ಬ್ರೇಕಿಂಗ್ ನ್ಯೂಸ್
29-11-22 12:53 pm Source: Vijayakarnataka ಕ್ರೀಡೆ
ಭಾರತ ಸೀಮಿತ ಓವರ್ಗಳ ತಂಡದಲ್ಲಿ ರಿಷಭ್ ಪಂತ್ ಹಾಗೂ ಸಂಜು ಸ್ಯಾಮ್ಸನ್ ಅವರ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ರಿಷಭ್ ಪಂತ್ ಬದಲು ಸಂಜು ಸ್ಯಾಮ್ಸನ್ಗೆ ಭಾರತ ವೈಟ್ ಬಾಲ್ ತಂಡದಲ್ಲಿ ಹೆಚ್ಚಿನ ಅವಕಾಶಗಳನ್ನು ಕಲ್ಪಿಸಬೇಕೆಂದು ಹಲವು ಮಾಜಿ ಆಟಗಾರರು ಆಗ್ರಹಿಸಿದ್ದಾರೆ. ಈ ಪಟ್ಟಿಗೆ ಇದೀಗ ನ್ಯೂಜಿಲೆಂಡ್ ಮಾಜಿ ವೇಗಿ ಸೈಮನ್ ದೌಲ್ ಸೇರ್ಪಡೆಯಾಗಿದ್ದಾರೆ.
ರಿಷಭ್ ಪಂತ್ ಭಾರತ ಟೆಸ್ಟ್ ತಂಡದಲ್ಲಿ ತಮ್ಮ ಸ್ಥಾನವನ್ನು ಗಟ್ಟಿ ಮಾಡಿಕೊಂಡಿದ್ದಾರೆ. ಆದರೆ, ಒಡಿಐ ಹಾಗೂ ಟಿ20 ತಂಡಗಳಲ್ಲಿ ಇನ್ನೂ ಹೇಳಿಕೊಳ್ಳುವಂತಹ ದೊಡ್ಡ ಇನಿಂಗ್ಸ್ಗಳನ್ನು ಅವರು ಆಡಿಲ್ಲ. ಸೀಮಿತ ಓವರ್ಗಳ ಸ್ವರೂಪದಲ್ಲಿ ಆಡಿರುವ 95 ಪಂದ್ಯಗಳ ಪೈಕಿ 8 ಅರ್ಧಶತಕಗಳು ಹಾಗೂ ಒಂದು ಶತಕ ಸೇರಿದಂತೆ 1842 ರನ್ ಗಳಿಸಿದ್ದಾರೆ.

ಮತ್ತೊಂದೆಡೆ ಸಂಜು ಸ್ಯಾಮ್ಸನ್ ಅವರು ರಿಷಭ್ ಒಂತ್ ಅವರಿಗಿಂತ ಮೊದಲೇ ಭಾರತ ತಂಡದ ಪರ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದರು. ಆದರೆ, ಪಂತ್ಗೆ ಸಿಕ್ಕಂತಹ ಅವಕಾಶಗಳು ಕೇರಳ ಮೂಲದ ಆಟಗಾರನಿಗೆ ಲಭಿಸಿಲ್ಲ. 27 ಸೀಮಿತ ಓವರ್ಗಳ ಪಂದ್ಯಗಳಿಂದ ಸಂಜು 626 ರನ್ ಗಳಿಸಿದ್ದಾರೆ. ಅಂದಹಾಗೆ ಏಕದಿನ ಕ್ರಿಕೆಟ್ನಲ್ಲಿ ಪಂತ್ಗಿಂತ (35) ಸಂಜು ಸ್ಯಾಮ್ಸನ್ (66) ಅವರ ಸರಾಸರಿ ಉತ್ತಮವಾಗಿದೆ.
ಅಂದಹಾಗೆ ಪ್ರಸ್ತುತ ನ್ಯೂಜಿಲೆಂಡ್ ವಿರುದ್ದ ನಡೆಯುತ್ತಿರುವ ಒಡಿಐ ಸರಣಿಯಲ್ಲಿಯೂ ಉತ್ತಮ ಪ್ರದರ್ಶನ ತೋರಿದ ಹೊರತಾಗಿಯೂ ಸಂಜು ಸ್ಯಾಮ್ಸನ್ ಅವರನ್ನು ಟೀಮ್ ಮ್ಯಾನೇಜ್ಮೆಂಟ್ ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ. ಆರಂಭಿಕ ಪಂದ್ಯದಲ್ಲಿ ಪಂತ್ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದರು. ಆದರೆ, ಸಂಜು ಸ್ಯಾಮ್ಸನ್ 36 ರನ್ ಗಳಿಸಿದ್ದರು ಹಾಗೂ ಶ್ರೇಯಸ್ ಅಯ್ಯರ್ ಜೊತೆ 94 ರನ್ ನಿರ್ಣಾಯಕ ಜೊತೆಯಾಟವಾಡಿದ್ದರು. ಇದರ ಹೊರತಾಗಿಯೂ ಎರಡನೇ ಪಂದ್ಯದಲ್ಲಿ ಪಂತ್ ಅವರನ್ನು ಉಳಿಸಿಕೊಂಡು, ಸಂಜು ಸ್ಯಾಮ್ಸನ್ ಅವರನ್ನು ಕೈ ಬಿಡಲಾಗಿತ್ತು.
"ಏಕದಿನ ಕ್ರಿಕೆಟ್ನಲ್ಲಿ ರಿಷಭ್ ಪಂತ್ ಅವರ ಸರಾಸರಿ ಸಾಮಾನ್ಯವಾಗಿದೆ. ಇವರು ಆಡಿರುವ 30 ಪಂದ್ಯಗಳಲ್ಲಿ 35ರ ಸರಾಸರಿಯಲ್ಲಿ ರನ್ ಗಳಿಸಿದ್ದಾರೆ ಹಾಗೂ ಸ್ಟ್ರೈಕ್ ರೇಟ್ ಉತ್ತಮವಾಗಿದೆ. ಆದರೆ, ಸಂಜು ಸ್ಯಾಮ್ಸನ್ 11 ಪಂದ್ಯಗಳಿಂದ 60ಕ್ಕೂ ಹೆಚ್ಚಿನ ಸರಾಸರಿಯಲ್ಲಿ ರನ್ ಗಳಿಸಿದ್ದಾರೆ. ವಿಕೆಟ್ ಕೀಪರ್ಗೆ ಇರುವ ಎಲ್ಲಾ ಅರ್ಹತೆ ಸಂಜುಗೂ ಇದೆ. ಆದ್ದರಿಂದ ಭಾರತ ತಂಡದಲ್ಲಿ ಹೆಚ್ಚಿನ ಅವಕಾಶಗಳನ್ನು ಪಡೆಯಲು ಸಂಜು ಸ್ಯಾಮ್ಸನ್ ಅರ್ಹರಾಗಿದ್ದಾರೆ," ಎಂದು ಸೈಮನ್ ದೌಲ್ ಕ್ರಿಕ್ಬಝ್ಗೆ ತಿಳಿಸಿದ್ದಾರೆ.
Ind Vs Nz Rishabhs Odi Average Is 30, Samson In 11 Matches Is Averaging 60': Simon Doull Not Convinced Of Pants White-Ball Skills.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm