ಬ್ರೇಕಿಂಗ್ ನ್ಯೂಸ್
19-05-22 04:54 pm Mangalore Correspondent ಕರಾವಳಿ
ಉಳ್ಳಾಲ, ಮೇ 19 : ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಜೀರು ಗ್ರಾಮದ ಪಾಣೆಲ ನಾಗರಿಕರ ಬಹು ದಿನಗಳ ಸರಕಾರಿ ಬಸ್ಸಿನ ಬೇಡಿಕೆ ಈಡೇರಿದ್ದು ಮಾಜಿ ಸಚಿವ ಯು.ಟಿ.ಖಾದರ್ ನೂತನ ಬಸ್ಸಿಗೆ ಚಾಲನೆ ನೀಡುವುದರ ಜೊತೆಗೆ ಬಸ್ಸನ್ನು ಚಲಾಯಿಸಿ ಗಮನಸೆಳೆದರು.
ಪಜೀರು ಗ್ರಾಮದ ಪಾಣೆಲಕ್ಕೆ ಇಂದು ಬೆಳಗ್ಗೆ ಸರಕಾರಿ ಬಸ್ಸು ಓಡಾಟ ಪ್ರಾರಂಭಿಸಿದೆ. ಪಾಣೆಲ ಪ್ರದೇಶಕ್ಕೆ ಸರಕಾರಿ ಬಸ್ಸು ಒದಗಿಸುವಂತೆ ಸಾರಿಗೆ ಇಲಾಖೆಗೆ ಶಾಸಕ ಯು.ಟಿ.ಖಾದರ್ ಅವರು ಈ ಮೊದಲು ಸೂಚನೆ ನೀಡಿದಾಗ ರಸ್ತೆಯಲ್ಲಿ ದೊಡ್ಡ ಬಸ್ಸು ಸಂಚರಿಸುವ ಅವಕಾಶ ಇಲ್ಲದಿದ್ದರಿಂದ ಪಾಣೇಲ ಜನತೆಯ ಬಸ್ಸಿನ ಕನಸು ನನಸಾಗಿಯೇ ಉಳಿದಿತ್ತು. ಆದರೆ ಯು.ಟಿ.ಖಾದರ್ ಅಷ್ಟಕ್ಕೇ ಸುಮ್ಮನಿರದೇ ಸುಮಾರು ಒಂದೂವರೆ ಕೋಟಿ ರೂಪಾಯಿ ಅನುದಾನದಲ್ಲಿ ಗ್ರಾಮ ಚಾವಡಿ - ಪಜೀರು - ಪಾಣೇಲ - ಪಡೀಲ್ ರಸ್ತೆಯನ್ನು ಅಭಿವೃದ್ಧಿಪಡಿಸಿ ಮತ್ತೆ ಸಾರಿಗೆ ಇಲಾಖೆಗೆ ಬಸ್ಸು ಒದಗಿಸಲು ಸೂಚನೆ ನೀಡಿದರು.


ಇದೀಗ ಸಾರಿಗೆ ಇಲಾಖೆಯ ನೂತನ ಬಸ್ ಇಂದು ಬೆಳಗ್ಗೆ 06.30ಕ್ಕೆ ಮಂಗಳೂರು ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದಿಂದ ಹೊರಟು 7.45ಕ್ಕೆ ಪಾಣೇಲ ತಲುಪಿದ್ದು ಶಾಸಕ ಯು.ಟಿ.ಖಾದರ್ ಉಪಸ್ಥಿತಿಯಲ್ಲಿ ಹಿರಿಯರಾದ ವೆಂಕಪ್ಪ ಕಾಜವರವರು ಬಸ್ ಸಂಚಾರಕ್ಕೆ ಹಸಿರು ನಿಶಾನೆ ತೋರಿದ್ದಾರೆ.
ನೂತನ ಸರಕಾರಿ ಬಸ್ ಮಂಗಳೂರು- ತೊಕ್ಕೊಟ್ಟು-ದೇರಳಕಟ್ಟೆ- ಕೊಣಾಜೆ-ಗ್ರಾಮಚಾವಡಿ- ಪಜೀರು-ಪಾಣೇಲ- ಪಡೀಲು-ಬೋಳಿಯಾರು- ಕುರ್ನಾಡು-ಮಿತ್ತಕೋಡಿ ಮಾರ್ಗವಾಗಿ ಸಂಚರಿಸಿ ಮುಡಿಪು ತಲುಪಲಿದ್ದು ನಂತರ ಮುಡಿಪು ಬಿಟ್ಟು ಅದೇ ಮಾರ್ಗವಾಗಿ ಮಂಗಳೂರು ತಲುಪಲಿದೆ. ಬಸ್ಸು ಬೆಳಗ್ಗೆ ಮತ್ತು ಸಂಜೆ ತಲಾ ಎರಡು ಟ್ರಿಪ್ ಕಾರ್ಯಾಚರಿಸಲಿದೆ.
Mangalore to Pajir Govt Bus inaugurated by U T Khader, MLA drives the bus by himself and becomes a Bus Driver for a while.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 10:43 am
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm