕಾಶವಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಪುನರುಚ್ಚರಿಸಿದ್ದಾರೆ.
ಮಾಧ್ಯಮದ ಜೊತೆ ಮಾತನಾಡಿದ ಸಚಿವ ಬಿ.ಸಿ ನಾಗೇಶ್, ಯಾವ ಶಾಲೆಗಳು ಕರ್ನಾಟಕ ಶಿಕ್ಷಣ ಇಲಾಖೆಗೆ ನೋಂದಣಿ ಮಾಡಿಕೊಂಡಿರುತ್ತವೋ ಆ ಎಲ್ಲಾ ಶಾಲೆಗಳು ಈ ನಿಯಮವನ್ನು ಕಡ್ಡಾಯವಾಗಿ ಪಾಲಿಸಲೇಬೇಕು. ಶಿಕ್ಷಣ ಕಾಯ್ದೆ ಪ್ರಕಾರ ಯಾವುದೇ ಧರ್ಮದ ಪಠ್ಯ ಪುಸ್ತಕವನ್ನ ಶಾಲೆಗಳಲ್ಲಿ ತರಲು ಅವಕಾಶವಿಲ್ಲ. ಆದರೆ ಕೆಲವು ಕ್ರಿಶ್ಚಿಯನ್ ಶಾಲೆಗಳಲ್ಲಿ ವಿದ್ಯಾರ್ಥಿಗಳು ಬೈಬಲ್ ತರಬೇಕು ಎಂಬ ನಿಯಮ ಮಾಡಿದ್ದಾರೆ. ಈ ಬಗ್ಗೆ ಶಾಲೆಯ ವೆಬ್ಸೈಟ್ನಲ್ಲೂ ನಮೂದಿಸಿದ್ದು, ಬೈಬಲ್ ನಿಯಮ ಪಾಲಿಸುವವರಿಗೆ ಮಾತ್ರ ಶಾಲಾ ಪ್ರವೇಶಕ್ಕೆ ಅವಕಾಶ ಅಂತ ತಿಳಿಸಿದ್ದಾರೆ. ಸದ್ಯಕ್ಕೆ ಈ ಬಗ್ಗೆ ಪರೀಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಯಾವುದೇ ಕಾರಣಕ್ಕೂ ಶಾಲೆಗಳಲ್ಲಿ ಧರ್ಮಾಧಾರಿತ ಪಠ್ಯ ಬೋಧನೆಗೆ ಅವಕಾಶವಿಲ್ಲ ಎಂದಿದ್ದಾರೆ.

ಭಗವದ್ಗೀತೆ ಧರ್ಮಾಧಾರಿತವಲ್ಲ
ಬೈಬಲ್ ಹಾಗೂ ಕುರಾನ್ ಬಗ್ಗೆ ಮಾತ್ರ ಯಾಕೆ ಆಕ್ಷೇಪ ಎಂಬ ಪ್ರಶ್ನೆಗೆ, ಬೈಬಲ್, ಖುರಾನ್ ಧರ್ಮಾಧಾರಿತ ಗ್ರಂಥಗಳಾಗಿದ್ದು, ಇವುಗಳ ಆಚರಣೆ ಶಾಲೆಗಳಲ್ಲಿ ಬೇಡ. ಆದರೆ ಭಗವದ್ಗೀತೆ ಯಾವುದೇ ಧರ್ಮಾಧಾರಿತ ಗ್ರಂಥವಲ್ಲ. ಶಾಲೆಗಳಲ್ಲಿ ಭಗವದ್ಗೀತೆಯಲ್ಲಿರುವ ಮೌಲ್ಯಗಳನ್ನ ಹೇಳಿ ಕೊಡಲಾಗುತ್ತದೆ. ಕುರಾನ್, ಬೈಬಲ್ ರೀತಿ ಧರ್ಮಾಚರಣೆಗೆ ಉಪದೇಶ ಮಾಡುವುದಿಲ್ಲ. ಯಾವುದೇ ಕಾರಣಕ್ಕೂ ಭಗವದ್ಗೀತೆಯನ್ನ ಬೈಬಲ್, ಕುರಾನ್ಗೆ ಹೋಲಿಕೆ ಮಾಡುವುದು ಸರಿಯಲ್ಲ ಅಂತ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
ಇತ್ತೀಚೆಗೆ ಕ್ರಿಶ್ಚಿಯನ್ ಶಾಲಾ ಕಾಲೇಜುಗಳ ಪಠ್ಯಗಳಲ್ಲಿ ಧರ್ಮಕ್ಕೆ ಸಂಬಂಧಿಸಿದ ತರಗತಿಗಳನ್ನು ವಿದ್ಯಾರ್ಥಿಗಳಿಗೆ ಬೋಧನೆ ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿದೆ. ಈಗಾಗಲೇ ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಪರಿಶೀಲನೆ ನಡೆಸುವಂತೆ ಸೂಚನೆ ನೀಡಿದ್ದೇವೆ. ಪರಿಶೀಲನೆ ವೇಳೆ ಶಾಲೆಗಳಲ್ಲಿ ಬೈಬಲ್ ಕಲಿಕೆ ಕಂಡುಬಂದರೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
Education minister Nagesh said that there is there is no chance for conducting religious classes in schools run by Christians.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am