ಬ್ರೇಕಿಂಗ್ ನ್ಯೂಸ್
05-10-22 12:56 pm Source: Vijayakarnataka ಕ್ರೀಡೆ
ಇಂದೋರ್: ಬೆನ್ನು ನೋವಿನ ಗಂಭೀರ ಸಮಸ್ಯೆಯಿಂದ ಬಳಲುತ್ತಿರುವ ಭಾರತ ತಂಡದ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಅವರು ಮುಂಬರುವ 2022ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಿಂದ ಅಧಿಕೃತವಾಗಿ ಹೊರಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಟೂರ್ನಿ ಆರಂಭಕ್ಕೂ ಎರಡು ವಾರಗಳ ಮೊದಲೇ ಟೀಮ್ ಇಂಡಿಯಾಗೆ ಭಾರಿ ಹಿನ್ನಡೆಯಾಗಿದೆ.
ಜಸ್ಪ್ರೀತ್ ಬುಮ್ರಾ ಅವರ ಅಲಭ್ಯತೆಯು ಭಾರತ ತಂಡದ ಟಿ20 ವಿಶ್ವಕಪ್ ಟೂರ್ನಿಯ ಯೋಜನೆಯಲ್ಲಿ ಭಾರಿ ಹಿನ್ನಡೆಯಾಗಿದೆ. ಅಂದಹಾಗೆ ಭಾರತ ತಂಡ ಅಕ್ಟೋಬರ್ 6 ರಂದು ಆಸ್ಟ್ರೇಲಿಯಾಗೆ ಪ್ರಯಾಣ ಬೆಳೆಸಲಿದೆ. ನಂತರ, ಜಸ್ಪ್ರೀತ್ ಬುಮ್ರಾಗೆ ಬದಲಿ ಆಟಗಾರನನ್ನು ಆಯ್ಕೆ ಮಾಡುತ್ತೇವೆಂದು ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.

ಮಹತ್ವದ ಟೂರ್ನಿಯಲ್ಲಿ ಜಸ್ಪ್ರೀತ್ ಬುಮ್ತಾ ಅವರ ಸ್ಥಾನವನ್ನು ತುಂಬಲು ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ ಹಾಗೂ ದೀಪಕ್ ಚಹರ್ ಎದುರು ನೋಡುತ್ತಿದ್ದಾರೆ. ಈ ಮೂವರಲ್ಲಿ ಒಬ್ಬರಿಗೆ ಟಿ20 ವಿಶ್ವಕಪ್ ಭಾರತ ತಂಡದಲ್ಲಿ ಸ್ಥಾನ ನಿಡಬಹುದೆಂದು ಅಂದಾಜಿಸಲಾಗಿದೆ. ಆದರೆ, ದಕ್ಷಿಣ ಆಫ್ರಿಕಾ ವಿರುದ್ಧ ಮೂರನೇ ಟಿ20 ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್ ಹಾಗೂ ದೀಪಕ್ ಚಹರ್ ಅವರು 40 ಕ್ಕೂ ಹೆಚ್ಚಿನ ರನ್ಗಳನ್ನು ಬಿಟ್ಟುಕೊಟ್ಟಿದ್ದಾರೆ.
ಮಂಗಳವಾರ ಮೂರನೇ ಟಿ20 ಪಂದ್ಯದಲ್ಲಿ ಭಾರತ ತಂಡ 49 ರನ್ಗಳಿಂದ ಸೋಲು ಅನುಭವಿಸಿತು. ಇದರ ಹೊರತಾಗಿಯೂ ಆರಂಭಿಕ ಎರಡು ಪಂದ್ಯಗಳ ಗೆಲುವಿನ ಆಧಾರದ ಮೇಲೆ 2-1 ಅಂತರದಲ್ಲಿ ಟಿ20 ಸರಣಿ ಮುಡಿಗೇರಿಸಿಕೊಂಡಿತು. ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ನಲ್ಲಿ ಮಾತನಾಡುವಾಗ ರೋಹಿತ್ ಶರ್ಮಾಗೆ ಇದೇ ಪ್ರಶ್ನೆ ಎದುರಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ಇಂಡಿಯಾ ಕ್ಯಾಪ್ಟನ್, ನಾವು ಆಸ್ಟ್ರೇಲಿಯಾಗೆ ತಲಪಿದ ಬಳಿಕ ಅಲ್ಲಿನ ಕಂಡೀಷನ್ಸ್ ನೋಡಿಕೊಂಡು ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

"ಜಸ್ಪ್ರೀತ್ ಬುಮ್ರಾ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಿಂದ ಅಧಿಕೃತವಾಗಿ ಹೊರ ಬಿದ್ದಿದ್ದಾರೆ. ಹಾಗಾಗಿ ಆಸ್ಟ್ರೇಲಿಯಾದಲ್ಲಿ ಬೌಲ್ ಮಾಡಿದ ಅನುಭವ ಇರುವ ವೇಗಿಯ ಅಗತ್ಯವಿದೆ. ಯಾವ ಬೌಲರ್ ಆಯ್ಕೆಯಾಗುತ್ತಾರೆ ನನಗೆ ಗೊತ್ತಿಲ್ಲ. ಒಮ್ಮೆ ಆಸ್ಟ್ರೇಲಿಯಾ ತಲುಪಿದ ಬಳಿಕ ಇಲ್ಲಿನ ಕಂಡೀಷನ್ಸ್ ನೋಡಿಕೊಂಡು ಒಬ್ಬರನ್ನು ಆಯ್ಕೆ ಮಾಡುತ್ತೇವೆ," ಎಂದು ರೋಹಿತ್ ಶರ್ಮಾ ತಿಳಿಸಿದ್ದಾರೆ.
ಇದೀಗ ತಂಡದ ಸ್ಟ್ಯಾಂಡ್ ಬೈನಲ್ಲಿ ಮೊಹಮ್ಮದ್ ಶಮಿ ಹಾಗೂ ದೀಪಕ್ ಚಹರ್ ಇದ್ದಾರೆ ಹಾಗೂ ತಂಡದೊಂದಿಗೆ ಆಸ್ಟ್ರೇಲಿಯಾಗೆ ಪ್ರಯಾಣ ಬೆಳೆಸಲಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ದ ಟಿ20 ಸರಣಿಗೆ ಗಾಯಾಳು ಬುಮ್ರಾ ಸ್ಥಾನಕ್ಕೆ ಕೊನೆಯ ಗಳಿಗೆಯಲ್ಲಿ ಮೊಹಮ್ಮದ್ ಸಿರಾಜ್ ಅವರನ್ನು ಆಯ್ಕೆ ಮಾಡಲಾಗಿತ್ತು. ಆದರೆ, ಅವರು ಮೂರನೇ ಟಿ20 ಪಂದ್ಯದಲ್ಲಿ ಹೆಚ್ಚಿನ ರನ್ಗಳನ್ನು ಬಿಟ್ಟುಕೊಟ್ಟಿದ್ದರು.
ಚಹರ್ ಹಾಗೂ ಸಿರಾಜ್ ಅವರಿಗಿಂತ ಮೊಹಮ್ಮದ್ ಶಮಿ ಹೆಚ್ಚಿನ ಅನುಭವವನ್ನು ಹೊಂದಿದ್ದಾರೆ. ಅಂದಹಾಗೆ ಸಿರಾಜ್ 2020-21ರಲ್ಲಿ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ್ದರು. ಮತ್ತೊಂದೆಡೆ ದೀಪಕ್ ಚಹರ್ ಅವರು ಕಳೆದ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ಟಿ20 ಸರಣಿಗಳ ಭಾರತ ತಂಡದಲ್ಲಿದ್ದರು. ಈ ಮೂವರು ವೇಗಿಗಳಲ್ಲಿ ಒಬ್ಬರನ್ನು ಬುಮ್ರಾ ಸ್ಥಾನಕ್ಕೆ ಆಯ್ಕೆ ಮಾಡುವ ಸಾಧ್ಯತೆ ಇರುತ್ತದೆ.
Siraj, Shami, Or Chahar? Skipper Rohit Sharma Drops Big Update On Bumrahs Replacement For T20 World Cup.
31-05-26 09:23 pm
HK News Staffer
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
31-05-26 03:40 pm
HK News Staffer
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
31-05-26 08:25 pm
HK News Staffer
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm
ಭೀಮಾತೀರದಲ್ಲಿ ಮತ್ತೆ ರಕ್ತದೋಕುಳಿ! ಅಸ್ತಿ ವಿವಾದಕ್ಕ...
29-05-26 10:21 pm
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm