ಬ್ರೇಕಿಂಗ್ ನ್ಯೂಸ್
30-04-22 03:24 pm Mangalore Correspondent ಕರಾವಳಿ
ಮಂಗಳೂರು, ಎ.30: ಇನ್ನೊಂದು ಬೈಕನ್ನು ಓವರ್ ಟೇಕ್ ಮಾಡುವ ಧಾವಂತದಲ್ಲಿ ಬೈಕ್ ಸವಾರನೊಬ್ಬ ಆಯತಪ್ಪಿ ರಸ್ತೆಗೆ ಬಿದ್ದಿದ್ದು ಆತನ ಮೇಲಿನಿಂದಲೇ ಟ್ಯಾಂಕರ್ ಹರಿದು ಯುವಕ ಸ್ಥಳದಲ್ಲೇ ದಾರುಣ ಸಾವು ಕಂಡ ಘಟನೆ ನಗರದ ನಂತೂರಿನಲ್ಲಿ ನಡೆದಿದೆ.
ಕೇರಳದ ಕೊಟ್ಟಾಯಂ ಜಿಲ್ಲೆಯ ನಿವಾಸಿ ಸೆಬಾಲ್ಟನ್ ಜಾನ್(21) ಮೃತ ಯುವಕ. ಈತ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಮೂರನೇ ವರ್ಷದ ಹೊಟೇಲ್ ಮ್ಯಾನೇಜ್ಮೆಂಟ್ ವ್ಯಾಸಂಗ ಮಾಡುತ್ತಿದ್ದ. ಜಾನ್ ಬೈಕಿನಲ್ಲಿ ನಂತೂರು ಸರ್ಕಲ್ ದಾಟಿ ಮುಂದೆ ಹೋಗುತ್ತಿದ್ದಾಗ ಬುಲೆಟ್ ಬೈಕನ್ನು ಓವರ್ ಟೇಕ್ ಮಾಡಲು ಯತ್ನಿಸಿದ್ದಾನೆ. ಎರಡು ಬೈಕುಗಳ ಧಾವಂತದಲ್ಲಿ ಜಾನ್ ಚಲಾಯಿಸುತ್ತಿದ್ದ ಪಲ್ಸರ್ ಬೈಕ್ ಬುಲೆಟ್ ಬೈಕಿಗೆ ತಾಗಿ ನೆಲಕ್ಕುರುಳಿದ್ದು ಅದರಲ್ಲಿದ್ದ ಜಾನ್ ರಸ್ತೆಗೆ ಬೀಳುತ್ತಲೇ ಪಕ್ಕದಲ್ಲಿ ಸಾಗುತ್ತಿದ್ದ ಟ್ಯಾಂಕರ್ ಆತನ ಮೇಲೆ ಹರಿದು ಹೋಗಿದೆ.

ಎರಡೂ ಬೈಕುಗಳು ನೆಲಕ್ಕೆ ಬಿದ್ದಿದ್ದು ಬುಲೆಟ್ ಬೈಕ್ ಸವಾರನಿಗೂ ರಸ್ತೆಗೆ ಬಿದ್ದು ಗಾಯಗಳಾಗಿವೆ. ಆದರೆ ಆತ ಹೆಲ್ಮೆಟ್ ಹಾಕಿದ್ದರಿಂದ ಹೆಚ್ಚೇನೂ ಅಪಾಯ ಆಗಿಲ್ಲ. ಪಲ್ಸರ್ ಬೈಕಿನಲ್ಲಿದ್ದವರು ಹೆಲ್ಮೆಟ್ ಹಾಕ್ಕೊಂಡಿರಲಿಲ್ಲ. ಜಾನ್ ತನ್ನ ಹೆಲ್ಮೆಟನ್ನು ಕೈಗೆ ಸಿಕ್ಕಿಸಿಕೊಂಡಿದ್ದ. ರಸ್ತೆಗೆ ಬಿದ್ದ ಯುವಕನ ತಲೆಯ ಭಾಗದಿಂದಲೇ ಟ್ಯಾಂಕರ್ ಲಾರಿಯ ಮುಂದಿನ ಚಕ್ರ ಹರಿದಿದೆ ಎಂದು ಕದ್ರಿ ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ. ಜಾನ್ ಹಿಂಬದಿ ಕುಳಿತಿದ್ದ ಅಂಥೋನಿ ಎಂಬಾತನಿಗೂ ಅಪಘಾತದಲ್ಲಿ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾನೆ. ಶುಕ್ರವಾರ ಸಂಜೆ ನಾಲ್ಕು ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಏಕಮುಖದ ರಸ್ತೆಯಲ್ಲಿ ಎರಡು ಬೈಕುಗಳ ಅತಿವೇಗದ ಚಾಲನೆಯಿಂದಲೇ ಅಪಘಾತ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Mangalore accident 21 year college student dies on spot after tanker truck goes on him at Nantoor. The deceased has been ide identified as John. He was pursing his hotel management course in Mangalore.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 02:14 pm
HK News Staffer
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm