ಬ್ರೇಕಿಂಗ್ ನ್ಯೂಸ್
02-02-23 02:15 pm Source: news18 ಕ್ರೀಡೆ
ಹಾರ್ದಿಕ್ ಪಾಂಡ್ಯ ಟಿ20 ಸರಣಿಯ ಟ್ರೋಫಿಯನ್ನು ಹಸ್ತಾಂತರಿಸಿದ ನಂತರ, ಅವರು ಆ ಕಪ್ ಅನ್ನು ಪೃಥ್ವಿ ಶಾಗೆ ನೀಡಿದರು. ಬಿಸಿಸಿಐ ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್ನಲ್ಲಿ ಈ ವೀಡಿಯೊವನ್ನು ಅಪ್ಲೋಡ್ ಮಾಡಿದೆ. ಹಾರ್ದಿಕ್ ಪಾಂಡ್ಯ ಅವರ ನಡೆಗೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಬಹಳ ಸಮಯದ ನಂತರ ಪೃಥ್ವಿ ಟಿ20 ತಂಡದಲ್ಲಿ ಸ್ಥಾನ ಪಡೆದರೂ ಸಹ ನ್ಯೂಜಿಲೆಂಡ್ ವಿರುದ್ಧ ಕಣಕ್ಕಿಳಿಯಲು ಸಾಧ್ಯವಾಗಲಿಲ್ಲ.
ಈ ಮೂಲಕ ಹಾರ್ದಿಕ್ ಪಾಂಡ್ಯ ಅವರು ರೋಹಿತ್ ಶರ್ಮಾ ಅವರ ಸಂಪ್ರದಾಯವನ್ನು ಮುಂದುವರೆಸಿದ್ದಾರೆ. ಹೌದು, ರೋಹಿತ್ ಕಿವೀಸ್ ವಿರುದ್ಧದ ಏಕದಿನ ಸರಣಿ ಗೆಲುವಿನ ನಂತರ ವಿಕೆಟ್ ಕೀಪರ್ ಕೆಎಸ್ ಭರತ್ ಗೆ ಟ್ರೋಫಿ ಎತ್ತುವ ಅವಕಾಶ ನೀಡಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ವಿಶೇಷ ಎಂದರೆ ಭರತ್ ಆ ಸರಣಿಯಲ್ಲಿ ಒಂದೇ ಒಂದು ಪಂದ್ಯವನ್ನೂ ಆಡಿರಲಿಲ್ಲ.
ಪೃಥ್ವಿ ಶಾ 2021ರಲ್ಲಿ ಕೊನೆಯ T20:
ಬಲಗೈ ಬ್ಯಾಟ್ಸ್ಮನ್ ಪೃಥ್ವಿ ಶಾ ಜುಲೈ 2021 ರಲ್ಲಿ ಶ್ರೀಲಂಕಾ ವಿರುದ್ಧ ತಮ್ಮ ಕೊನೆಯ T20 ಅಂತರಾಷ್ಟ್ರೀಯ ಪಂದ್ಯವನ್ನು ಆಡಿದ್ದರು. ಪ್ರಸ್ತುತ ಕಿವೀಸ್ ವಿರುದ್ಧದ ಟಿ20 ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಗಿಲ್ ಮತ್ತು ಇಶಾನ್ ಕಿಶನ್ ಅವರ ಪ್ರದರ್ಶನ ವಿಶೇಷವಾಗಿರಲಿಲ್ಲ. ಹೀಗಿರುವಾಗ ಮೂರನೇ ಟಿ20ಯಲ್ಲಿ ಪೃಥ್ವಿ ಶಾಗೆ ಅವಕಾಶ ಸಿಗುತ್ತದೆ ಎಂದು ನಿರೀಕ್ಷಿಸಲಾಗಿತ್ತು ಆದರೆ ಅದು ಸಾಧ್ಯವಾಗಲಿಲ್ಲ. ನಿರ್ಣಾಯಕ ಟಿ20ಯಲ್ಲಿ ಆರಂಭಿಕ ಜೋಡಿ ಗಿಲ್ ಮತ್ತು ಇಶಾನ್ ಮೇಲೆ ಟೀಂ ಮ್ಯಾನೇಜ್ಮೆಂಟ್ ವಿಶ್ವಾಸ ವ್ಯಕ್ತಪಡಿಸಿದೆ. ಗಿಲ್ ಶತಕ ಗಳಿಸಿದರೆ, ಇಶಾನ್ ಕಿಶನ್ ಮತ್ತೊಮ್ಮೆ ವಿಫಲರಾದರು.
ಪೃಥ್ವಿ ಟ್ರಿಪಲ್ ಸೆಂಚುರಿ:
ಪೃಥ್ವಿ ಶಾ ರಣಜಿ ಟ್ರೋಫಿ ಪಂದ್ಯದಲ್ಲಿ ಅಸ್ಸಾಂ ವಿರುದ್ಧ 379 ರನ್ಗಳ ಇನ್ನಿಂಗ್ಸ್ ಆಡುವ ಮೂಲಕ ಟೀಂ ಇಂಡಿಯಾದಲ್ಲಿ ಪುನರಾಗಮನ ಮಾಡುವಲ್ಲಿ ಯಶಸ್ವಿಯಾಗಿದ್ದರು. ಪಂದ್ಯದ ಕುರಿತು ನೋಡುವುದಾದರೆ, ಮೊದಲು ಬ್ಯಾಟಿಂಗ್ ಮಾಡಿದ ಭಾರತವು ಶುಭಮನ್ ಗಿಲ್ ಅವರ ಅಜೇಯ 126 ರನ್ಗಳ ಆಧಾರದ ಮೇಲೆ 234 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಕಿವೀಸ್ ತಂಡ 66 ರನ್ಗಳಿಗೆ ಆಲೌಟ್ ಆಯಿತು. ಈ ಮೂಲಕ ಹಾರ್ದಿಕ್ ಪಾಂಡ್ಯ ತಂಡ ಕಿವೀಸ್ವಿರುದ್ಧ 2-1 ಅಂತರದಿಂದ ಸರಣಿ ಜಯಿಸಿದೆ.
Hardik Pandya is Appreciated by everyone by Handing over the Trophy to Prithvi Shah.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
19-08-25 06:59 pm
HK News Desk
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm