ಬ್ರೇಕಿಂಗ್ ನ್ಯೂಸ್
05-09-22 01:28 pm Source: Vijayakarnataka ಕ್ರೀಡೆ
ದುಬೈ: ಹಾಟ್ ಸ್ಟಾರ್ನ ಲೈವ್ ವೀಕ್ಷಣೆಯಲ್ಲಿ ಬರೋಬ್ಬರಿ 1.4 ದಶಲಕ್ಷ ಮಂದಿಯಿಂದ ವೀಕ್ಷಣೆಗೆ ಒಳಪಟ್ಟಿದ ಟೀಮ್ ಇಂಡಿಯಾ ಮತ್ತು ಪಾಕಿಸ್ತಾನ ನಡುವಣ ಏಷ್ಯಾ ಕಪ್ 2022 ಟೂರ್ನಿಯ ಸೂಪರ್-4 ಪಂದ್ಯದಲ್ಲಿ ಭಾರತ ತಂಡ 5 ವಿಕೆಟ್ಗಳ ಅಚ್ಚರಿಯ ಸೋಲುಂಡಿತು. ಅಂದಹಾಗೆ ಟೂರ್ನಿಯ 'ಎ' ಗುಂಪಿನ ಮೊದಲ ಪಂದ್ಯದಲ್ಲಿ ಭಾರತ ತಂಡ 5 ವಿಕೆಟ್ಗಳಿಂದ ಪಾಕ್ ಎದುರು ಜಯ ದಾಖಲಿಸಿತ್ತು. ಈ ಸೋಲಿಗೆ ಪಾಕ್ ಪಡೆ ಇದೀಗ ಸೇಡು ತೀರಿಸಿಕೊಂಡಿದೆ.
ಸೂಪರ್-4 ಹಂತದಲ್ಲಿ ಟೀಮ್ ಇಂಡಿಯಾದ ಸೋಲು ಫೈನಲ್ ಹಾದಿಯನ್ನು ಕಠಿಣವನ್ನಾಗಿಸಿದೆ. ಏಕೆಂದರೆ ರೋಹಿತ್ ಶರ್ಮಾ ಸಾರಥ್ಯದ ಭಾರತ ತಂಡ ತನ್ನ ಮುಂದಿನ ಎರಡು ಪಂದ್ಯಗಳಲ್ಲಿ ಉತ್ತಮ ಲಯದಲ್ಲಿರುವ ಶ್ರೀಲಂಕಾ ಮತ್ತು ಅಫಘಾನಿಸ್ತಾನ ಎದುರು ಗೆಲ್ಲಲೇ ಬೇಕಾದ ಒತ್ತಡಕ್ಕೆ ಸಿಲುಕಿದೆ. ಅತ್ತ ಪಾಕಿಸ್ತಾನ ತಂಡ ಇನ್ನೊಂದು ಪಂದ್ಯ ಗೆದ್ದರೂ ಫೈನಲ್ನಲ್ಲಿ ತನ್ನ ಸ್ಥಾನ ಭದ್ರ ಪಡಿಸಿಕೊಳ್ಳಲಿದೆ.

ಸೆಪ್ಟೆಂಬರ್ 6ರಂದು ಭಾರತ ತಂಡ ಐದು ಬಾರಿಯ ಚಾಂಪಿಯನ್ಸ್ ಶ್ರೀಲಂಕಾ ಎದುರು ಪೈಪೋಟಿ ನಡೆಸಲಿದೆ. ಲೀಗ್ ಹಂತದ ಕೊನೇ ಪಂದ್ಯದಲ್ಲಿ ಬಾಂಗ್ಲಾದೇಶ ಎದುರು 2 ವಿಕೆಟ್ಗಳ ರೋಚಕ ಜಯ ದಾಖಲಿಸಿ ಸೂಪರ್-4 ಹಂತಕ್ಕೆ ಕಾಲಿಟ್ಟಿರುವ ಶ್ರೀಲಂಕಾ ತಂಡ ಆತ್ಮವಿಶ್ವಾಸದ ಅಲೆಯಲ್ಲಿದೆ. ಹೀಗಾಗಿ ದ್ವೀಪರಾಷ್ಟ್ರದ ಎದುರು ಭಾರತ ತಂಡ ಜಯ ದಕ್ಕಿಸಕೊಳ್ಳಲು ತನ್ನ ಶ್ರೇಷ್ಠ ಆಟ ಹೊರತರಬೇಕಾದ ಅನಿವಾರ್ಯತೆ ಇದೆ. ಅಂದಹಾಗೆ ಸೂಪರ್-4 ಹಂತದ ಮೊದಲ ಹಣಾಹಣಿಯಲ್ಲಿ ಶ್ರೀಲಂಕಾ ತಂಡ ಅಫಘಾನಿಸ್ತಾನ ಎದುರು ಗೆದ್ದಿದ್ದು, ಇನ್ನೊಂದು ಪಂದ್ಯ ಗೆದ್ದರೂ ಫೈನಲ್ ತಲುಪುವ ಅತ್ಯುತ್ತಮ ಅವಕಾಶ ಹೊಂದಿದೆ.
ಅತ್ತ ಪಾಕಿಸ್ತಾನ ತಂಡ ತನ್ನ ಮುಂದಿನ ಎರಡು ಪಂದ್ಯಗಳಲ್ಲಿ ಅಫಘಾನಿಸ್ತಾನ (ಸೆಪ್ಟೆಂಬರ್ 7) ಮತ್ತು ಶ್ರೀಲಂಕಾ (ಸೆಪ್ಟೆಂಬರ್ 9) ಎದುರು ಪೈಪೋಟಿ ನಡೆಸಲಿದ್ದು, ಎರಡರಲ್ಲಿ ಕನಿಷ್ಠ ಒಂದು ಗೆಲುವಿನ ಹುಡುಕಾಟದಲ್ಲಿದೆ. ಹೀಗಾಗಿ ಟೀಮ್ ಇಂಡಿಯಾಗೆ ತನ್ನ ಮುಂದಿನ ಎರಡೂ ಪಂದ್ಯಗಳಲ್ಲಿ ಶ್ರೀಲಂಕಾ ಮತ್ತು ಅಫಘಾನಿಸ್ತಾನ ಎದುರು ಬೃಹತ್ ಗೆಲುವು ದಾಖಲಿಸುವ ಅನಿವಾರ್ಯತೆ ಎದುರಾಗಿದೆ.
ಭಾರತ ತಂಡ ಅಫಘಾನಿಸ್ತಾನ ಮತ್ತು ಶ್ರೀಲಂಕಾ ಎದುರು ಗೆದ್ದರೆ ಒಟ್ಟು 4 ಅಂಕಗಳನ್ನು ಗಳಿಸಲಿದೆ. ಅತ್ತ, ಪಾಕಿಸ್ತಾನ ತಂಡಕ್ಕೆ ಕನಿಷ್ಠ ಒಂದು ಜಯ ಸಿಕ್ಕರೂ 4 ಅಂಕ ಗಳಿಸಲಿದೆ. ಸದ್ಯಕ್ಕೆ 2 ಪಂದ್ಯಗಳನ್ನು ಅತ್ಯುತ್ತಮವಾಗಿ ಗೆಲ್ಲುವ, ಅಂದರೆ ಉತ್ತಮ ರನ್ರೇಟ್ನೊಂದಿಗೆ ಗೆಲ್ಲುವ ತಂಡಕ್ಕೆ ಫೈನಲ್ ಟಿಕೆಟ್ ಸಿಗಲಿದೆ. ಭಾರತ ತಂಡ ಇನ್ನೊಂದು ಪಂದ್ಯ ಸೋತರೂ ಸ್ಪರ್ಧೆಯಿಂದ ಹೊರ ಬೀಳಲಿದೆ.
ಏಷ್ಯಾ ಕಪ್ 2022 ಟೂರ್ನಿಯ ಸೂಪರ್-4 ಹಂತದ ವೇಳಾಪಟ್ಟಿ/ಫಲಿತಾಂಶ
ಸೆಪ್ಟೆಂಬರ್ 03 (ಶನಿವಾರ): ಸೂಪರ್ 4 ಹಂತದ ಪಂದ್ಯ ಅಫಘಾನಿಸ್ತಾನ vs ಶ್ರೀಲಂಕಾ (ಶಾರ್ಜಾ)
(ಶ್ರೀಲಂಕಾ ತಂಡಕ್ಕೆ 4 ವಿಕೆಟ್ಗಳ ಜಯ)
ಸೆಪ್ಟೆಂಬರ್ 04 (ಭಾನುವಾರ): ಸೂಪರ್ 4 ಹಂತದ ಪಂದ್ಯ ಭಾರತ vs ಪಾಕಿಸ್ತಾನ (ದುಬೈ)
(ಭಾರತಕ್ಕೆ 5 ವಿಕೆಟ್ಗಳ ಸೋಲು)
Team India Can Still Make It To The Final Of Asia Cup 2022, Here Is All You Need To Know About
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
19-04-26 02:58 pm
HK News Staffer
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm