ಬ್ರೇಕಿಂಗ್ ನ್ಯೂಸ್
04-05-22 09:13 pm Mangalore Correspondent ಕರಾವಳಿ
ಬಂಟ್ವಾಳ, ಮೇ 4: ಮುಸ್ಲಿಂ ಯುವಕನ ಪ್ರೇಮ ಪಾಶಕ್ಕೆ ಬಿದ್ದ ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮನೆಯವರು ಬೈದ ಕಾರಣಕ್ಕೆ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಠಾಣೆ ವ್ಯಾಪ್ತಿಯ ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ನಡೆದಿದೆ.
ಮೂಲತಃ ಸುಳ್ಯ ತಾಲೂಕಿನ ಪಂಜ ಮೂಲದ ಪರಿಶಿಷ್ಟ ವರ್ಗಕ್ಕೆ ಸೇರಿದ ಸಂಜೀವ ಎಂಬವರ ಕುಟುಂಬ ಕನ್ಯಾನ ಗ್ರಾಮದ ಕಣಿಯೂರಿನ ಮಸೀದಿ ಹಿಂಭಾಗದ ಬಾಡಿಗೆ ಮನೆಯಲ್ಲಿ ನೆಲೆಸಿತ್ತು. ಇಂದು ಬೆಳಗ್ಗೆ ತಂದೆ- ತಾಯಿ ಕೂಲಿ ಕೆಲಸಕ್ಕೆ ಹೋಗಿದ್ದಾಗ, ಮಗಳು 15 ವರ್ಷದ ಮಗಳು ಆತ್ಮಿಕಾ ಮನೆಯಲ್ಲಿ ನೇಣು ಬಿಗಿದು ಸಾವಿಗೆ ಶರಣಾಗಿದ್ದಾಳೆ. ಈ ಬಗ್ಗೆ ಸಂಜೀವ ವಿಟ್ಲ ಠಾಣೆಗೆ ನೀಡಿರುವ ದೂರಿನಲ್ಲಿ ಆಕೆಯ ಪ್ರೀತಿಯ ವಿಚಾರ ತಿಳಿಸಿದ್ದಾರೆ.
ಹತ್ತನೇ ತರಗತಿ ಓದುತ್ತಿದ್ದ ಬಾಲಕಿಯನ್ನು ಸಾಲೆತ್ತೂರು ತಲೆಕ್ಕಿ ನಿವಾಸಿ ಸಾಹುಲ್ ಹಮೀದ್ ಎಂಬಾತ ಪ್ರೀತಿಸುತ್ತಿದ್ದು, ಮನೆ ಬಿಟ್ಟು ತನ್ನ ಜೊತೆ ಬರುವಂತೆ ಪೀಡಿಸುತ್ತಿದ್ದ. ಮನೆಯಲ್ಲಿ ತಂದೆ-ತಾಯಿ ಇಲ್ಲದ ವೇಳೆ ಬಂದು ತನ್ನನ್ನು ಪ್ರೀತಿಸುವಂತೆ ಮತ್ತು ತನ್ನ ಜೊತೆ ಮನೆಯವರನ್ನು ಬಿಟ್ಟು ಬರುಂತೆ ಒತ್ತಾಯ ಪಡಿಸಿದ್ದ. ಈ ಬಗ್ಗೆ ವಿಷಯ ತಿಳಿದ ಹೆತ್ತವರು ಮಗಳಿಗೆ ಬುದ್ಧಿ ಹೇಳಿದ್ದಲ್ಲದೆ, ಸಾಹುಲ್ ನನ್ನು ಪ್ರೀತಿಸದಂತೆ ತಡೆಯೊಡ್ದಿದ್ದರು. ಅದಕ್ಕೆ ನನ್ನ ಜೊತೆ ಬರದಿದ್ದರೆ, ಅಲ್ಲಿಯೇ ಸಾಯುವಂತೆ ಸಾಹುಲ್ ಹೇಳಿದ್ದಾಗಿ ಮಗಳು ಹೆತ್ತವರಲ್ಲಿ ಹೇಳಿದ್ದಳು. ಇದರಿಂದಾಗಿ ಆತನ ದುಷ್ಪ್ರೇರಣೆಯಿಂದ ಮಗಳು ಸಾವಿಗೆ ಶರಣಾಗಿದ್ದಾಳೆ ಎಂದು ತಂದೆ ದೂರಿದ್ದಾರೆ. ಇದರ ನಡುವೆ, ಸಾಹುಲ್ ಹಮೀದ್ ಮತ್ತು ಆತನ ಅಣ್ಣನನ್ನು ಕರೆದು ಸಂಜೀವ ಅವರು ಎಚ್ಚರಿಕೆಯನ್ನೂ ನೀಡಿದ್ದರು. ವಿಟ್ಲ ಪೊಲೀಸರು ಜಾತಿ ನಿಂದನೆ ಮತ್ತು ಆತ್ಮಹತ್ಯೆಗೆ ಪ್ರಚೋದನೆ ಎಂದು ಪ್ರಕರಣ ದಾಖಲಿಸಿದ್ದಾರೆ.
Mangalore Sslc girl commits suicide at her house as parents reject her love for Muslim boy at Vitla. She was said to be of 15 years old.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am