ಬ್ರೇಕಿಂಗ್ ನ್ಯೂಸ್
28-12-22 05:58 pm Source: Vijayakarnataka ಕ್ರೀಡೆ
ಬಾಂಗ್ಲಾದೇಶ ಪ್ರವಾಸದಲ್ಲಿ ಒಡಿಐ ಸರಣಿ ಸೋತರೂ ಟೆಸ್ಟ್ ಸರಣಿಯಲ್ಲಿ ವೈಟ್ವಾಶ್ ಜಯ ದಾಖಲಿಸಿ ತಾಯ್ನಾಡಿಗೆ ಹಿಂದಿರುಗಿರುವ ಟೀಮ್ ಇಂಡಿಯಾ, ಇದೀಗ 2023ರ ಸಾಲಿನಲ್ಲಿ ಮೊದಲ ಅಭಿಯಾನವಾಗಿ ಪ್ರವಾಸಿ ಶ್ರೀಲಂಕಾ ಎದುರು ತಲಾ ಮೂರು ಪಂದ್ಯಗಳ ಟಿ20 ಕ್ರಿಕೆಟ್ ಮತ್ತು ಏಕದಿನ ಕ್ರಿಕೆಟ್ ಸರಣಿಗಳನ್ನು ಆಡಲಿದೆ. ಇತ್ತಂಡಗಳ ನಡುವಣ ಟಿ20 ಸರಣಿ ಜನವರಿ 3ರಂದು ಶುರುವಾಗಲಿದ್ದು, ಈ ಸಲುವಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಭಾರತ ತಂಡಗಳನ್ನು ಮಂಗಳವಾರ (ಡಿ.27) ಪ್ರಕಟ ಮಾಡಿದೆ. ಟಿ20 ಸರಣಿಯಲ್ಲಿ ಭಾರತ ತಂಡಚವನ್ನು ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಮುನ್ನಡೆಸಿದರೆ, ಏಕದಿನ ಕ್ರಿಕೆಟ್ ಸರಣಿಯಲ್ಲಿ ರೋಹಿತ್ ಶರ್ಮಾ ಕ್ಯಾಪ್ಟನ್ಸಿ ನಿಭಾಯಿಸಲಿದ್ದಾರೆ. ಮೂರು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿ ಜನವರಿ 10ರಂದು ಶರುವಾಗಲಿದೆ.
ಅಂದಹಾಗೆ ಬಿಸಿಸಿಐ ಈ ಬಾರಿ ಭಾರತ ತಂಡಗಳನ್ನು ಪ್ರಕಟ ಮಾಡುವಾಗ ಕೆಲ ಅಚ್ಚರಿಯ ನಿರ್ಧಾರಗಳನ್ನು ತೆಗೆದುಕೊಂಡಿದೆ. ಪ್ರಮುಖವಾಗಿ ಒಡಿಐ ತಂಡದಿಂದ ಅನುಭವಿ ಓಪನರ್ ಶಿಖರ್ ಧವನ್ ಅವರನ್ನು ಕೈಬಿಟ್ಟಿದೆ. ಜೊತೆಗೆ ಟಿ20 ತಂಡದಲ್ಲಿ ಯುವಕರಿಗೆ ಮಣೆಹಾಕಿ ಅನುಭವಿ ವೇಗದ ಬೌಲರ್ ಭುವನೇಶ್ವರ್ ಕುಮಾರ್ ಅವರಿಗೂ ಕೊಕ್ ನೀಡಿದೆ. ಎಲ್ಲಕ್ಕಿಂತಲೂ ಮಿಗಿಲಾಗಿ ಎರಡೂ ತಂಡಗಳಿಂದ ಸ್ಟಾರ್ ವಿಕೆಟ್ಕೀಪರ್ ಬ್ಯಾಟ್ಸ್ಮನ್ ರಿಷಭ್ ಪಂತ್ ಅವರನ್ನು ಹೊರಗಿಟ್ಟಿರುವುದು ದೊಡ್ಡ ಅಚ್ಚರಿ ತಂದೊಡ್ಡಿತ್ತು. ಆರಂಭಿಕ ವರದಿಗಳ ಪ್ರಕಾರ ವೈಟ್ಬಾಲ್ ಕ್ರಿಕೆಟ್ನಲ್ಲಿ ಪಂತ್ ಅವರ ಕಳಪೆ ಲಯ ಕಾರಣ ಸ್ಥಾನ ಕಳೆದುಕೊಂಡಿದ್ದಾರೆ ಎಂಬುದಾಗಿತ್ತು. ಆದರೆ, ವಾಸ್ತವದಲ್ಲಿ 25 ವರ್ಷದ ಎಡಗೈ ಬ್ಯಾಟ್ಸ್ಮನ್ ಗಾಯದ ಸಮಸ್ಯೆ ಎದುರಿಸಿದ್ದಾರೆ ಎಂಬುದು ಇದೀಗ ಬೆಳಕಿಗೆ ಬಂದಿದೆ.

ಟೈಮ್ಸ್ ಆಫ್ ಇಂಡಿಯಾ ಇತ್ತೀಚಿನ ವರದಿ ಪ್ರಕಾರ ರಿಷಭ್ ಪಂತ್ ದೀರ್ಘ ಸಮಯದಿಂದ ಮಂಡಿ ನೋವಿನ ಸಮಸ್ಯೆಯಿಂದ ಬಳಲಿದ್ದಾರೆ. ಹೀಗಾಗಿ ಶ್ರೀಲಂಕಾ ವಿರುದ್ಧದ ಸರಣಿಯಿಂದ ಸಂಪೂರ್ಣ ಹೊರಗುಳಿದು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಪುನಶ್ಚೇತನ ಶಿಬಿರಕ್ಕೆ ಒಳಪಡಲಿದ್ದಾರೆ ಎಂಬುದು ಬೆಳಕಿಗೆ ಬಂದಿದೆ. ಜನವರಿಯಲ್ಲಿ ಭಾರತ ತಂಡ ಪ್ರವಾಸಿ ನ್ಯೂಜಿಲೆಂಡ್ ಎದುರು ಸೀಮಿತ ಓವರ್ಗಳ ಕ್ರಿಕೆಟ್ ಸರಣಿಗಳನ್ನು ಆಡಲಿದ್ದು, ಆ ಹೊತ್ತಿಗೆ ಪಂತ್ ಭಾರತ ತಂಡದಲ್ಲಿ ಮರಳಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.
ರಿಷಭ್ ಪಂತ್ ಅನುಪಸ್ಥಿತಿಯಲ್ಲಿ ವಿಕೆಟ್ಕೀಪರ್ ಬ್ಯಾಟ್ಸ್ಮನ್ ಜವಾಬ್ದಾರಿಯನ್ನು ಯುವ ಆಟಗಾರ ಇಶಾನ್ ಕಿಶನ್ ನಿರ್ವಹಿಸಲಿದ್ದಾರೆ. ಟಿ20 ತಂಡದಲ್ಲಿ ಹೆಚ್ಚುವರಿ ವಿಕೆಟ್ಕೀಪರ್ ಬ್ಯಾಟ್ಸ್ಮನ್ ಆಗಿ ಸಂಜು ಸ್ಯಾಮ್ಸನ್ ಕೂಡ ಇದ್ದಾರೆ.
ಶ್ರೀಲಂಕಾ ವಿರುದ್ಧದ ಸರಣಿಗೆ ಭಾರತದ ಟಿ20 ತಂಡ
ಹಾರ್ದಿಕ್ ಪಾಂಡ್ಯ (ನಾಯಕ), ಇಶಾನ್ ಕಿಶನ್ (ವಿಕೆಟ್ಕೀಪರ್), ಋತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್ (ಉಪನಾಯಕ), ದೀಪಕ್ ಹೂಡ, ರಾಹುಲ್ ತ್ರಿಪಾಠಿ, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಹಲ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್ , ಶಿವಂ ಮಾವಿ, ಮುಖೇಶ್ ಕುಮಾರ್.
ಶ್ರೀಲಂಕಾ ವಿರುದ್ಧದ ಒಡಿಐ ಸರಣಿಗೆ ಭಾರತ ತಂಡ ಹೀಗಿದೆ
ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್ , ಅರ್ಷದೀಪ್ ಸಿಂಗ್.
Ind Vs Sl Here Is Why Rishabh Pant Is Not Selected In T20i And Odi Squads Against Sri Lanka.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm