ಬ್ರೇಕಿಂಗ್ ನ್ಯೂಸ್
19-05-22 04:54 pm Mangalore Correspondent ಕರಾವಳಿ
ಉಳ್ಳಾಲ, ಮೇ 19 : ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಜೀರು ಗ್ರಾಮದ ಪಾಣೆಲ ನಾಗರಿಕರ ಬಹು ದಿನಗಳ ಸರಕಾರಿ ಬಸ್ಸಿನ ಬೇಡಿಕೆ ಈಡೇರಿದ್ದು ಮಾಜಿ ಸಚಿವ ಯು.ಟಿ.ಖಾದರ್ ನೂತನ ಬಸ್ಸಿಗೆ ಚಾಲನೆ ನೀಡುವುದರ ಜೊತೆಗೆ ಬಸ್ಸನ್ನು ಚಲಾಯಿಸಿ ಗಮನಸೆಳೆದರು.
ಪಜೀರು ಗ್ರಾಮದ ಪಾಣೆಲಕ್ಕೆ ಇಂದು ಬೆಳಗ್ಗೆ ಸರಕಾರಿ ಬಸ್ಸು ಓಡಾಟ ಪ್ರಾರಂಭಿಸಿದೆ. ಪಾಣೆಲ ಪ್ರದೇಶಕ್ಕೆ ಸರಕಾರಿ ಬಸ್ಸು ಒದಗಿಸುವಂತೆ ಸಾರಿಗೆ ಇಲಾಖೆಗೆ ಶಾಸಕ ಯು.ಟಿ.ಖಾದರ್ ಅವರು ಈ ಮೊದಲು ಸೂಚನೆ ನೀಡಿದಾಗ ರಸ್ತೆಯಲ್ಲಿ ದೊಡ್ಡ ಬಸ್ಸು ಸಂಚರಿಸುವ ಅವಕಾಶ ಇಲ್ಲದಿದ್ದರಿಂದ ಪಾಣೇಲ ಜನತೆಯ ಬಸ್ಸಿನ ಕನಸು ನನಸಾಗಿಯೇ ಉಳಿದಿತ್ತು. ಆದರೆ ಯು.ಟಿ.ಖಾದರ್ ಅಷ್ಟಕ್ಕೇ ಸುಮ್ಮನಿರದೇ ಸುಮಾರು ಒಂದೂವರೆ ಕೋಟಿ ರೂಪಾಯಿ ಅನುದಾನದಲ್ಲಿ ಗ್ರಾಮ ಚಾವಡಿ - ಪಜೀರು - ಪಾಣೇಲ - ಪಡೀಲ್ ರಸ್ತೆಯನ್ನು ಅಭಿವೃದ್ಧಿಪಡಿಸಿ ಮತ್ತೆ ಸಾರಿಗೆ ಇಲಾಖೆಗೆ ಬಸ್ಸು ಒದಗಿಸಲು ಸೂಚನೆ ನೀಡಿದರು.


ಇದೀಗ ಸಾರಿಗೆ ಇಲಾಖೆಯ ನೂತನ ಬಸ್ ಇಂದು ಬೆಳಗ್ಗೆ 06.30ಕ್ಕೆ ಮಂಗಳೂರು ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದಿಂದ ಹೊರಟು 7.45ಕ್ಕೆ ಪಾಣೇಲ ತಲುಪಿದ್ದು ಶಾಸಕ ಯು.ಟಿ.ಖಾದರ್ ಉಪಸ್ಥಿತಿಯಲ್ಲಿ ಹಿರಿಯರಾದ ವೆಂಕಪ್ಪ ಕಾಜವರವರು ಬಸ್ ಸಂಚಾರಕ್ಕೆ ಹಸಿರು ನಿಶಾನೆ ತೋರಿದ್ದಾರೆ.
ನೂತನ ಸರಕಾರಿ ಬಸ್ ಮಂಗಳೂರು- ತೊಕ್ಕೊಟ್ಟು-ದೇರಳಕಟ್ಟೆ- ಕೊಣಾಜೆ-ಗ್ರಾಮಚಾವಡಿ- ಪಜೀರು-ಪಾಣೇಲ- ಪಡೀಲು-ಬೋಳಿಯಾರು- ಕುರ್ನಾಡು-ಮಿತ್ತಕೋಡಿ ಮಾರ್ಗವಾಗಿ ಸಂಚರಿಸಿ ಮುಡಿಪು ತಲುಪಲಿದ್ದು ನಂತರ ಮುಡಿಪು ಬಿಟ್ಟು ಅದೇ ಮಾರ್ಗವಾಗಿ ಮಂಗಳೂರು ತಲುಪಲಿದೆ. ಬಸ್ಸು ಬೆಳಗ್ಗೆ ಮತ್ತು ಸಂಜೆ ತಲಾ ಎರಡು ಟ್ರಿಪ್ ಕಾರ್ಯಾಚರಿಸಲಿದೆ.
Mangalore to Pajir Govt Bus inaugurated by U T Khader, MLA drives the bus by himself and becomes a Bus Driver for a while.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am