ಬ್ರೇಕಿಂಗ್ ನ್ಯೂಸ್
04-02-23 11:22 am Source: news18 ಕ್ರೀಡೆ
ಬಿಸಿಸಿಐ ಮೂಲಗಳ ಪ್ರಕಾರ, ಪಾಕಿಸ್ತಾನವು ಸೆಪ್ಟೆಂಬರ್ನಲ್ಲಿ ಏಷ್ಯಾಕಪ್ ಅನ್ನು ಆಯೋಜಿಸುವ ಅವಕಾಶವಿಲ್ಲ. ಪಂದ್ಯಾವಳಿಯು ಯುನೈಟೆಡ್ ಅರಬ್ ಎಮಿರೇಟ್ಸ್ (UAE) ನಲ್ಲಿ ನಡೆಯಲಿದೆ ಮತ್ತು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಹೋಸ್ಟಿಂಗ್ ಹಕ್ಕುಗಳನ್ನು ಉಳಿಸಿಕೊಳ್ಳುತ್ತದೆ, ಅಥವಾ ಶ್ರೀಲಂಕಾ ಮತ್ತೊಂದು ಆಯ್ಕೆಯಾಗಿರಬಹುದು ಎಂದು ಹೇಳಲಾಗುತ್ತಿದೆ.
ಜಯ್ ಶಾ ಪ್ರಸ್ತುತ ಎಸಿಸಿ ಸಭೆಗಾಗಿ ಬಹ್ರೇನ್ನಲ್ಲಿದ್ದಾರೆ. ಬಿಸಿಸಿಐ ತನ್ನ ನಿಲುವು ಬದಲಿಸುವುದಿಲ್ಲ. ಸರ್ಕಾರದಿಂದ ಒಪ್ಪಿಗೆ ಸಿಗದ ಕಾರಣ ನಾವು ಪಾಕಿಸ್ತಾನಕ್ಕೆ ಹೋಗುವುದಿಲ್ಲ. ಪೇಶಾವರದಲ್ಲಿ ಇತ್ತೀಚೆಗೆ ನಡೆದ ಬಾಂಬ್ ಸ್ಫೋಟವು ಪಾಕಿಸ್ತಾನದಲ್ಲಿ ಕ್ರಿಕೆಟ್ ಪಂದ್ಯಾವಳಿಗಳನ್ನು ಪುನರಾರಂಭಿಸುವ ಬಗ್ಗೆ ಭದ್ರತಾ ಕಳವಳವನ್ನು ಹೆಚ್ಚಿಸಿದೆ ಎಂದು ಹೇಳಿದ್ದಾರೆ. ಕಳೆದ ವರ್ಷ ಡಿಸೆಂಬರ್ನಲ್ಲಿ ಎಸಿಸಿ ಅಧ್ಯಕ್ಷ ಶಾ ಅವರು ಕಾಂಟಿನೆಂಟಲ್ ಪಂದ್ಯಾವಳಿಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದರು ಮತ್ತು ಏಷ್ಯಾಕಪ್ ನಡೆಯುವ ಸ್ಥಳವನ್ನು ಉಲ್ಲೇಖಿಸಲಾಗಿಲ್ಲ. ಇದಾದ ಬಳಿಕ ಷಾ ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದಾರೆ ಎಂದು ಸೇಥಿ ಆರೋಪಿಸಿದರು. ಈ ಹಿಂದೆ ಏಷ್ಯಾದಲ್ಲಿ ನಡೆಯಲಿರುವ ಈ ಪ್ರತಿಷ್ಠಿತ ಟೂರ್ನಿಗೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮಾರ್ಗಸೂಚಿ ಸಿದ್ಧಪಡಿಸಿತ್ತು.

18 ವರ್ಷಗಳ ಹಿಂದೆ ಕೊನೆಯ ಪ್ರವಾಸ:
2005-06ರಲ್ಲಿ ಕೊನೆಯ ಬಾರಿಗೆ ಭಾರತ ಕ್ರಿಕೆಟ್ ತಂಡ ಪಾಕಿಸ್ತಾನ ಪ್ರವಾಸಕ್ಕೆ ತೆರಳಿತ್ತು. ನಂತರ ಭಾರತ ಏಕದಿನ ಸರಣಿಯಲ್ಲಿ ಪಾಕಿಸ್ತಾನವನ್ನು 4-1 ಅಂತರದಿಂದ ಸೋಲಿಸಿತು. ಅಂದಿನಿಂದ ಇದುವರೆಗೂ ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಹೋಗಿಲ್ಲ. ಅದೇ ಸಮಯದಲ್ಲಿ, ಪಾಕಿಸ್ತಾನ ತಂಡವು 2012 ರಲ್ಲಿ ಕೊನೆಯ ಬಾರಿಗೆ ಭಾರತಕ್ಕೆ ಬಂದಿತ್ತು. ನಂತರ ಉಭಯ ದೇಶಗಳ ನಡುವೆ ಟಿ20 ಹಾಗೂ ಏಕದಿನ ಸರಣಿ ನಡೆದಿಲ್ಲ. ಕೇವಲ ಐಸಿಸಿ ಟೂರ್ನಿಗಳಲ್ಲಿ ಮಾತ್ರ ಉಭಯ ತಂಡಗಳು ಮುಖಾಮುಖಿಯಾಗುತ್ತಿವೆ.
ದ್ವಿಪಕ್ಷೀಯ ಸರಣಿ ಸಹ ಇಲ್ಲ:
ಬಹುರಾಷ್ಟ್ರಗಳ ಪಂದ್ಯಾವಳಿಯ ಹೊರತಾಗಿಯೂ. ಭಾರತೀಯ ಪುರುಷರ ಕ್ರಿಕೆಟ್ ತಂಡವು 2023-2027ರಿಂದ 38 ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಇದರಲ್ಲಿ 20 ಸ್ವದೇಶದಲ್ಲಿ ಮತ್ತು 18 ವಿದೇಶಿ ನೆಲದಲ್ಲಿ ಸೇರಿವೆ. ಟೀಂ ಇಂಡಿಯಾ ತವರಿನಲ್ಲಿ 21 ಪಂದ್ಯಗಳನ್ನು ಆಡಲಿದ್ದು. ವಿದೇಶದಲ್ಲೂ ಅಷ್ಟೇ ಸಂಖ್ಯೆಯ ಏಕದಿನ ಪಂದ್ಯಗಳನ್ನು ಆಡಲಿದೆ. ಈ ಅವಧಿಯಲ್ಲಿ ಭಾರತ ತವರಿನಲ್ಲಿ 31 ಮತ್ತು ವಿದೇಶದಲ್ಲಿ 30 ಟಿ20 ಪಂದ್ಯಗಳನ್ನು ಆಡಬೇಕಿದೆ. ಹೀಗಾಗಿ ಟೀಂ ಇಂಡಿಯಾ ಶಡ್ಯೂಲ್ ಸಖತ್ ಬ್ಯುಸಿಯಾಗಿದ್ದು, ಪಾಕ್ ಜೊತೆಗಿನ ದ್ವಿಪಕ್ಷೀಯ ಸರಣಿ ಬಹುತೇಕ 2027ರವರೆಗೆ ನಡೆಯುವುದು ಡೌಟ್ ಎನ್ನಲಾಗುತ್ತಿದೆ.
Today will be the Final Decision whether India will go to Pakistan for Asia Cup 2023 or Not.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm