ಬ್ರೇಕಿಂಗ್ ನ್ಯೂಸ್
30-12-22 01:25 pm Source: Vijayakarnataka ಕ್ರೀಡೆ
ಕಾರು ಅಪಘಾತದಿಂದ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಭಾರತ ಕ್ರಿಕೆಟ್ ತಂಡದ ವಿಕೆಟ್ ಕೀಪರ್-ಬ್ಯಾಟ್ಸ್ಮನ್ ರಿಷಭ್ ಪಂತ್ ಅವರ ಆರೋಗ್ಯದ ಬಗ್ಗೆ ಡೆಹ್ರಾಡೂನ್ನ ಮ್ಯಾಕ್ಸ್ ಆಸ್ಪತ್ರೆಯು ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿದೆ. ಭಾರತೀಯ ಕ್ರಿಕೆಟಿಗನ ಆರೋಗ್ಯ ಸ್ಥಿರವಾಗಿದೆ. ಹಾಗಾಗಿ ಗಾಬರಿ ಪಡಬೇಕಾದ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಶುಕ್ರವಾರ ಮುಂಜಾನೆ ಸುಮಾರು 5:30ರ ಸಮಯದಲ್ಲಿ ದಿಲ್ಲಿಯಿಂದ ಉತ್ತರಾಖಂಡಗೆ ರಿಷಭ್ ಪಂತ್ ಒಬ್ಬರೆ ತಮ್ಮ ಬಿಎಂಡಬ್ಲ್ಯು ಕಾರು ಚಲಾಯಿಸಿಕೊಂಡು ಹೋಗುತ್ತಿದ್ದರು. ಈ ವೇಳೆ ಕಾರು ನಿಯಂತ್ರಣ ತಪ್ಪಿ ದಿಲ್ಲಿ-ಡೆಹ್ರಾಡೂನ್ ಹೆದ್ದಾರಿಯ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಇದರ ಬೆನ್ನಲ್ಲೆ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ರಿಷಭ್ ಪಂತ್ ಕಾರಿನ ಬಾಗಿಲು ತೆಗೆದು ಹೊರಗಡೆ ಬಂದು ಪ್ರಾಣಾಪಾಯದಿಂದ ಪಾರಾಗಿದ್ದರು.

ರಿಷಭ್ ಪಂತ್ ಅವರನ್ನು ಮೊದಲಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು ಹಾಗೂ ತದನಂತರ ಡೆಹ್ರಾಡೂನ್ನಲ್ಲಿರುವ ಮ್ಯಾಕ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ. ಅಂದಹಾಗೆ ಅಪಘಾತದಲ್ಲಿ ರಿಷಭ್ ಪಂತ್ ತಲೆ, ಬೆನ್ನು ಹಾಗೂ ಕಾಲಿಗೆ ಗಾಯಗಳಾಗಿವೆ. ಅದೃಷ್ಟವಶಾತ್ ರಿಷಭ್ ಪಂತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಿಷಭ್ ಪಂತ್ ಗಾಯದ ಸ್ವರೂಪ ಹಾಗೂ ಅವರು ಸಂಪೂರ್ಣವಾಗಿ ಗುಣಮುಖರಾಗಲು ಇನ್ನೂ ಎಷ್ಟು ದಿನಗಳ ಬೇಕು ಎಂಬುದರ ಬಗ್ಗೆ ಇನ್ನೂ ಖಚಿತ ಮಾಹಿತಿ ಇಲ್ಲ.
ಭಾರತ ಕ್ರಿಕೆಟ್ ತಂಡದ ರಿಷಭ್ ಪಂತ್ ಅವರು ಅಪಘಾತದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದೀಗ ಅವರ ಆರೋಗ್ಯ ಸ್ಥಿರವಾಗಿದ್ದು, ವೈದ್ಯಕೀಯ ಸಿಬ್ಬಂದಿಯ ವೀಕ್ಷಣೆಯಲ್ಲಿದ್ದಾರೆ. ಆದರೆ, ಅವರಿಗೆ ಯಾವುದೇ ಅಪಾಯ ಇಲ್ಲ ಎಂದು ಮ್ಯಾಕ್ಸ್ ಆಸ್ಪತ್ರೆಯು ತನ್ನ ಅಧಿಕೃತ ಹೇಳಿಕೆಯಲ್ಲಿ ಖಚಿತಪಡಿಸಿದೆ.

"ಕ್ರಿಕೆಟಿಗ ರಿಷಬ್ ಪಂತ್ ಅವರು ಮೂಳೆಚಿಕಿತ್ಸಕರು ಮತ್ತು ಪ್ಲಾಸ್ಟಿಕ್ ಸರ್ಜನ್ಗಳ ವೀಕ್ಷಣೆಯಲ್ಲಿದ್ದಾರೆ. ಅವರ ಆರೋಗ್ಯ ಪರಸ್ಥಿತಿ ಸ್ಥಿರವಾಗಿದೆ. ವೈದ್ಯರು ರಿಷಭ್ ಪಂತ್ ಅವರನ್ನು ಪರೀಕ್ಷಿಸಿದ ಬಳಿಕ ವೈದ್ಯಕೀಯ ಬುಲೆಟಿನ್ ಬಿಡುಗಡೆ ಮಾಡಲಾಗುವುದು. ತದ ನಂತರ ಮುಂದಿನ ಹೆಜ್ಜೆಯನ್ನು ಇಡುತ್ತೇವೆ," ಎಂದು ಡೆಹ್ರಾಡೂನ್ನ ಮ್ಯಾಕ್ಸ್ ಆಸ್ಪತ್ರೆ ಆಶಿಶ್ ಯಾಗ್ನಿಕ್ ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Rishabh Pant Accident Max Hospital Releases First Official Update On Rishabh Pant's Health After Freak Car Accident.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm