ಬ್ರೇಕಿಂಗ್ ನ್ಯೂಸ್
26-09-20 09:19 pm Mangaluru Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 26: ಸಮಾಜದಲ್ಲಿ ವ್ಯಾಪಕವಾಗಿ ಹರಡಿರುವ ಡ್ರಗ್ಸ್ ಮಾಫಿಯಾ ಹತ್ತಿಕ್ಕಲು ಸೂಕ್ತ ಕಾನೂನು ರೂಪಿಸಿ ರಾಜ್ಯವನ್ನು ಡ್ರಗ್ಸ್ ಮುಕ್ತ ಮಾಡಲು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜ್ಯಾದ್ಯಂತ ಪತ್ರ ಚಳುವಳಿ ನಡೆಸುತ್ತಿದೆ. ಇದರ ಅಂಗವಾಗಿ ಶನಿವಾರ ಬಂಟ್ವಾಳ ಶಾಖೆ ವತಿಯಿಂದ ಬಿ.ಸಿ.ರೋಡು ಹಾಗೂ ಸಿದ್ದಕಟ್ಟೆಯ ಅಂಚೆ ಕಚೇರಿ ಬಳಿ ಪತ್ರ ಚಳುವಳಿ ನಡೆಸಲಾಯಿತು.
ಮಾದಕ ವಸ್ತುಗಳ ಬಳಕೆ ಇಂದು ಸಮಾಜದ ಎಲ್ಲ ಕ್ಷೇತ್ರಗಳಲ್ಲಿ ವ್ಯಾಪಿಸಿದೆ. ಈ ಜಾಲಕ್ಕೆ ಪ್ರಮುಖವಾಗಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಯುವ ಸಮುದಾಯವೇ ಹೆಚ್ಚು ಬಲಿಯಾಗುತ್ತಿರುವುದು ಅಪಾಯಕಾರಿ ಸಂಗತಿ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಪ್ರಭಾವಿಗಳು ಭಾಗಿಯಾಗಿರುವ ಈ ಜಾಲವನ್ನು ಮಟ್ಟ ಹಾಕಬೇಕಿದೆ. ಅದಕ್ಕಾಗಿ ರಾಜ್ಯ ಸರಕಾರ ಪ್ರಬಲ ಕಾನೂನನ್ನು ರೂಪಿಸುವುದು ಮಾತ್ರ ಪರಿಹಾರ. ಸರ್ಕಾರ ನಿಷ್ಪಕ್ಷಪಾತ ತನಿಖೆ ಹಾಗೂ ಕಾನೂನನ್ನು ರೂಪಿಸಿ ಈ ದಂಧೆಯ ವಿರುದ್ಧ ಸಮರ ಸಾರಬೇಕೆಂದು ಎಬಿವಿಪಿ ಪತ್ರ ಚಳುವಳಿ ಮೂಲಕ ಆಗ್ರಹಿಸಿತು.

ಪತ್ರವನ್ನು ಮುಖ್ಯಮಂತ್ರಿಗಳ ವಿಳಾಸಕ್ಕೆ ಕಳುಹಿಸಿಕೊಡಲಾಯಿತು. ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಸಂಚಾಲಕರಾದ ಹರ್ಷಿತ್ ಕೊಯಿಲ, ಸಹ ಸಂಚಾಲಕರಾದ ದಿನೇಶ್ ಕೊಯಿಲ, ನಗರ ಕಾರ್ಯದರ್ಶಿ ಅಖಿಲಾಷ್, ಕಾಲೇಜು ಘಟಕದ ಅಧ್ಯಕ್ಷರಾದ ಗುರುಪ್ರಸಾದ್ ಸಿದ್ದಕಟ್ಟೆ, ನಗರ ಸಹ ಕಾರ್ಯದರ್ಶಿಗಳಾದ ನಾಗರಾಜ್ ಶೆಣೈ , ಗಗನ್ ,ಪ್ರಶಾಂತ್ ಅಜ್ಜಿಬೆಟ್ಟು ಮುಂತಾದವರು ಉಪಸ್ಥಿತರಿದ್ದರು.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm