ಬ್ರೇಕಿಂಗ್ ನ್ಯೂಸ್
18-01-23 01:55 pm Source: news18 ಕ್ರೀಡೆ
ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಟೀಂ ಇಂಡಿಯಾ ಸಜ್ಜಾಗಿದೆ. ಭಾರತ ಮತ್ತು ಕಿವೀಸ್ ನಡುವಿನ ಮೊದಲ ಏಕದಿನ ಪಂದ್ಯ ಇಂದು ಉಪ್ಪಲ್ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.
ಈ ಪಂದ್ಯಕ್ಕಾಗಿ ಉಭಯ ತಂಡಗಳು ಹೈದರಾಬಾದ್ ತಲುಪಿವೆ. ಕಿವೀಸ್ ಆಟಗಾರರು ಮೂರು ದಿನ ಮುಂಚಿತವಾಗಿ ಹೈದರಾಬಾದ್ ತಲುಪಿದ್ದರು. ಸೋಮವಾರ ಸಂಜೆಯೇ ಭಾರತದ ಆಟಗಾರರು ಮುತ್ತಿನ ನಗರಿಗೆ ಆಗಮಿಸಿದ್ದಾರೆ.
4 ವರ್ಷಗಳ ಸುದೀರ್ಘ ಅಂತರದ ಬಳಿಕ ಉಪ್ಪಲ್ ಕ್ರೀಡಾಂಗಣದಲ್ಲಿ ಮತ್ತೊಂದು ಏಕದಿನ ಪಂದ್ಯ ನಡೆಯಲಿದೆ. 2019ರಲ್ಲಿ ಇಲ್ಲಿ ಕೊನೆಯ ಏಕದಿನ ಪಂದ್ಯ ನಡೆದಿತ್ತು. ಆ ನಂತರ ಮತ್ತೆ ಏಕದಿನ ಮಾದರಿಯಲ್ಲಿ ಪಂದ್ಯಗಳು ನಡೆದಿರಲಿಲ್ಲ.
ಉಪ್ಪಲ್ ಕ್ರೀಡಾಂಗಣದಲ್ಲಿ ಟೀಂ ಇಂಡಿಯಾ ಎಷ್ಟು ಪಂದ್ಯಗಳಲ್ಲಿ ಕಣಕ್ಕಿಳಿದಿದೆ? ಅದರಲ್ಲಿ ಎಷ್ಟು ಪಂದ್ಯಗಳನ್ನು ಗೆದ್ದಿದೆ ಎಂಬ ಅಂಕಿಅಂಶಗಳನ್ನು ನೋಡುವದಾದರೆ, ಇಲ್ಲಿ ಭಾರತ ಇಲ್ಲಿಯವರೆಗೆ ಈ ಮೈದಾನದಲ್ಲಿ 6 ಏಕದಿನ ಪಂದ್ಯಗಳನ್ನು ಆಡಿದೆ. ಆರರಲ್ಲಿ ಮೂರರಲ್ಲಿ ಸೋಲನ್ನು ಅನುಭವಿಸಿತ್ತು.
2005 ರಲ್ಲಿ ಉಪ್ಪಲ್ ಸ್ಟೇಡಿಯಂ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾ ಮತ್ತು ಭಾರತ ನಡುವಿನ ಪಂದ್ಯವನ್ನು ಆಯೋಜಿಸಿತ್ತು. ಭಾರತ 5 ವಿಕೆಟ್ಗಳಿಂದ ಸೋತಿತ್ತು. ಅದರ ನಂತರ 2007 ಮತ್ತು 2009ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಎರಡು ODIಗಳನ್ನು ಆಡಿದ್ದರು. ಈ ಎರಡರಲ್ಲೂ ಆಸೀಸ್ ಗೆಲುವು ಸಾಧಿಸಿತ್ತು.
ಆದರೆ 2011 ರಿಂದ ಇಲ್ಲಿ ಆಡಿದ ಎಲ್ಲಾ ಮೂರು ಏಕದಿನ ಪಂದ್ಯಗಳನ್ನು ಭಾರತ ಗೆದ್ದಿದೆ. 2011ರಲ್ಲಿ ಇಂಗ್ಲೆಂಡ್ ವಿರುದ್ಧ. 2014ರಲ್ಲಿ ಶ್ರೀಲಂಕಾ ವಿರುದ್ಧ ಮತ್ತು 2019ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಗೆಲುವು ದಾಖಲಿಸಿದೆ. ಕಳೆದ ವರ್ಷ ಆಸ್ಟ್ರೇಲಿಯಾ ವಿರುದ್ಧದ ಟಿ20 ಪಂದ್ಯವನ್ನೂ ಭಾರತ ಗೆದ್ದಿತ್ತು.
ಉಪ್ಪಲ್ ಕ್ರೀಡಾಂಗಣದಲ್ಲಿ ಏಕದಿನ ಮಾದರಿಯಲ್ಲಿ ಟೀಂ ಇಂಡಿಯಾದ ದಾಖಲೆ 50-50 ಆಗಿದೆ. ಅಲ್ಲದೇ ಇದೀಗ ನ್ಯೂಜಿಲ್ಯಾಂಡ್ ತಂಡ ಸಹ ಅದ್ಭುತ ಫಾರ್ಮ್ನಲ್ಲಿದೆ. ಪಾಕಿಸ್ತಾನವನ್ನು ತವರಿನಲ್ಲಿ 2-1ರ ಅಂತರದಲ್ಲಿ ಕಿವೀಸ್ ಸೋಲಿಸಿ ಸರಣಿ ಗೆದ್ದಿದೆ. ಹೀಗಾಗಿ ಇಂದಿನ ಪಂದ್ಯವು ಹೆಚ್ಚು ರೋಚಕವಾಗಿರುವ ಸಾಧ್ಯತೆ ಇದೆ.
ಈಗಾಗಲೇ ಪಂದ್ಯದ ಸಂಪೂರ್ಣ ಟಿಕೆಟ್ಗಳು ಮಾರಾಟವಾಗಿದ್ದು, ಇಂದಿನ ಪಂದ್ಯವು ಭಾರತೀಯ ಕಾಲಮಾನ ಮಧ್ಯಾಹ್ನ 1:30ಕ್ಕೆ ಆರಂಭವಾಗಲಿದೆ.
IND vs NZ1st odi live scores update team india records at Rajiv Gandhi international cricket stadium Hyderabad.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
19-08-25 06:59 pm
HK News Desk
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm