ಬ್ರೇಕಿಂಗ್ ನ್ಯೂಸ್
02-05-22 08:39 pm Mangalore Correspondent ಕರಾವಳಿ
ಮಂಗಳೂರು, ಮೇ 2: ಪುನೀತ್ ರಾಜಕುಮಾರ್ ಹೆಸರಲ್ಲಿ ಮಂಗಳೂರು ಪೊಲೀಸ್ ಕಮಿಷನರೇಟ್ ವತಿಯಿಂದ ಅಪ್ಪು ಸ್ಮರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಚಿತ್ರನಟ ಶಿವರಾಜ್ ಕುಮಾರ್ ಪೊಲೀಸರೊಂದಿಗೆ ಹಾಡಿಗೆ ಹೆಜ್ಜೆ ಹಾಕಿದ್ದಲ್ಲದೆ, ಪೊಲೀಸ್ ಕಮಿಷನರ್ ಶಶಿಕುಮಾರ್ ಟಗರು ಚಿತ್ರದ ಹಾಡಿಗೆ ಭರ್ಜರಿ ಸ್ಟೆಪ್ಸ್ ಹಾಕಿ ಕುಣಿದು ಕುಪ್ಪಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಿವರಾಜ್ ಕುಮಾರ್ ಮತ್ತು ಗೀತಾ ದಂಪತಿಯನ್ನು ಪೊಲೀಸ್ ಕಮಿಷನರ್ ಶಶಿಕುಮಾರ್ ಸನ್ಮಾನಿಸಿದರು. ಇದೇ ವೇಳೆ ಮಾತನಾಡಿದ ಶಿವಣ್ಣ, ಅಪ್ಪುವನ್ನು ಕಳೆದುಕೊಂಡಿದ್ದನ್ನು ನಮ್ಮ ಕುಟುಂಬ ಮಾತ್ರವಲ್ಲ, ಇಡೀ ರಾಜ್ಯದ ಜನ ಮರೆಯಲ್ಲ. ಅಪ್ಪು ಇಲ್ಲ ಎಂದು ಕೊರಗುವುದಕ್ಕಿಂತ ಆತ ನಮ್ಮ ಜೊತೆಗೇ ಇದ್ದಾನೆಂದು ಸಂಭ್ರಮಿಸಬೇಕು. ಪುನೀತ್ ಹುಟ್ಟುವಾಗಲೇ ಸೂಪರ್ ಸ್ಟಾರ್ ಆಗಿಯೇ ಎದ್ದು ಬಂದಿದ್ದ. ಆರು ತಿಂಗಳಲ್ಲೇ ಪ್ರೇಮದ ಕಾಣಿಕೆ ಚಿತ್ರದಲ್ಲಿ ಕಾಣಿಸಿಕೊಂಡಿದ್ದ. ಆನಂತರ ಜೀವನದುದ್ದಕ್ಕೂ ಸೂಪರ್ ಸ್ಟಾರ್ ಆಗಿಯೇ ಇದ್ದ. ಮಾನವೀಯತೆ ಎನ್ನುವ ಪದಕ್ಕೆ ಆತ ಅನ್ವರ್ಥ ಆಗಿದ್ದ. ಆತ ತನ್ನ ಜೀವನದಲ್ಲಿ ಇಷ್ಟೆಲ್ಲ ಸಾಧನೆ, ಮಾನವೀಯ ಕಾರ್ಯಗಳನ್ನು ಮಾಡಿದ್ದಾನೆಂದು ಆತ ಜೀವಂತ ಇರುವಾಗ ತಿಳಿದಿರಲಿಲ್ಲ. ಆತ ಇಲ್ಲವಾದಾಗಲೇ ತಿಳಿದಿದ್ದು ಎಂದು ಹೇಳಿದರು.



ಮಂಗಳೂರು ಅಂದರೆ ನನಗೆ ತುಂಬ ಇಷ್ಟದ ಊರು. ಅಪ್ಪಾಜಿಯನ್ನು ಬಿಟ್ಟರೆ ನಮ್ಮ ಕುಟುಂಬದಲ್ಲಿ ನಾನು ನಟಿಸಿರುವ ಹೆಚ್ಚಿನ ಚಿತ್ರಗಳು ಇಲ್ಲಿಯೇ ಚಿತ್ರೀಕರಣ ಆಗಿದ್ದವು. ಮುಂದಿನ ಬಾರಿ ಮಂಗಳೂರಿನಲ್ಲಿಯೇ ಅಪ್ಪು ಸೆಲೆಬ್ರೇಶನ್ ಮಾಡೋಣ ಎಂದು ಶಿವಣ್ಣ ಹೇಳಿದಾಗ ಸಭೆಯಲ್ಲಿ ಚಪ್ಪಾಳೆ ಕೇಳಿಬಂತು. ಇದೇ ವೇಳೆ ಪೊಲೀಸರು ಕೇಳಿದ ವಿವಿಧ ರೀತಿಯ ಪ್ರಶ್ನೆಗಳಿಗೂ ಶಿವಣ್ಣ ಉತ್ತರಿಸಿದರು.


ತವರಿಗೆ ಬಾ ತಂಗಿ, ಅಣ್ಣ ತಂಗಿ ರೀತಿಯ ಚಿತ್ರಗಳು ಮತ್ತೆ ಬರುವ ಸಾಧ್ಯತೆ ಇದೆಯೇ ಎಂಬ ಪೊಲೀಸ್ ಸಿಬಂದಿ ಪ್ರಶ್ನೆಗೆ, ಈ ಮೂರೂ ಚಿತ್ರಗಳ ಕತೆಗಳು ಸಮ್ಮಿಳಿತವಾಗಿರುವ ಚಿತ್ರಕತೆಯೊಂದು ರೆಡಿಯಾಗಿದೆ. ಅದಕ್ಕೆ ತಂಗಿಗಾಗಿ ಹುಡುಕಾಟ ನಡೆಸುತ್ತಿದ್ದೇನೆ ಎಂದು ಶಿವಣ್ಣ ಸುಳಿವು ಬಿಟ್ಟುಕೊಟ್ಟರು. ಚಿತ್ರಗಳಲ್ಲಿ ರೌಡಿಸಂ ಪಾತ್ರಗಳ ವೈಭವೀಕರಣ ಆಗುತ್ತಿರುವ ಬಗ್ಗೆ ನಿಮ್ಮ ಅಭಿಪ್ರಾಯವೇನು ಎಂದಿದ್ದಕ್ಕೆ, ರೌಡಿಸಂ ಇದ್ದರೇನೇ ನಿಮಗೆ ಕೆಲಸ ಅಲ್ವಾ ಎಂದು ನಗೆಚಟಾಕಿ ಹಾರಿಸಿದರು. ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಶಿವರಾಜಕುಮಾರ್, ಬೈರಾಗಿ ಚಿತ್ರ ಶೀಘ್ರದಲ್ಲೇ ತೆರೆಗೆ ಬರಲಿದೆ. ನಾನು ಮತ್ತು ಪ್ರಭುದೇವ ಜೊತೆಯಾಗಿ ನಟಿಸಿರುವ ಯೋಗರಾಜ್ ಭಟ್ಟರ ಚಿತ್ರ ರೆಡಿಯಾಗುತ್ತಿದೆ ಎಂದು ಹೇಳಿದರು.
Mangaluru Police had an interaction session with Dr Shivarajkumar held at SCDCC bank on Monday,May 2, 2022. Hattrick hero Dr Shivrajkumar along with other dignitaries paid tribute to late Puneeth Rajkumar.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am