ಬ್ರೇಕಿಂಗ್ ನ್ಯೂಸ್
30-04-22 03:24 pm Mangalore Correspondent ಕರಾವಳಿ
ಮಂಗಳೂರು, ಎ.30: ಇನ್ನೊಂದು ಬೈಕನ್ನು ಓವರ್ ಟೇಕ್ ಮಾಡುವ ಧಾವಂತದಲ್ಲಿ ಬೈಕ್ ಸವಾರನೊಬ್ಬ ಆಯತಪ್ಪಿ ರಸ್ತೆಗೆ ಬಿದ್ದಿದ್ದು ಆತನ ಮೇಲಿನಿಂದಲೇ ಟ್ಯಾಂಕರ್ ಹರಿದು ಯುವಕ ಸ್ಥಳದಲ್ಲೇ ದಾರುಣ ಸಾವು ಕಂಡ ಘಟನೆ ನಗರದ ನಂತೂರಿನಲ್ಲಿ ನಡೆದಿದೆ.
ಕೇರಳದ ಕೊಟ್ಟಾಯಂ ಜಿಲ್ಲೆಯ ನಿವಾಸಿ ಸೆಬಾಲ್ಟನ್ ಜಾನ್(21) ಮೃತ ಯುವಕ. ಈತ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಮೂರನೇ ವರ್ಷದ ಹೊಟೇಲ್ ಮ್ಯಾನೇಜ್ಮೆಂಟ್ ವ್ಯಾಸಂಗ ಮಾಡುತ್ತಿದ್ದ. ಜಾನ್ ಬೈಕಿನಲ್ಲಿ ನಂತೂರು ಸರ್ಕಲ್ ದಾಟಿ ಮುಂದೆ ಹೋಗುತ್ತಿದ್ದಾಗ ಬುಲೆಟ್ ಬೈಕನ್ನು ಓವರ್ ಟೇಕ್ ಮಾಡಲು ಯತ್ನಿಸಿದ್ದಾನೆ. ಎರಡು ಬೈಕುಗಳ ಧಾವಂತದಲ್ಲಿ ಜಾನ್ ಚಲಾಯಿಸುತ್ತಿದ್ದ ಪಲ್ಸರ್ ಬೈಕ್ ಬುಲೆಟ್ ಬೈಕಿಗೆ ತಾಗಿ ನೆಲಕ್ಕುರುಳಿದ್ದು ಅದರಲ್ಲಿದ್ದ ಜಾನ್ ರಸ್ತೆಗೆ ಬೀಳುತ್ತಲೇ ಪಕ್ಕದಲ್ಲಿ ಸಾಗುತ್ತಿದ್ದ ಟ್ಯಾಂಕರ್ ಆತನ ಮೇಲೆ ಹರಿದು ಹೋಗಿದೆ.

ಎರಡೂ ಬೈಕುಗಳು ನೆಲಕ್ಕೆ ಬಿದ್ದಿದ್ದು ಬುಲೆಟ್ ಬೈಕ್ ಸವಾರನಿಗೂ ರಸ್ತೆಗೆ ಬಿದ್ದು ಗಾಯಗಳಾಗಿವೆ. ಆದರೆ ಆತ ಹೆಲ್ಮೆಟ್ ಹಾಕಿದ್ದರಿಂದ ಹೆಚ್ಚೇನೂ ಅಪಾಯ ಆಗಿಲ್ಲ. ಪಲ್ಸರ್ ಬೈಕಿನಲ್ಲಿದ್ದವರು ಹೆಲ್ಮೆಟ್ ಹಾಕ್ಕೊಂಡಿರಲಿಲ್ಲ. ಜಾನ್ ತನ್ನ ಹೆಲ್ಮೆಟನ್ನು ಕೈಗೆ ಸಿಕ್ಕಿಸಿಕೊಂಡಿದ್ದ. ರಸ್ತೆಗೆ ಬಿದ್ದ ಯುವಕನ ತಲೆಯ ಭಾಗದಿಂದಲೇ ಟ್ಯಾಂಕರ್ ಲಾರಿಯ ಮುಂದಿನ ಚಕ್ರ ಹರಿದಿದೆ ಎಂದು ಕದ್ರಿ ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ. ಜಾನ್ ಹಿಂಬದಿ ಕುಳಿತಿದ್ದ ಅಂಥೋನಿ ಎಂಬಾತನಿಗೂ ಅಪಘಾತದಲ್ಲಿ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾನೆ. ಶುಕ್ರವಾರ ಸಂಜೆ ನಾಲ್ಕು ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಏಕಮುಖದ ರಸ್ತೆಯಲ್ಲಿ ಎರಡು ಬೈಕುಗಳ ಅತಿವೇಗದ ಚಾಲನೆಯಿಂದಲೇ ಅಪಘಾತ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Mangalore accident 21 year college student dies on spot after tanker truck goes on him at Nantoor. The deceased has been ide identified as John. He was pursing his hotel management course in Mangalore.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm