ಬ್ರೇಕಿಂಗ್ ನ್ಯೂಸ್
25-09-20 06:19 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 25: ಡ್ರಗ್ ನಂಟಿನ ಹಿನ್ನೆಲೆಯಲ್ಲಿ ವಿಚಾರಣೆಗೆ ಬರುವಂತೆ ನೋಟೀಸ್ ಪಡೆದಿದ್ದ ನಿರೂಪಕಿ ಅನುಶ್ರೀ ಇಂದೇ ವಿಚಾರಣೆಗೆ ಹಾಜರಾಗ್ತೀನಿ ಎಂದು ಹೇಳಿ ಮಂಗಳೂರಿನಲ್ಲಿ ಕಣ್ಣು ಮುಚ್ಚಾಲೆ ಆಡಿಸಿದ್ದಾಳೆ. ಪೊಲೀಸರು ಮತ್ತು ಮಾಧ್ಯಮ ಮಂದಿಯನ್ನು ಇಡೀ ದಿನ ತುದಿಗಾಲಲ್ಲಿ ನಿಲ್ಲುವಂತೆ ಮಾಡಿ ಯಾಮಾರಿಸಿದ್ದಾಳೆ.
ಅನುಶ್ರೀಗೆ ಮಂಗಳೂರು ಪೊಲೀಸರು ನಿನ್ನೆಯಷ್ಟೇ ವಿಚಾರಣೆಗೆ ಬರುವಂತೆ ನೋಟೀಸ್ ನೀಡಿದ್ದರು. ಈ ಬಗ್ಗೆ ರಾತ್ರಿ ವೇಳೆಗೆ ನೋಟೀಸ್ ಸಿಕ್ಕಿರುವುದನ್ನು ದೃಢಪಡಿಸಿದ ಅನುಶ್ರೀ, ಮಾಧ್ಯಮಗಳಲ್ಲಿ ನಾಳೆಯೇ(ಶುಕ್ರವಾರ) ಮಂಗಳೂರಿಗೆ ಹೋಗ್ತೀನಿ. ಬೆಳಗ್ಗೆ 11 ಗಂಟೆಗೆ ಪೊಲೀಸರ ವಿಚಾರಣೆಗೆ ಹಾಜರಾಗ್ತೀನಿ ಎಂದಿದ್ದಳು. ಅದಲ್ಲದೆ, ಆ ಬಗ್ಗೆ ಒಂದು ಸುದೀರ್ಘ ಪತ್ರಿಕಾ ಹೇಳಿಕೆಯನ್ನೂ ನೀಡಿದ್ದಳು.
ಹೀಗಾಗಿ ಅನುಶ್ರೀ ಇಂದು ಬೆಳಗ್ಗೆ ಮಂಗಳೂರು ಕಮಿಷನರ್ ಕಚೇರಿಗೆ ಅಥವಾ ಎನ್ ಸಿಐಬಿ ಕಚೇರಿಗೆ ಬರಬಹುದು ಅಂದ್ಕೊಂಡಿದ್ದ ಪೊಲೀಸರು ಮತ್ತು ಮೀಡಿಯಾ ಮಂದಿ ಬೆಳಗ್ಗಿನಿಂದ ಕಣ್ಣಿಗೆ ಎಣ್ಣೆ ಬಿಟ್ಕೊಂಡು ಕಾದಿದ್ದೇ ಬಂತು. ಸಂಜೆವರೆಗೂ ಅನುಶ್ರೀ ಅತ್ತ ಸುಳಿಯಲೇ ಇಲ್ಲ. ಈ ಬಗ್ಗೆ ಪೊಲೀಸ್ ಅಧಿಕಾರಿಗಳ ಬಳಿ ಪ್ರಶ್ನಿಸಿದರೆ ಉತ್ತರಾನೇ ಇಲ್ಲ. ಹೀಗಾಗಿ ಅನುಶ್ರೀ ಶನಿವಾರ ಮಂಗಳೂರಿನ ಪೊಲೀಸರ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ.

ಪೊಲೀಸರು ನೀಡಿದ್ದ ನೋಟೀಸ್ ನಲ್ಲಿ ಶನಿವಾರದ ಒಳಗೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿತ್ತು. ಆದರೆ, ಅನುಶ್ರೀ ನಿನ್ನೆ ರಾತ್ರಿ ಪತ್ರಿಕಾ ಹೇಳಿಕೆ ನೀಡಿ ಶುಕ್ರವಾರವೇ ವಿಚಾರಣೆಗೆ ಬರ್ತೀನಿ.. ನಾನು ಯಾವುದೇ ತಪ್ಪು ಮಾಡಿಲ್ಲ. ನನಗೂ ಅವರಿಗೂ ಸಂಬಂಧಾನೇ ಇಲ್ಲ ಎಂದು ಬಡಾಯಿ ಬಿಟ್ಟಿದ್ದರು. ಹೀಗಾಗಿ ಇಂದು ಬೆಳಗ್ಗೆ ಅನುಶ್ರೀ ಬರುವಿಕೆ ಖಚಿತ ಎನ್ನಲಾಗಿತ್ತು. ಆದರೆ, ಸಂಜೆವರೆಗೂ ಕಾದ ಪೊಲೀಸರು ಮತ್ತು ಮಾಧ್ಯಮದ ಮಂದಿಗೆ ಅನುಶ್ರೀ ಕಾಣಸಿಗಲೇ ಇಲ್ಲ. ಎಲ್ಲಿದ್ದಾಳೆ, ಇಂದು ರಾತ್ರಿ ಬರಬಹುದಾ ಅಥವಾ ನಾಳೆ ಬರಬಹುದಾ ಅನ್ನೋದ್ರ ಬಗ್ಗೆನೂ ಖಚಿತತೆ ಇಲ್ಲ. ಬಂಧಿತ ಡ್ಯಾನ್ಸರ್ ಕಿಶೋರ್ ಆಪ್ತ ತರುಣ್ ಹೇಳಿಕೆ ಆಧರಿಸಿ, ಅನುಶ್ರೀಗೆ ನೋಟಿಸ್ ನೀಡಲಾಗಿತ್ತು.
ಮಂಗಳೂರಿನಲ್ಲಿ ಪಾರ್ಟಿ ಮಾಡಿಲ್ಲವಂತೆ !
ಇನ್ನು ಎನ್ ಸಿಬಿ ಅಧಿಕಾರಿಗಳ ಮಾಹಿತಿ ಪ್ರಕಾರ, ಕಿಶೋರ್ ಆಪ್ತ ತರುಣ್ ಗೆ ಅನುಶ್ರೀ ಜೊತೆ ಹತ್ತಿರದ ಸಂಬಂಧ ಇತ್ತಂತೆ. ಬೆಂಗಳೂರಿನಲ್ಲಿ ಜೊತೆಗೆ ಪಾರ್ಟಿ ಮಾಡಿದ್ದೂ ಇದೆಯಂತೆ. ಇನ್ನು ಮಂಗಳೂರಿನಲ್ಲಿ ಪಾರ್ಟಿ ಮಾಡಿದ್ದಾರೆ ಎನ್ನುವುದನ್ನು ಯಾರು ಕೂಡ ಹೇಳಿಲ್ಲ. ತರುಣ್, ಈ ಹಿಂದೆ ಕೊರಿಯೋಗ್ರಾಫರ್ ಆಗಿದ್ದರಿಂದ ಆಕೆ ಕರೆದಿದ್ದ ಪಾರ್ಟಿಗೆ ಹೋಗಿದ್ದ ಎಂದು ತಿಳಿಸಿದ್ದಾರೆ. ಕೆಲವು ಮಾಹಿತಿಗಳ ಸಂಗ್ರಹಕ್ಕಾಗಿ ಅನುಶ್ರೀಗೆ ನೋಟೀಸ್ ನೀಡಿದ್ದೇವೆ ಅಷ್ಟೇ ಎಂದಿದ್ದಾರೆ.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
08-05-26 10:33 pm
HK News Staffer
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm