ಬ್ರೇಕಿಂಗ್ ನ್ಯೂಸ್
24-09-20 08:54 pm Udupi Correspondent ಕರಾವಳಿ
ಉಡುಪಿ, ಸೆಪ್ಟಂಬರ್ 24: ಆಕೆಯದು ಸಣ್ಣ ವಯಸ್ಸಾದ್ರೂ ಕೊರೊನಾ ಲಾಕ್ಡೌನ್ ವೇಳೆಯನ್ನು ವೇಸ್ಟ್ ಮಾಡಿರಲಿಲ್ಲ. ಬಿಡುವಿನ ಸಮಯದಲ್ಲಿ ಹೊಲಿಗೆ ಕಲಿತ ಹುಡುಗಿ, ಮಾಸ್ಕ್ ತಯಾರಿಸಿ ದೇಶದ ಗಮನ ಸೆಳೆದಿದ್ದಾಳೆ. ಹೌದು.. ಕೋವಿಡ್-19 ತಡೆಗಟ್ಟುವ ಸಲುವಾಗಿ ತನ್ನ ಕೈಯಾರೆ ತಯಾರಿಸಿದ 300 ಮಾಸ್ಕ್ಗಳನ್ನು ದೇಶದ ಗಡಿ ಕಾಯುತ್ತಿರುವ ಯೋಧರಿಗೆ ಕಳುಹಿಸಿದ್ದ ಉಡುಪಿಯ ವಿದ್ಯಾರ್ಥಿನಿ ಈಗ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಗಮನ ಸೆಳೆದಿದ್ದಾಳೆ.
ಉಡುಪಿ ಅಂಬಲಪಾಡಿಯ ನಂದಿತಾ ಹಾಗೂ ಗಿರೀಶ್ ಆಚಾರ್ ದಂಪತಿಯ ಪುತ್ರಿ ಇಶಿತಾ ಆಚಾರ್(13) ಸಚಿವರ ಶ್ಲಾಘನೆಗೆ ಪಾತ್ರರಾಗಿರುವ ಬಾಲಕಿ. ಮಣಿಪಾಲ ಮಾಧವ ಕೃಪಾ ಶಾಲೆಯಲ್ಲಿ 8ನೇ ತರಗತಿ ಓದುತ್ತಿರುವ ಇಶಿತಾ ರಕ್ಷಣಾ ಸಚಿವರ ಗಮನಸೆಳೆದ ಬಾಲಕಿ.

ಸ್ಕೌಟ್ಸ್ ಆ್ಯಂಡ್ ಗೈಡ್ಸ್ನಲ್ಲಿ ತೊಡಗಿಸಿಕೊಂಡಿರುವ ಇಶಿತಾ, ಕೊರೋನಾ ಲಾಕ್ಡೌನ್ ಸಂದರ್ಭದಲ್ಲಿ ಹೊಲಿಗೆಯನ್ನು ಕಲಿತುಕೊಂಡಿದ್ದಳು. ಬಿಡುವಿನ ವೇಳೆ ಎಸೆಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ನೀಡಲೆಂದು 300 ಮಾಸ್ಕ್ ಗಳನ್ನು ಹೊಲಿದು ರೆಡಿ ಮಾಡಿದ್ದರು.
ಹೀಗೆ ಮಕ್ಕಳು ಹೊಲಿದ ಮಾಸ್ಕ್ಗಳನ್ನು ನೇರವಾಗಿ ವಿದ್ಯಾರ್ಥಿಗಳಿಗೆ ನೀಡುವಂತಿಲ್ಲ. ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಮಾಸ್ಕ್ ಬ್ಯಾಂಕ್ಗೆ ನೀಡಬೇಕಾಗುತ್ತದೆ. ಆದರೆ ಆಗಲೇ ಮಾಸ್ಕ್ ಬ್ಯಾಂಕ್ನಲ್ಲಿ ಬಹಳಷ್ಟು ಮಾಸ್ಕ್ಗಳು ಬಂದು ಸೇರಿದ್ದವು. ಹೀಗಾಗಿ, ಇಶಿತಾ ತನ್ನಲ್ಲಿದ್ದ ಮಾಸ್ಕ್ಗಳನ್ನು ಅಗತ್ಯವುಳ್ಳ ಬೇರೆಯವರಿಗೆ ನೀಡಲು ಮುಂದಾದರು. ಇದೇ ವೇಳೆ, ತನ್ನ ತಾಯಿಯ ಸ್ನೇಹಿತರೊಬ್ಬರು ದೇಶದ ಗಡಿ ಕಾಯುತ್ತಿರುವ ಯೋಧರಿಗೆ ಮಾಸ್ಕ್ ಕಳುಹಿಸಿಕೊಡಲು ಸಲಹೆ ಮಾಡಿದ್ದರು. ಅದರಂತೆ, ಇಶಿತಾ ಸುಮಾರು 300 ಮಾಸ್ಕ್ಗಳನ್ನು ರಕ್ಷಣಾ ಸಚಿವರ ಕಚೇರಿ ವಿಳಾಸಕ್ಕೆ ಕೊರಿಯರ್ ಮೂಲಕ ಕಳುಹಿಸಿದ್ದರು. ಬಾಲಕಿ ತೋರಿದ ದೇಶಪ್ರೇಮ ಹಾಗೂ ಸೇವಾ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದ್ದು, ಇದೀಗ ತಿಂಗಳ ಬಳಿಕ ಕೇಂದ್ರ ರಕ್ಷಣಾ ಸಚಿವರ ಕಚೇರಿಯಿಂದ ಬಾಲಕಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಅಭಿನಂದಿಸಿರುವ ಪತ್ರ ತಲುಪಿದ್ದು ವಿದ್ಯಾರ್ಥಿನಿ ಖುಷಿಯಾಗಿದ್ದಾಳೆ.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm