ಬ್ರೇಕಿಂಗ್ ನ್ಯೂಸ್
26-09-20 10:50 pm Mangaluru Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 26: ಕೊರೊನಾ ಸೋಂಕು ನಿಯಂತ್ರಣಕ್ಕೆ ಹೊರಗೆ ಓಡಾಡುವ ಮಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು ಎಂಬ ನಿಯಮ ಇದೆ. ಆದರೆ, ಈ ಕಾನೂನನ್ನು ಪಾಲನೆ ಮಾಡುವ ಮಂದಿ ಬೆರಳೆಣಿಕೆ ಜನ ಮಾತ್ರ. ಹೆಚ್ಚಿನ ಜನ ಮಾಸ್ಕ್ ಇಲ್ಲದೇ, ಧರಿಸಿದರೂ ಮೂಗು, ಬಾಯಿ ಬಿಟ್ಟುಕೊಂಡು ಓಡಾಡುತ್ತಾರೆ. ಮಾರುಕಟ್ಟೆ, ಜನಜಂಗುಳಿ ಇರುವಲ್ಲೂ ಇದೇ ಕತೆ. ಈ ಕಾರಣದಿಂದಾಗಿಯೇ ಮಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ ಎಂದು ಜಿಲ್ಲಾಧಿಕಾರಿ ಗರಂ ಆಗಿದ್ದಾರೆ.



ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಸೂಚನೆ ಮೇರೆಗೆ ಮಂಗಳೂರು ಮಹಾನಗರ ಪಾಲಿಕೆಯ ಆರೋಗ್ಯಧಿಕಾರಿಗಳು ಪೊಲೀಸರ ಜೊತೆಗೆ ಫೀಲ್ಡಿಗೆ ಇಳಿದಿದ್ದಾರೆ. ರಸ್ತೆಯಲ್ಲಿ ಓಡಾಡುವ ಮಂದಿ ಮತ್ತು ದ್ವಿಚಕ್ರ ವಾಹನಗಳಲ್ಲಿ ಪ್ರಯಾಣಿಸುವ ಜನರನ್ನು ನಿಲ್ಲಿಸಿ ದಂಡ ಸಂಗ್ರಹ ಮಾಡಲು ಆರಂಭಿಸಿದ್ದಾರೆ. ಮಾಸ್ಕ್ ಧರಿಸದೇ ಇದ್ದವರಿಂದ ತಲಾ ನೂರು ರೂ.ನಂತೆ ದಂಡ ಕಕ್ಕಿಸುತ್ತಿದ್ದಾರೆ. ಶುಕ್ರವಾರದಿಂದ ಈ ಅಭಿಯಾನ ಆರಂಭಗೊಂಡಿದ್ದು ಮೊದಲ ದಿನ 5 ಸಾವಿರ ರೂ. ದಂಡ ಸಂಗ್ರಹ ಆಗಿತ್ತು. ಶನಿವಾರವೂ ಈ ಅಭಿಯಾನ ನಡೆಸಲಾಗಿದ್ದು ಕೆಲವೇ ಗಂಟೆಗಳಲ್ಲಿ ಆರು ಸಾವಿರ ದಂಡ ಸಂಗ್ರಹ ಆಗಿತ್ತು ಎನ್ನುತ್ತವೆ ಪಾಲಿಕೆಯ ಮೂಲಗಳು. ಅರ್ಧ ದಾರಿಯಲ್ಲಿ ನಿಲ್ಲಿಸಿದಾಗ, ಜನರು ಹಿಡಿಶಾಪ ಹಾಕುತ್ತಾ ದಂಡ ತೆತ್ತು ಮುಂದುವರಿಯುತ್ತಾರೆ..
ಈ ಮಾದರಿಯಲ್ಲಿ ಅಭಿಯಾನ ಇನ್ನು ಕೆಲವು ದಿನ ಇರಲಿದ್ದು ನಿರ್ಲಕ್ಷ್ಯ ತೋರುವ ಜನರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಕಾಪಾಡದಿದ್ದರೆ ಕೊರೊನಾ ನಾಗಾಲೋಟಕ್ಕೆ ಬ್ರೇಕ್ ಹಾಕಲಾಗದು ಎನ್ನುವ ಸಲಹೆಯನ್ನು ಜನರ ಮುಂದಿಟ್ಟಿದ್ದಾರೆ.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm