ಬ್ರೇಕಿಂಗ್ ನ್ಯೂಸ್
26-09-20 10:50 pm Mangaluru Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 26: ಕೊರೊನಾ ಸೋಂಕು ನಿಯಂತ್ರಣಕ್ಕೆ ಹೊರಗೆ ಓಡಾಡುವ ಮಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು ಎಂಬ ನಿಯಮ ಇದೆ. ಆದರೆ, ಈ ಕಾನೂನನ್ನು ಪಾಲನೆ ಮಾಡುವ ಮಂದಿ ಬೆರಳೆಣಿಕೆ ಜನ ಮಾತ್ರ. ಹೆಚ್ಚಿನ ಜನ ಮಾಸ್ಕ್ ಇಲ್ಲದೇ, ಧರಿಸಿದರೂ ಮೂಗು, ಬಾಯಿ ಬಿಟ್ಟುಕೊಂಡು ಓಡಾಡುತ್ತಾರೆ. ಮಾರುಕಟ್ಟೆ, ಜನಜಂಗುಳಿ ಇರುವಲ್ಲೂ ಇದೇ ಕತೆ. ಈ ಕಾರಣದಿಂದಾಗಿಯೇ ಮಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ ಎಂದು ಜಿಲ್ಲಾಧಿಕಾರಿ ಗರಂ ಆಗಿದ್ದಾರೆ.



ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಸೂಚನೆ ಮೇರೆಗೆ ಮಂಗಳೂರು ಮಹಾನಗರ ಪಾಲಿಕೆಯ ಆರೋಗ್ಯಧಿಕಾರಿಗಳು ಪೊಲೀಸರ ಜೊತೆಗೆ ಫೀಲ್ಡಿಗೆ ಇಳಿದಿದ್ದಾರೆ. ರಸ್ತೆಯಲ್ಲಿ ಓಡಾಡುವ ಮಂದಿ ಮತ್ತು ದ್ವಿಚಕ್ರ ವಾಹನಗಳಲ್ಲಿ ಪ್ರಯಾಣಿಸುವ ಜನರನ್ನು ನಿಲ್ಲಿಸಿ ದಂಡ ಸಂಗ್ರಹ ಮಾಡಲು ಆರಂಭಿಸಿದ್ದಾರೆ. ಮಾಸ್ಕ್ ಧರಿಸದೇ ಇದ್ದವರಿಂದ ತಲಾ ನೂರು ರೂ.ನಂತೆ ದಂಡ ಕಕ್ಕಿಸುತ್ತಿದ್ದಾರೆ. ಶುಕ್ರವಾರದಿಂದ ಈ ಅಭಿಯಾನ ಆರಂಭಗೊಂಡಿದ್ದು ಮೊದಲ ದಿನ 5 ಸಾವಿರ ರೂ. ದಂಡ ಸಂಗ್ರಹ ಆಗಿತ್ತು. ಶನಿವಾರವೂ ಈ ಅಭಿಯಾನ ನಡೆಸಲಾಗಿದ್ದು ಕೆಲವೇ ಗಂಟೆಗಳಲ್ಲಿ ಆರು ಸಾವಿರ ದಂಡ ಸಂಗ್ರಹ ಆಗಿತ್ತು ಎನ್ನುತ್ತವೆ ಪಾಲಿಕೆಯ ಮೂಲಗಳು. ಅರ್ಧ ದಾರಿಯಲ್ಲಿ ನಿಲ್ಲಿಸಿದಾಗ, ಜನರು ಹಿಡಿಶಾಪ ಹಾಕುತ್ತಾ ದಂಡ ತೆತ್ತು ಮುಂದುವರಿಯುತ್ತಾರೆ..
ಈ ಮಾದರಿಯಲ್ಲಿ ಅಭಿಯಾನ ಇನ್ನು ಕೆಲವು ದಿನ ಇರಲಿದ್ದು ನಿರ್ಲಕ್ಷ್ಯ ತೋರುವ ಜನರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಕಾಪಾಡದಿದ್ದರೆ ಕೊರೊನಾ ನಾಗಾಲೋಟಕ್ಕೆ ಬ್ರೇಕ್ ಹಾಕಲಾಗದು ಎನ್ನುವ ಸಲಹೆಯನ್ನು ಜನರ ಮುಂದಿಟ್ಟಿದ್ದಾರೆ.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 01:09 pm
Mangalore Correspondent
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm