ಬ್ರೇಕಿಂಗ್ ನ್ಯೂಸ್
06-08-22 01:51 pm Source: Vijayakarnataka ಕ್ರೀಡೆ
ಮುಂಬರುವ 2022ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಅತ್ಯುತ್ತಮ ಆರಂಭಿಕ ಜೋಡಿಯನ್ನು ಗುರುತಿಸಲು ಪ್ರಯತ್ನಿಸುತ್ತಿರುವ ಟೀಮ್ ಇಂಡಿಯಾಗೆ ಮಾಜಿ ಕ್ರಿಕೆಟಿಗ ದೀಪ್ದಾಸ್ಗುಪ್ತಾ, ಮೂರನೇ ಆಯ್ಕೆಯ ಆರಂಭಿಕ ಬ್ಯಾಟ್ಸ್ಮನ್ ಆಗಿ ಪೃಥ್ವಿ ಶಾ ಅವರನ್ನು ಆಯ್ಕೆ ಮಾಡಬೇಕೆಂದು ಸಲಹೆ ನೀಡಿದ್ದಾರೆ.
ಗಾಯಕ್ಕೆ ತುತ್ತಾಗಿರುವ ಕಾರಣ ಕೆ.ಎಲ್ ರಾಹುಲ್ ಅವರು ಕಳೆದ ಫೆಬ್ರವರಿಯಿಂದ ಟೀಮ್ ಇಂಡಿಯಾದಿಂದ ಹೊರಗುಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಭಾರತ ಟಿ20 ತಂಡದಲ್ಲಿ ರೋಹಿತ್ ಶರ್ಮಾ ಅವರ ಜೊತೆ ಸಾಕಷ್ಟು ಆಟಗಾರರಿಗೆ ಇನಿಂಗ್ಸ್ ಆರಂಭಿಸಲು ಅವಕಾಶ ಕಲ್ಪಿಸಲಾಗಿತ್ತು.

ಇಂಗ್ಲೆಂಡ್ ವಿರುದ್ಧ ಟಿ20 ಸರಣಿಯಲ್ಲಿ ರೋಹಿತ್ ಶರ್ಮಾ ಜೊತೆ ರಿಷಭ್ ಪಂತ್ ಇನಿಂಗ್ಸ್ ಆರಂಭಿಸಿದ್ದರು. ಪ್ರಸ್ತುತ ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ಅವರನ್ನು ಪ್ರಯತ್ನಿಸಲಾಗಿದೆ. ಆದರೆ, ಟೀಮ್ ಮ್ಯಾನೇಜ್ಮಂಟ್ನ ಈ ಪ್ರಯೋಗ ಹೇಳಿಕೊಳ್ಳುವಂತೆ ವರ್ಕ್ಔಟ್ ಆಗಿಲ್ಲ ಆದರೆ, ಮೂರನೇ ಪಂದ್ಯದಲ್ಲಿ ಸೂರ್ಯಕುಮಾರ್ 44 ಎಸೆತಗಳಲ್ಲಿ 76 ರನ್ ಗಳಿಸಿದ್ದು, ಸಮಾಧಾನದ ವಿಷಯ.

ಇಂಗ್ಲೆಂಡ್ ವಿರುದ್ಧ ಟಿ20 ಸರಣಿಯಲ್ಲಿ ರೋಹಿತ್ ಶರ್ಮಾ ಜೊತೆ ರಿಷಭ್ ಪಂತ್ ಇನಿಂಗ್ಸ್ ಆರಂಭಿಸಿದ್ದರು. ಪ್ರಸ್ತುತ ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ಅವರನ್ನು ಪ್ರಯತ್ನಿಸಲಾಗಿದೆ. ಆದರೆ, ಟೀಮ್ ಮ್ಯಾನೇಜ್ಮಂಟ್ನ ಈ ಪ್ರಯೋಗ ಹೇಳಿಕೊಳ್ಳುವಂತೆ ವರ್ಕ್ಔಟ್ ಆಗಿಲ್ಲ ಆದರೆ, ಮೂರನೇ ಪಂದ್ಯದಲ್ಲಿ ಸೂರ್ಯಕುಮಾರ್ 44 ಎಸೆತಗಳಲ್ಲಿ 76 ರನ್ ಗಳಿಸಿದ್ದು, ಸಮಾಧಾನದ ವಿಷಯ.

ಕಳೆದ 2021ರ ಜುಲೈನಲ್ಲಿ ಶ್ರೀಲಂಕಾ ವಿರುದ್ಧ ಪೃಥ್ವಿ ಶಾ ಕೊನೆಯ ಬಾರಿ ಭಾರತ ತಂಡದಲ್ಲಿ ಕಾಣಿಸಿಕೊಂಡಿದ್ದರು. 2022ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಅವರು ಅತ್ಯುತ್ತಮವಾಗಿ ಆಡಿದ್ದರು. ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿದ್ದ 10 ಇನಿಂಗ್ಸ್ಗಳಲ್ಲಿ ಅವರು 152.97ರ ಸ್ಟ್ರೈಕ್ ರೇಟ್ನಲ್ಲಿ 283 ರನ್ ಗಳಿಸಿದ್ದರು.
ಮೂರನೇ ಆರಂಭಿಕ ಸ್ಥಾನಕ್ಕೆ ಮುಂಬೈ ಇಂಡಿಯನ್ಸ್ ಆರಂಭಿಕ ಇಶಾನ್ ಕಿಶನ್ ಅವರನ್ನು ಬೇಕಾದರೂ ಪ್ರಯತ್ನಿಸಬಹುದು. ಆದರೆ, ಎಡಗೈ ಬ್ಯಾಟ್ಸ್ಮನ್ ಇತ್ತೀಚೆಗೆ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದಾರೆಂದು ಅವರು ಹೇಳಿದ್ದಾರೆ.
"ಇಶಾನ್ ಕಿಶನ್ ಅವರ ಅಂತಾರಾಷ್ಟ್ರೀಯ ದಾಖಲೆಗಳನ್ನು ನೀವು ನೋಡಬಹುದು. ಅವರು ಅತ್ಯುತ್ತಮವಾಗಿ ಆಡಿದ್ದಾರೆ. ವೃತ್ತಿ ಜೀವನವನ್ನು ಅತ್ಯುತ್ತಮವಾಗಿ ಆರಂಭಿಸಿದ್ದರು. ಆದರೆ, ಅವರು ಇತ್ತೀಚೆಗೆ ಸತತ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಆಡಿಸುವುದು ಅನುಮಾನ," ಎಂದಿದ್ದಾರೆ.
But He Can Give You A Brisk Start Deep Dasgupta Backs Prithvi Shaw As Indias Third Choice Opener For T20 World Cup.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm