ಬ್ರೇಕಿಂಗ್ ನ್ಯೂಸ್
07-01-23 12:26 pm Source: news18 ಕ್ರೀಡೆ
ಪ್ರವಾಸಿ ಶ್ರೀಲಂಕಾ ತಂಡವು ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ (ಎಸ್ಸಿಎ ಸ್ಟೇಡಿಯಂ) ಮೊದಲ ಬಾರಿಗೆ ಟಿ20 ಪಂದ್ಯವನ್ನು ಆಡಲಿದೆ. ಆತಿಥೇಯ ಭಾರತ ಇಲ್ಲಿ 4 ಟಿ20 ಪಂದ್ಯಗಳನ್ನು ಆಡಿದ್ದು, ಅದರಲ್ಲಿ 3ರಲ್ಲಿ ಗೆದ್ದು ಒಂದು ಪಂದ್ಯದಲ್ಲಿ ಸೋತಿದೆ. ಇಂದು ಭಾರತ ಮತ್ತು ಶ್ರೀಲಂಕಾ ನಡುವೆ ನಡೆಯಲಿರುವ ಮೂರನೇ T20 ಪಂದ್ಯದಲ್ಲಿ ರಾಜ್ಕೋಟ್ನಲ್ಲಿ ಹವಾಮಾನವು ಉತ್ತಮವಾಗಿರುತ್ತದೆ ಎಂದು ತಿಳಿದುಬಂದಿದೆ. ದಿನದ ಗರಿಷ್ಠ ತಾಪಮಾನವು 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನವು 24 ಡಿಗ್ರಿ ಸೆಲ್ಸಿಯಸ್ ಆಗಿರುತ್ತದೆ. ಇಡೀ ದಿನ ಮಳೆಯಾಗುವ ಸಾಧ್ಯತೆ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಸಂಪೂರ್ಣ ಪಂದ್ಯ ವೀಕ್ಷಿಸುವ ಅವಕಾಶ ಸಿಗಲಿದೆ.
ರಾಜ್ಕೋಟ್ನ ಪಿಚ್ ರಿಪೋರ್ಟ್:

ರಾಜ್ಕೋಟ್ನ ಪಿಚ್ ಬ್ಯಾಟ್ಸ್ಮನ್ಗಳಿಗೆ ಹೆಚ್ಚು ಸಹಾಯಕವಾಗಿದೆ. ಫ್ಲಾಟ್ ವಿಕೆಟ್ನಲ್ಲಿ, ಬೌಲರ್ಗಳು ವಿಕೆಟ್ಗಳನ್ನು ಪಡೆಯಲು ಸಾಕಷ್ಟು ಕಠಿಣ ಪರಿಶ್ರಮವನ್ನು ಮಾಡಬೇಕಾಗುತ್ತದೆ. ಬ್ಯಾಟರ್ಗಳು ಸಣ್ಣ ಬೌಂಡರಿಗಳ ಲಾಭವನ್ನು ಪಡೆಯಬಹುದು. ಅಂತಹ ಪರಿಸ್ಥಿತಿಯಲ್ಲಿ, ಈ ಪಿಚ್ನಲ್ಲಿ ಹೆಚ್ಚಿನ ಸ್ಕೋರಿಂಗ್ ಸ್ಪರ್ಧೆಯನ್ನು ಕಾಣಬಹುದು. ಇತ್ತೀಚಿನ ದಿನಗಳಲ್ಲಿ ದಕ್ಷಿಣ ಆಫ್ರಿಕಾ ಹೊರತುಪಡಿಸಿ, ಇಲ್ಲಿ ಮೊದಲು ಬ್ಯಾಟ್ ಮಾಡಿದ ತಂಡ ದೊಡ್ಡ ಸ್ಕೋರ್ ಮಾಡಿದೆ. ಕಳೆದ ವರ್ಷ ಭಾರತ ವಿರುದ್ಧದ ಟಿ20ಯಲ್ಲಿ ದಕ್ಷಿಣ ಆಫ್ರಿಕಾ ತಂಡ 87 ರನ್ಗಳಿಗೆ ಆಲೌಟ್ ಆಗಿತ್ತು. ಹೀಗಾಗಿ ನಾಳೆ ಟಾಸ್ ಗೆದ್ದ ನಾಯಕ ಮೊದಲು ಬ್ಯಾಟಿಂಗ್ ಮ=ಆಯ್ಕೆ ಮಾಡುವ ಸಾಧ್ಯತೆ ಇದೆ.

ಭಾರತ ಮತ್ತು ಶ್ರೀಲಂಕಾ ಹೆಡ್ ಟು ಹೆಡ್:
ಭಾರತ ಮತ್ತು ಶ್ರೀಲಂಕಾ ನಡುವೆ ಈವರೆಗೆ ಒಟ್ಟು 28 ಟಿ20 ಅಂತಾರಾಷ್ಟ್ರೀಯ ಪಂದ್ಯಗಳು ನಡೆದಿವೆ. ಟೀಂ ಇಂಡಿಯಾ 18 ಪಂದ್ಯಗಳನ್ನು ಗೆದ್ದಿದ್ದರೆ, ಶ್ರೀಲಂಕಾ 9 ಪಂದ್ಯಗಳನ್ನು ಗೆದ್ದಿದೆ. ಈ ಸಂದರ್ಭದಲ್ಲಿ ಒಂದು ಪಂದ್ಯ ರದ್ದಾಗಿತ್ತು. ಶ್ರೀಲಂಕಾ ವಿರುದ್ಧದ ಟಿ20ಯಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 7 ಪಂದ್ಯಗಳನ್ನು ಗೆದ್ದಿದ್ದರೆ, ಶ್ರೀಲಂಕಾ 2 ಪಂದ್ಯಗಳನ್ನು ಗೆದ್ದಿದೆ. ಚೇಸಿಂಗ್ ಸಮಯದಲ್ಲಿ ಟೀಂ ಇಂಡಿಯಾ ಶ್ರೀಲಂಕಾ ವಿರುದ್ಧ 10 ಪಂದ್ಯಗಳನ್ನು ಗೆದ್ದಿದ್ದರೆ, ಪ್ರವಾಸಿ ತಂಡದ ಖಾತೆಯಲ್ಲಿ 7 ಗೆಲುವುಗಳಿವೆ.
ಭಾರತ ಸಂಭಾವ್ಯ ಪ್ಲೇಯಿಂಗ್ 11: ಹಾರ್ದಿಕ್ ಪಾಂಡ್ಯ (ನಾಯಕ), ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್ , ಶಿವಂ ಮಾವಿ.
ಶ್ರೀಲಂಕಾ ಸಂಭಾವ್ಯ ಪ್ಲೇಯಿಂಗ್ 11: ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್, ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ಭಾನುಕ ರಾಜಪಕ್ಸೆ, ದಸುನ್ ಶಾನಕ(ನಾಯಕ), ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಮಹೀಶ್ ತೀಕ್ಷಣ, ಕಸುನ್ ರಜಿತಾ, ದಿಲ್ಶನ್ ಮಧುಶಂಕ.
India vs Sri Lanka 3rd T20 pitch report and weather forecast updates.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am