ಬ್ರೇಕಿಂಗ್ ನ್ಯೂಸ್
30-01-23 02:26 pm Source: news18 ಕ್ರೀಡೆ
ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಅತ್ಯಂತ ಜನಪ್ರಿಯ ಫ್ರಾಂಚೈಸಿಗಳಲ್ಲಿ ಒಂದಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅಪಾರ ಅಭಿಮಾನಿಗಳನ್ನು ಹೊಂದಿದೆ. ಈಗಾಗಲೇ ಐಪಿಎಲ್ 2023ಗೆ ಆರ್ಸಿಬಿ ಅಂತಿಮ ತಂಡವನ್ನು ಸಿದ್ಧಗೊಳಿಸಿದೆ. ಆದರೆ ಈ ಬಾರಿ ತಂಡದ ಸ್ಟಾರ್ ಆಲ್ ರೌಂಡರ್ ಆದ ಗ್ಲೆನ್ ಮ್ಯಾಕ್ಸ್ವೆಲ್ ಐಪಿಎಲ್ ಆರ್ಂಭಕ್ಕೂ ಮುನ್ನವೇ ಅಪಘಾತಕ್ಕೀಡಾಗಿದ್ದರು. ಬರ್ತಡೇ ಪಾರ್ಟಿ ವೇಳೆ ಮ್ಯಾಕ್ಸ್ವೆಲ್ ಕಾಲುಜಾರಿ ಬಿದ್ದು ಎಡ ಫೈಬುಲಾ ಮುರಿತಕ್ಕೆ ಒಳಗಾಗಿದ್ದರು.
ಹೀಗಾಗಿ ಮ್ಯಾಕ್ಸ್ವೆಲ್ ಆಸೀಸ್ ಪರ ಅನೇಕ ಸರಣಿಗಳಿಂದ ದೂರ ಉಳಿದಿದ್ದರು. ಅದಕ್ಕಾಗಿ ಶಸ್ತ್ರ ಚಿಕಿತ್ಸೆಗೂ ಅವರು ಒಳಗಾಗಿದ್ದರು. ಆದರೆ ಇದೀಗ ಆರ್ಸಿಬಿ ಅಭಿಮಾನಿಗಳಿಗೆ ಒಂದು ಸಮತಸದ ಸುದ್ದಿ ಕೇಳಿಬಂದಿದೆ. ಐಪಿಎಲ್ ಆರಂಭಕ್ಕೂ ಮುನ್ನವೇ ತಂಡಕ್ಕೆ ಸ್ಟಾರ್ ಆಲ್ರೌಂಡರ್ ಕಂಬ್ಯಾಕ್ ಮಾಡುವುದು ಖಚಿತವಾಗಿದೆ.
ಹೌದು, ಆರ್ಸಿಬಿ ತಂಡದ ಸ್ಟಾರ್ ಪ್ಲೇಯರ್ ಮ್ಯಾಕ್ಸ್ವೆಲ್ ಕೆಲವೇ ವಾರಗಳಲ್ಲಿ ರಾಷ್ಟ್ರೀಯ ತಂಡ ಸೇರಿಕೊಳ್ಳಲಿದ್ದಾರೆ ಎಂದು ಆಸ್ಟ್ರೇಲಿಯಾ ಪತ್ರಿಕೆಗಳು ವರದಿ ಮಾಡಿದೆ. ಇದರಿಂದಾಗಿ ಮ್ಯಾಕ್ಸ್ವೆಲ್ ಗುಣಮುಖರಾಗಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ಮ್ಯಾಕ್ಸ್ವೆಲ್ ಅವರು ಆಸ್ಟ್ರೇಲಿಯಾ ತಂಡದ ಪರ ಇನ್ನೇನು ಕೆಲವೇ ದಿನಗಳಲ್ಲಿ ಆಡುವ ಜೊತೆಗೆ ಐಪಿಎಲ್ 2023 ವೇಳೆ ಆರ್ಸಿಬಿ ತಂಡ ಸೇರಿಕೊಳ್ಳುವುದು ಖಚಿತವಾಗಿದೆ.
ಹೀಗಾಗಿ ಮ್ಯಾಕ್ಸ್ವೆಲ್ ಮೆಲ್ಬೋರ್ನ್ ನಲ್ಲಿ ನಡೆಯಲಿರುವ ಕ್ವೀನ್ಸ್ಲ್ಯಾಂಡ್ ವಿರುದ್ಧದ ಶೆಫೀಲ್ಡ್ ಶೀಲ್ಡ್ ಪಂದ್ಯದಲ್ಲಿ ವಿಕ್ಟೋರಿಯಾ ಪರವಾಗಿ ಕಣಕ್ಕಿಳಿಯಲಿದ್ದಾರಂತೆ. ಈ ಸುದ್ದಿ ಸಹ ಆರ್ಸಿಬಿ ಅಭಿಮಾಣಿಗಳ ಸಂತಸಕ್ಕೆ ಕಾರಣವಾಗಿದೆ. ಐಪಿಎಲ್ 2023ರ ಮಿನಿ ಹರಾಜು ಮುಗಿದಿದೆ. ಎಲ್ಲಾ ತಂಡಗಳು ಮುಂದಿನ ಸೀಸನ್ಗೆ ತಮ್ಮ ತಂಡವನ್ನು ಬಲಿಷ್ಠವಾಗಿ ಕಟ್ಟಿದೆ. ಐಪಿಎಲ್ 2023ರ 16ನೇ ಸೀಸನ್ಗೆ ಆರ್ಸಿಬಿ ತಂಡ 25 ಆಟಗಾರರ ಬಲಿಷ್ಠ ತಂಡವನ್ನು ಕಟ್ಟಿದೆ. ಹರಾಜಿಗೂ ಮುನ್ನ ತಂಡ 5 ಜನ ಆಟಗಾರರನ್ನು ಬಿಡುಗಡೆ ಮಾಡಿತ್ತು. ಆದರೆ ಈ ಹರಾಜಿನಲ್ಲಿ 7 ಆಟಗಾರರನ್ನು ತಂಡ ಖರೀದಿಸಿದೆ.
2023ಕ್ಕೆ RCB ಸಂಪೂರ್ಣ ತಂಡ: ಫಾಫ್ ಡು ಪ್ಲೆಸಿಸ್ (ಸಿ), ವಿರಾಟ್ ಕೊಹ್ಲಿ, ಸುಯಶ್ ಪ್ರಭುದೇಸಾಯಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನುಜ್ ರಾವತ್, ಫಿನ್ ಅಲೆನ್, ಗ್ಲೆನ್ ಮ್ಯಾಕ್ಸ್ವೆಲ್, ವನಿಂದು ಹಸರಂಗ, ಶಹಬಾಜ್ ಅಹ್ಮದ್, ಹರ್ಷಲ್ ಪಟೇಲ್, ಡೇವಿಡ್ ವಿಲ್ಲಿ, ಕರ್ಣ್ ಶರ್ಮಾ, ಮಹಿಪಾಲ್ ಲೊಮ್ರೋರ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್ ಹ್ಯಾಜಲ್ವುಡ್, ಸಿದ್ದಾರ್ಥ್ ಕೌಲ್, ಆಕಾಶ್ ದೀಪ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ , ವಿಲ್ ಜಾಕ್ಸ್ , ಮನೋಜ್ ಭಾಂಡಗೆ, ರಾಜನ್ ಕುಮಾರ್, ಅವಿನಾಶ್ ಸಿಂಗ್, ಸೋನು ಯಾದವ್.
IPL 2023 Glenn Maxwell will Join the RCB Team Soon.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm