ಬ್ರೇಕಿಂಗ್ ನ್ಯೂಸ್
02-01-23 12:34 pm Source: Vijayakarnataka ಕ್ರೀಡೆ
ತಮ್ಮ ಶಿಷ್ಯ ಹಾಗೂ ಚೈನಾಮನ್ ಸ್ಪಿನ್ನರ್ ಕುಲ್ದೀಪ್ ಯಾದವ್ ಅವರು ರಾಷ್ಟ್ರೀಯ ತಂಡಕ್ಕೆ ಕಮ್ಬ್ಯಾಕ್ ಮಾಡಲು ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹಾಗೂ ಕೋಚ್ ರಾಹುಲ್ ದ್ರಾವಿಡ್ ನೆರವು ನೀಡಿದ್ದಾರೆಂದು ಕಪಿಲ್ ಪಾಂಡೆ ಇತ್ತೀಚೆಗೆ ಹೇಳಿಕೊಂಡಿದ್ದಾರೆ.
ಸ್ಪೋರ್ಟ್ಸ್ ಕೀಡಾ ಜೊತೆ ಮಾತನಾಡಿದ ಕಪಿಲ್ ಪಾಂಡೆ,"ಕುಲ್ದೀಪ್ ಯಾದವ್ ಗಾಯಕ್ಕೆ ತುತ್ತಾಗಿ ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿದ್ದಾಗ ನಾಯಕ ರೋಹಿತ್ ಶರ್ಮಾ ನೆರವು ನೀಡಿದ್ದರು. ಅದೇ ರೀತಿ ಕುಲ್ದೀಪ್ ಯಾದವ್ಗೆ ಅಷ್ಟೇ ಸಹಕಾರವನ್ನು ರಾಹುಲ್ ದ್ರಾವಿಡ್ ಕೊಟ್ಟಿದ್ದರು. ಇವರ ಜೊತೆಗೆ ವಿರಾಟ್ ಕೊಹ್ಲಿ ಸೇರಿದಂತೆ ಹಲವು ಹಿರಿಯ ಆಟಗಾರರು ಕೂಡ ಕುಲ್ದೀಪ್ ಯಾದವ್ ಕಮ್ಬ್ಯಾಕ್ಗೆ ನೆರವಾಗಿದ್ದಾರೆ," ಎಂದರು.

ಗಾಯಕ್ಕೆ ತುತ್ತಾದ ಬಳಿಕ ಸ್ಪರ್ಧಾತ್ಮಕ ಕ್ರಿಕೆಟ್ಗೆ ಕಮ್ಬ್ಯಾಕ್ ಮಾಡಲು ಕುಲ್ದೀಪ್ ಯಾದವ್ ತುಂಬಾ ಕಠಿಣ ಪರಿಶ್ರಮ ಪಟ್ಟಿದ್ದಾರೆ. ಇದರ ಫಲವಾಗಿ ಅವರು 2022ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯಲ್ಲಿ 21 ವಿಕೆಟ್ ಕಬಳಿಸಿದ್ದರು ಎಂದರು.
"ಕುಲ್ದೀಪ್ ಯಾದವ್ ಅವರು ಕಮ್ಬ್ಯಾಕ್ ಮಾಡಲು ಸಾಕಷ್ಟು ಪರಿಶ್ರಮ ಪಟ್ಟಿದ್ದರು. ತಂಡದಲ್ಲಿ ಇರಲಿ ಅಥವಾ ಇಲ್ಲದೇ ಇರಲಿ ನಾವಿಬ್ಬರೂ ಜೊತೆಗೂಡಿ ಸಾಕಷ್ಟು ಕೆಲಸ ಮಾಡಿದ್ದೇವೆ. ಅದರಂತೆ ಅವರು ಪಟ್ಟ ಪರಿಶ್ರಮದಿಂದ ದಿಲ್ಲಿ ಕ್ಯಾಪಿಟಲ್ಸ್ ಪರ ಐಪಿಎಲ್ ಟೂರ್ನಿಯಲ್ಲಿ 21 ವಿಕೆಟ್ಗಳನ್ನು ಕಬಳಿಸಿದ್ದರು," ಎಂದು ಕಪಿಲ್ ಪಾಂಡೆ ತಿಳಿಸಿದರು.
ಟೆಸ್ಟ್, ಒಡಿಐ ಹಾಗೂ ಟಿ20 ಸೇರಿದಂತೆ ಮೂರೂ ಸ್ವರೂಪದಲ್ಲಿ ಆಡುವ ಸಲುವಾಗಿ ಕುಲ್ದೀಪ್ ಯಾದವ್ ಬೌಲಿಂಗ್ ಜೊತೆಗೆ ಬ್ಯಾಟಿಂಗ್ ಕಡೆಗೂ ಹೆಚ್ಚಿನ ಗಮನ ಹರಿಸುತ್ತಿದ್ದಾರೆ. ಈ ಹಾದಿಯಲ್ಲಿ ಯುವ ಸ್ಪಿನ್ನರ್ ಹೆಚ್ಚಿನ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
"ಗಾಯಕ್ಕೆ ತುತ್ತಾದ ಬಳಿಕ ಕುಲ್ದೀಪ್ ಯಾದವ್ ಯಾವುದೇ ಹಿನ್ನಡೆ ಅನುಭವಿಸಲಿಲ್ಲ. ಯಾವುದಕ್ಕೂ ಎದೆಗುಂದದೆ ಹೆಚ್ಚಿನ ಪರಿಶ್ರಮ ಪಟ್ಟು ಕಮ್ಬ್ಯಾಕ್ ಮಾಡಿದ್ದಾರೆ. ಭಾರತ ತಂಡದ ಪರ ಟೆಸ್ಟ್, ಏಕದಿನ ಹಾಗೂ ಟಿ20 ಸೇರಿದಂತೆ ಮೂರೂ ಸ್ವರೂಪದಲ್ಲಿ ಆಡಬೇಕೆಂದು ನಾವು ಅವರನ್ನು ತಯಾರಿ ಮಾಡಿದ್ದೇವೆ," ಎಂದು ತಿಳಿಸಿದರು.
ಬರೋಬ್ಬರಿ ಎರಡು ವರ್ಷಗಳ ಬಳಿಕ ಭಾರತ ಟೆಸ್ಟ್ ತಂಡಕ್ಕೆ ಮರಳಿದ್ದ ಕುಲ್ದೀಪ್ ಯಾದವ್ ಅವರು ಮೊದಲನೇ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್ನಲ್ಲಿ 40 ರನ್ ಹಾಗೂ 5 ವಿಕೆಟ್ ಸಾಧನೆ ಮಾಡಿದ್ದರು. ನಂತರ ದ್ವಿತೀಯ ಇನಿಂಗ್ಸ್ನಲ್ಲಿ 3 ವಿಕೆಟ್ ಕಬಳಿಸಿದ್ದರು. ಆ ಮೂಲಕ ಭಾರತ ತಂಡದ ಗೆಲುವಿಗೆ ನೆರವಾಗಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು.
"ಬಾಂಗ್ಲಾದೇಶ ವಿರುದ್ದದ ಟೆಸ್ಟ್ ಸರಣಿಯಲ್ಲಿಯೂ ಅವರು ಅತ್ಯುತ್ತಮ ಫಲಿತಾಂಶವನ್ನು ಪಡೆದುಕೊಂಡಿದ್ದರು. ಅವರು ಚೆಂಡನ್ನು ಎರಡೂ ಹಾದಿಯಲ್ಲಿ ತಿರುಗಿಸಿದ್ದರು ಹಾಗೂ ವೇಗವನ್ನು ಬದಲಿಸುತ್ತಿದ್ದರು. ಆದ್ದರಿಂದ ಕುಲ್ದೀಪ್ ಯಾದವ್ ಅವರ ಎಸೆತಗಳನ್ನು ಅರಿತುಕೊಳ್ಳುವುದು ಬಾಂಗ್ಲಾ ಬ್ಯಾಟ್ಸ್ಮನ್ಗಳಿಗೆ ತುಂಬಾ ಕಠಿಣವಾಗಿತ್ತು," ಎಂದು ಕಪಿಲ್ಪಾಂಡೆ ಹೇಳಿದರು.
Captain, Coach Helped Him Make Comeback-Kuldeep Yadavs Coach Kapil Pandey Praises Rohit Sharma, Rahul Dravid.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm