ಬ್ರೇಕಿಂಗ್ ನ್ಯೂಸ್
25-09-20 06:19 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 25: ಡ್ರಗ್ ನಂಟಿನ ಹಿನ್ನೆಲೆಯಲ್ಲಿ ವಿಚಾರಣೆಗೆ ಬರುವಂತೆ ನೋಟೀಸ್ ಪಡೆದಿದ್ದ ನಿರೂಪಕಿ ಅನುಶ್ರೀ ಇಂದೇ ವಿಚಾರಣೆಗೆ ಹಾಜರಾಗ್ತೀನಿ ಎಂದು ಹೇಳಿ ಮಂಗಳೂರಿನಲ್ಲಿ ಕಣ್ಣು ಮುಚ್ಚಾಲೆ ಆಡಿಸಿದ್ದಾಳೆ. ಪೊಲೀಸರು ಮತ್ತು ಮಾಧ್ಯಮ ಮಂದಿಯನ್ನು ಇಡೀ ದಿನ ತುದಿಗಾಲಲ್ಲಿ ನಿಲ್ಲುವಂತೆ ಮಾಡಿ ಯಾಮಾರಿಸಿದ್ದಾಳೆ.
ಅನುಶ್ರೀಗೆ ಮಂಗಳೂರು ಪೊಲೀಸರು ನಿನ್ನೆಯಷ್ಟೇ ವಿಚಾರಣೆಗೆ ಬರುವಂತೆ ನೋಟೀಸ್ ನೀಡಿದ್ದರು. ಈ ಬಗ್ಗೆ ರಾತ್ರಿ ವೇಳೆಗೆ ನೋಟೀಸ್ ಸಿಕ್ಕಿರುವುದನ್ನು ದೃಢಪಡಿಸಿದ ಅನುಶ್ರೀ, ಮಾಧ್ಯಮಗಳಲ್ಲಿ ನಾಳೆಯೇ(ಶುಕ್ರವಾರ) ಮಂಗಳೂರಿಗೆ ಹೋಗ್ತೀನಿ. ಬೆಳಗ್ಗೆ 11 ಗಂಟೆಗೆ ಪೊಲೀಸರ ವಿಚಾರಣೆಗೆ ಹಾಜರಾಗ್ತೀನಿ ಎಂದಿದ್ದಳು. ಅದಲ್ಲದೆ, ಆ ಬಗ್ಗೆ ಒಂದು ಸುದೀರ್ಘ ಪತ್ರಿಕಾ ಹೇಳಿಕೆಯನ್ನೂ ನೀಡಿದ್ದಳು.
ಹೀಗಾಗಿ ಅನುಶ್ರೀ ಇಂದು ಬೆಳಗ್ಗೆ ಮಂಗಳೂರು ಕಮಿಷನರ್ ಕಚೇರಿಗೆ ಅಥವಾ ಎನ್ ಸಿಐಬಿ ಕಚೇರಿಗೆ ಬರಬಹುದು ಅಂದ್ಕೊಂಡಿದ್ದ ಪೊಲೀಸರು ಮತ್ತು ಮೀಡಿಯಾ ಮಂದಿ ಬೆಳಗ್ಗಿನಿಂದ ಕಣ್ಣಿಗೆ ಎಣ್ಣೆ ಬಿಟ್ಕೊಂಡು ಕಾದಿದ್ದೇ ಬಂತು. ಸಂಜೆವರೆಗೂ ಅನುಶ್ರೀ ಅತ್ತ ಸುಳಿಯಲೇ ಇಲ್ಲ. ಈ ಬಗ್ಗೆ ಪೊಲೀಸ್ ಅಧಿಕಾರಿಗಳ ಬಳಿ ಪ್ರಶ್ನಿಸಿದರೆ ಉತ್ತರಾನೇ ಇಲ್ಲ. ಹೀಗಾಗಿ ಅನುಶ್ರೀ ಶನಿವಾರ ಮಂಗಳೂರಿನ ಪೊಲೀಸರ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ.

ಪೊಲೀಸರು ನೀಡಿದ್ದ ನೋಟೀಸ್ ನಲ್ಲಿ ಶನಿವಾರದ ಒಳಗೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿತ್ತು. ಆದರೆ, ಅನುಶ್ರೀ ನಿನ್ನೆ ರಾತ್ರಿ ಪತ್ರಿಕಾ ಹೇಳಿಕೆ ನೀಡಿ ಶುಕ್ರವಾರವೇ ವಿಚಾರಣೆಗೆ ಬರ್ತೀನಿ.. ನಾನು ಯಾವುದೇ ತಪ್ಪು ಮಾಡಿಲ್ಲ. ನನಗೂ ಅವರಿಗೂ ಸಂಬಂಧಾನೇ ಇಲ್ಲ ಎಂದು ಬಡಾಯಿ ಬಿಟ್ಟಿದ್ದರು. ಹೀಗಾಗಿ ಇಂದು ಬೆಳಗ್ಗೆ ಅನುಶ್ರೀ ಬರುವಿಕೆ ಖಚಿತ ಎನ್ನಲಾಗಿತ್ತು. ಆದರೆ, ಸಂಜೆವರೆಗೂ ಕಾದ ಪೊಲೀಸರು ಮತ್ತು ಮಾಧ್ಯಮದ ಮಂದಿಗೆ ಅನುಶ್ರೀ ಕಾಣಸಿಗಲೇ ಇಲ್ಲ. ಎಲ್ಲಿದ್ದಾಳೆ, ಇಂದು ರಾತ್ರಿ ಬರಬಹುದಾ ಅಥವಾ ನಾಳೆ ಬರಬಹುದಾ ಅನ್ನೋದ್ರ ಬಗ್ಗೆನೂ ಖಚಿತತೆ ಇಲ್ಲ. ಬಂಧಿತ ಡ್ಯಾನ್ಸರ್ ಕಿಶೋರ್ ಆಪ್ತ ತರುಣ್ ಹೇಳಿಕೆ ಆಧರಿಸಿ, ಅನುಶ್ರೀಗೆ ನೋಟಿಸ್ ನೀಡಲಾಗಿತ್ತು.
ಮಂಗಳೂರಿನಲ್ಲಿ ಪಾರ್ಟಿ ಮಾಡಿಲ್ಲವಂತೆ !
ಇನ್ನು ಎನ್ ಸಿಬಿ ಅಧಿಕಾರಿಗಳ ಮಾಹಿತಿ ಪ್ರಕಾರ, ಕಿಶೋರ್ ಆಪ್ತ ತರುಣ್ ಗೆ ಅನುಶ್ರೀ ಜೊತೆ ಹತ್ತಿರದ ಸಂಬಂಧ ಇತ್ತಂತೆ. ಬೆಂಗಳೂರಿನಲ್ಲಿ ಜೊತೆಗೆ ಪಾರ್ಟಿ ಮಾಡಿದ್ದೂ ಇದೆಯಂತೆ. ಇನ್ನು ಮಂಗಳೂರಿನಲ್ಲಿ ಪಾರ್ಟಿ ಮಾಡಿದ್ದಾರೆ ಎನ್ನುವುದನ್ನು ಯಾರು ಕೂಡ ಹೇಳಿಲ್ಲ. ತರುಣ್, ಈ ಹಿಂದೆ ಕೊರಿಯೋಗ್ರಾಫರ್ ಆಗಿದ್ದರಿಂದ ಆಕೆ ಕರೆದಿದ್ದ ಪಾರ್ಟಿಗೆ ಹೋಗಿದ್ದ ಎಂದು ತಿಳಿಸಿದ್ದಾರೆ. ಕೆಲವು ಮಾಹಿತಿಗಳ ಸಂಗ್ರಹಕ್ಕಾಗಿ ಅನುಶ್ರೀಗೆ ನೋಟೀಸ್ ನೀಡಿದ್ದೇವೆ ಅಷ್ಟೇ ಎಂದಿದ್ದಾರೆ.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm