ಬ್ರೇಕಿಂಗ್ ನ್ಯೂಸ್
06-01-23 01:16 pm Source: news18 ಕ್ರೀಡೆ
ಭಾರತ ಮತ್ತು ಶ್ರೀಲಂಕಾ ನಡುವಿನ ಎರಡನೇ ಟಿ20 ಪಂದ್ಯದಲ್ಲಿ ಭಾರತ ರೋಚಕ ಸೋಲನ್ನು ಅನುಭವಿಸಿತು. ಟೀಂ ಇಂಡಿಯಾ ನಿಗದಿತ 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 190 ರನ್ ಗಳಿಸುವ ಮೂಲಕ 16 ರನ್ಗಳಿಂದ ಸೋಲನ್ನಪ್ಪಿತು.

ಈ ಮೂಲಕ 3 ಪಂದ್ಯಗಳ ಸರಣಿಯಲ್ಲಿ 1-1ರಿಂದ ಸಮಬಲ ಸಾಧಿಸಿದ್ದು, ಕೊನೆಯ ಪಂದ್ಯದ ಮೇಲೆ ನಿರೀಕ್ಷೆ ಹೆಚ್ಚಿದೆ. ಆದರೆ ಈ ಪಂದ್ಯದಲ್ಲಿ ಮುಖ್ಯವಾಗಿ ಅರ್ಷದೀಪ್ ಸಿಂಗ್ ಮೇಲೆ ಅಬೀಮಾನಿಗಳು ಬೇಸರಗೊಂಡರು.

T20 ಕ್ರಿಕೆಟ್ನಲ್ಲಿ, ಅರ್ಶ್ದೀಪ್ ಸಿಂಗ್ 41 ದಿನಗಳ ನಂತರ ಮರಳಿದರು. ಆದರೆ ಈ ಪಂದ್ಯವೇ ಅವರ ವೃತ್ತಿಜೀವನದ ಅತ್ಯಂತ ಕೆಟ್ಟ ಪಂದ್ಯವಾಯಿತು. ಅವರು ಈ ಪಂದ್ಯದಲ್ಲಿ ಅತ್ಯಂತ ಕೆಟ್ಟ ದಾಖಲೆಯನ್ನು ಬರೆದಿದ್ದಾರೆ.

ಅರ್ಷದೀಪ್ ಸಿಂಗ್ ಪಂದ್ಯದ ಎರಡನೇ ಓವರ್ನಲ್ಲಿ ಐದು ಎಸೆತಗಳನ್ನು ಸುರಕ್ಷಿತವಾಗಿ ಬೌಲ್ ಮಾಡಿದರು, ಆದರೆ ಅವರು ಕೊನೆಯ ಬೌಲ್ ಎಸೆಯಲು ಇನ್ನೂ ಹೆಚ್ಚನ 3 ಬೌಲ್ ಅನ್ನು ತೆಗೆದುಕೊಂಡರು. ಅಲ್ಲದೇ ಈ ಓವರ್ನಲ್ಲಿ ಬರೋಬ್ಬರಿ 9 ಎಸೆತ ಎಸೆದು 19 ರನ್ ನೀಡಿದರು.

ಅರ್ಷದೀಪ್ ಕೇವಲ 21 ಟಿ20 ಪಂದ್ಯಗಳನ್ನಾಡಿದ್ದು, 14 ನೋಬಾಲ್ ಎಸೆದಿದ್ದಾರೆ. ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ 5 ನೋಬಾಲ್ಗಳನ್ನು ಎಸೆದ ನಂತರ, ಅವರು T20 ಸ್ವರೂಪದಲ್ಲಿ ವಿಶ್ವದ ಅತಿ ಹೆಚ್ಚು ನೋಬಾಲ್ ಎಸೆದ ಬೌಲರ್ ಎಂಬ ಬೇಡದ ದಾಖಲೆಯನ್ನು ಮಾಡಿದರು.

ಟಿ20ಯಲ್ಲಿ ಒಟ್ಟು 11 ನೋಬಾಲ್ ಎಸೆದಿರುವ ಪಾಕಿಸ್ತಾನದ ಹಸನ್ ಅಲಿ ಎರಡನೇ ಸ್ಥಾನದಲ್ಲಿದ್ದಾರೆ. ಇನ್ನು, ನೋ ಬಾಲ್ನಿಂದಾಗಿ ಭಾರತ ಭಾರೀ ನಷ್ಟ ಅನುಭವಿಸಿದೆ. ಒಟ್ಟು 7 ನೋಬಾಲ್ ಗಳನ್ನು ಟೀಂ ಇಂಡಿಯಾ ಎಸೆದಿತ್ತು. ಪ್ರವಾಸಿ ತಂಡದ ಬ್ಯಾಟ್ಸ್ಮನ್ಗಳು ಇದರ ಸಂಪೂರ್ಣ ಲಾಭ ಪಡೆದರು.

ಇನ್ನು, ಸರಣಿ 1-1ರಿಂದ ಸಮಬಲವಾಗಿದ್ದು, ನಾಳೆ ಅಂದರೆ ಡಿಸೆಂಬರ್ 7ರಂದು ಸರಣಿಯ ಕೊನೆಯ ಪಂದ್ಯ ನಡೆಯಲಿದೆ. ಈ ಪಂದ್ಯವನ್ನು ಗೆದ್ದ ತಂಡ ಸರಣಿಯನ್ನು ಗೆಲ್ಲಲಿದೆ.
IND vs SL 2nd T20i team india bowler arshdeep singh no balls in one over
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm