ಬ್ರೇಕಿಂಗ್ ನ್ಯೂಸ್
04-05-22 09:13 pm Mangalore Correspondent ಕರಾವಳಿ
ಬಂಟ್ವಾಳ, ಮೇ 4: ಮುಸ್ಲಿಂ ಯುವಕನ ಪ್ರೇಮ ಪಾಶಕ್ಕೆ ಬಿದ್ದ ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮನೆಯವರು ಬೈದ ಕಾರಣಕ್ಕೆ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಠಾಣೆ ವ್ಯಾಪ್ತಿಯ ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ನಡೆದಿದೆ.
ಮೂಲತಃ ಸುಳ್ಯ ತಾಲೂಕಿನ ಪಂಜ ಮೂಲದ ಪರಿಶಿಷ್ಟ ವರ್ಗಕ್ಕೆ ಸೇರಿದ ಸಂಜೀವ ಎಂಬವರ ಕುಟುಂಬ ಕನ್ಯಾನ ಗ್ರಾಮದ ಕಣಿಯೂರಿನ ಮಸೀದಿ ಹಿಂಭಾಗದ ಬಾಡಿಗೆ ಮನೆಯಲ್ಲಿ ನೆಲೆಸಿತ್ತು. ಇಂದು ಬೆಳಗ್ಗೆ ತಂದೆ- ತಾಯಿ ಕೂಲಿ ಕೆಲಸಕ್ಕೆ ಹೋಗಿದ್ದಾಗ, ಮಗಳು 15 ವರ್ಷದ ಮಗಳು ಆತ್ಮಿಕಾ ಮನೆಯಲ್ಲಿ ನೇಣು ಬಿಗಿದು ಸಾವಿಗೆ ಶರಣಾಗಿದ್ದಾಳೆ. ಈ ಬಗ್ಗೆ ಸಂಜೀವ ವಿಟ್ಲ ಠಾಣೆಗೆ ನೀಡಿರುವ ದೂರಿನಲ್ಲಿ ಆಕೆಯ ಪ್ರೀತಿಯ ವಿಚಾರ ತಿಳಿಸಿದ್ದಾರೆ.
ಹತ್ತನೇ ತರಗತಿ ಓದುತ್ತಿದ್ದ ಬಾಲಕಿಯನ್ನು ಸಾಲೆತ್ತೂರು ತಲೆಕ್ಕಿ ನಿವಾಸಿ ಸಾಹುಲ್ ಹಮೀದ್ ಎಂಬಾತ ಪ್ರೀತಿಸುತ್ತಿದ್ದು, ಮನೆ ಬಿಟ್ಟು ತನ್ನ ಜೊತೆ ಬರುವಂತೆ ಪೀಡಿಸುತ್ತಿದ್ದ. ಮನೆಯಲ್ಲಿ ತಂದೆ-ತಾಯಿ ಇಲ್ಲದ ವೇಳೆ ಬಂದು ತನ್ನನ್ನು ಪ್ರೀತಿಸುವಂತೆ ಮತ್ತು ತನ್ನ ಜೊತೆ ಮನೆಯವರನ್ನು ಬಿಟ್ಟು ಬರುಂತೆ ಒತ್ತಾಯ ಪಡಿಸಿದ್ದ. ಈ ಬಗ್ಗೆ ವಿಷಯ ತಿಳಿದ ಹೆತ್ತವರು ಮಗಳಿಗೆ ಬುದ್ಧಿ ಹೇಳಿದ್ದಲ್ಲದೆ, ಸಾಹುಲ್ ನನ್ನು ಪ್ರೀತಿಸದಂತೆ ತಡೆಯೊಡ್ದಿದ್ದರು. ಅದಕ್ಕೆ ನನ್ನ ಜೊತೆ ಬರದಿದ್ದರೆ, ಅಲ್ಲಿಯೇ ಸಾಯುವಂತೆ ಸಾಹುಲ್ ಹೇಳಿದ್ದಾಗಿ ಮಗಳು ಹೆತ್ತವರಲ್ಲಿ ಹೇಳಿದ್ದಳು. ಇದರಿಂದಾಗಿ ಆತನ ದುಷ್ಪ್ರೇರಣೆಯಿಂದ ಮಗಳು ಸಾವಿಗೆ ಶರಣಾಗಿದ್ದಾಳೆ ಎಂದು ತಂದೆ ದೂರಿದ್ದಾರೆ. ಇದರ ನಡುವೆ, ಸಾಹುಲ್ ಹಮೀದ್ ಮತ್ತು ಆತನ ಅಣ್ಣನನ್ನು ಕರೆದು ಸಂಜೀವ ಅವರು ಎಚ್ಚರಿಕೆಯನ್ನೂ ನೀಡಿದ್ದರು. ವಿಟ್ಲ ಪೊಲೀಸರು ಜಾತಿ ನಿಂದನೆ ಮತ್ತು ಆತ್ಮಹತ್ಯೆಗೆ ಪ್ರಚೋದನೆ ಎಂದು ಪ್ರಕರಣ ದಾಖಲಿಸಿದ್ದಾರೆ.
Mangalore Sslc girl commits suicide at her house as parents reject her love for Muslim boy at Vitla. She was said to be of 15 years old.
02-05-25 01:40 pm
Bangalore Correspondent
Dinesh Gundu Rao, Suhas Shetty Murder: ಸುಹಾಸ್...
02-05-25 10:52 am
Jan Dhan Scheme: ಜನಧನ್ ಖಾತೆ ಬಗ್ಗೆ ಜನರ ನಿರಾಸಕ್...
01-05-25 01:48 pm
Dk Suresh, Pavitra, wife Video: ಡಿ.ಕೆ ಬ್ರದರ್...
01-05-25 01:08 pm
MA Saleem, DGP-IGP, Prashanth Thakur, Police:...
30-04-25 05:08 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
02-05-25 03:10 pm
Mangalore Correspondent
Udupi crime, Attempt, Suhas Shetty Murder: ಉಡ...
02-05-25 12:44 pm
Suhas Shetty Murder, Liquor Ban: ಸುಹಾಸ್ ಶೆಟ್ಟ...
02-05-25 12:23 pm
Suhas Shetty Murder, Bajpe, Mangalore: ಟಾರ್ಗೆ...
02-05-25 03:52 am
Suhas Shetty murder, Mangalore Bandh: ಸುಹಾಸ್...
02-05-25 03:29 am
02-05-25 12:00 pm
Mangalore Correspondent
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm