ಬ್ರೇಕಿಂಗ್ ನ್ಯೂಸ್
30-04-22 03:24 pm Mangalore Correspondent ಕರಾವಳಿ
ಮಂಗಳೂರು, ಎ.30: ಇನ್ನೊಂದು ಬೈಕನ್ನು ಓವರ್ ಟೇಕ್ ಮಾಡುವ ಧಾವಂತದಲ್ಲಿ ಬೈಕ್ ಸವಾರನೊಬ್ಬ ಆಯತಪ್ಪಿ ರಸ್ತೆಗೆ ಬಿದ್ದಿದ್ದು ಆತನ ಮೇಲಿನಿಂದಲೇ ಟ್ಯಾಂಕರ್ ಹರಿದು ಯುವಕ ಸ್ಥಳದಲ್ಲೇ ದಾರುಣ ಸಾವು ಕಂಡ ಘಟನೆ ನಗರದ ನಂತೂರಿನಲ್ಲಿ ನಡೆದಿದೆ.
ಕೇರಳದ ಕೊಟ್ಟಾಯಂ ಜಿಲ್ಲೆಯ ನಿವಾಸಿ ಸೆಬಾಲ್ಟನ್ ಜಾನ್(21) ಮೃತ ಯುವಕ. ಈತ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಮೂರನೇ ವರ್ಷದ ಹೊಟೇಲ್ ಮ್ಯಾನೇಜ್ಮೆಂಟ್ ವ್ಯಾಸಂಗ ಮಾಡುತ್ತಿದ್ದ. ಜಾನ್ ಬೈಕಿನಲ್ಲಿ ನಂತೂರು ಸರ್ಕಲ್ ದಾಟಿ ಮುಂದೆ ಹೋಗುತ್ತಿದ್ದಾಗ ಬುಲೆಟ್ ಬೈಕನ್ನು ಓವರ್ ಟೇಕ್ ಮಾಡಲು ಯತ್ನಿಸಿದ್ದಾನೆ. ಎರಡು ಬೈಕುಗಳ ಧಾವಂತದಲ್ಲಿ ಜಾನ್ ಚಲಾಯಿಸುತ್ತಿದ್ದ ಪಲ್ಸರ್ ಬೈಕ್ ಬುಲೆಟ್ ಬೈಕಿಗೆ ತಾಗಿ ನೆಲಕ್ಕುರುಳಿದ್ದು ಅದರಲ್ಲಿದ್ದ ಜಾನ್ ರಸ್ತೆಗೆ ಬೀಳುತ್ತಲೇ ಪಕ್ಕದಲ್ಲಿ ಸಾಗುತ್ತಿದ್ದ ಟ್ಯಾಂಕರ್ ಆತನ ಮೇಲೆ ಹರಿದು ಹೋಗಿದೆ.

ಎರಡೂ ಬೈಕುಗಳು ನೆಲಕ್ಕೆ ಬಿದ್ದಿದ್ದು ಬುಲೆಟ್ ಬೈಕ್ ಸವಾರನಿಗೂ ರಸ್ತೆಗೆ ಬಿದ್ದು ಗಾಯಗಳಾಗಿವೆ. ಆದರೆ ಆತ ಹೆಲ್ಮೆಟ್ ಹಾಕಿದ್ದರಿಂದ ಹೆಚ್ಚೇನೂ ಅಪಾಯ ಆಗಿಲ್ಲ. ಪಲ್ಸರ್ ಬೈಕಿನಲ್ಲಿದ್ದವರು ಹೆಲ್ಮೆಟ್ ಹಾಕ್ಕೊಂಡಿರಲಿಲ್ಲ. ಜಾನ್ ತನ್ನ ಹೆಲ್ಮೆಟನ್ನು ಕೈಗೆ ಸಿಕ್ಕಿಸಿಕೊಂಡಿದ್ದ. ರಸ್ತೆಗೆ ಬಿದ್ದ ಯುವಕನ ತಲೆಯ ಭಾಗದಿಂದಲೇ ಟ್ಯಾಂಕರ್ ಲಾರಿಯ ಮುಂದಿನ ಚಕ್ರ ಹರಿದಿದೆ ಎಂದು ಕದ್ರಿ ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ. ಜಾನ್ ಹಿಂಬದಿ ಕುಳಿತಿದ್ದ ಅಂಥೋನಿ ಎಂಬಾತನಿಗೂ ಅಪಘಾತದಲ್ಲಿ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾನೆ. ಶುಕ್ರವಾರ ಸಂಜೆ ನಾಲ್ಕು ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಏಕಮುಖದ ರಸ್ತೆಯಲ್ಲಿ ಎರಡು ಬೈಕುಗಳ ಅತಿವೇಗದ ಚಾಲನೆಯಿಂದಲೇ ಅಪಘಾತ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Mangalore accident 21 year college student dies on spot after tanker truck goes on him at Nantoor. The deceased has been ide identified as John. He was pursing his hotel management course in Mangalore.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am