ಬ್ರೇಕಿಂಗ್ ನ್ಯೂಸ್
07-02-23 01:49 pm Source: news18 ಕ್ರೀಡೆ
ಇನ್ನು, ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಅರ್ಜೆಂಟೀನಾದ ಫುಟ್ಬಾಲ್ ತಂಡದ ನಾಯಕ ಲಿಯೋನೆಲ್ ಮೆಸ್ಸಿ ಅವರ ಜೆರ್ಸಿಯನ್ನು ಗಿಫ್ಟ್ ಆಗಿ ನೀಡಲಾಗಿದೆ. ಉಡುಗೊರೆಯನ್ನು ಪಡೆದ ಮೋದಿ ಸಹ ಸಂತಸ ವ್ಯಕ್ತಪಡಿಸಿದ್ದಾರೆ. ಇನ್ನು, ಇದರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಕಳೆದ ಡಿಸೆಂಬರ್ನಲ್ಲಿ ಲಿಯೋನೆಲ್ ಮೆಸ್ಸಿ ನಾಯಕತ್ವದ ಅರ್ಜೆಂಟೀನಾ ತಂಡವು ಫಿಫಾ ವಿಶ್ವಕಪ್ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದರು. ಈ ಗೆಲುವಿಗೆ ಮೋದಿ ಸಹ ಮೆಸ್ಸಿ ಹಾಗೂ ಅವರ ತಂಡಕ್ಕೆ ಶುಭಕೋರಿದ್ದರು.
ಮೆಸ್ಸಿಗೆ ಶುಭಕೋರಿದ್ದ ಮೋದಿ:
ಇನ್ನು, ಪ್ರಧಾನಿ ನರೇಂದ್ರ ಮೋದಿ FIFA ವಿಶ್ವಕಪ್ ಚಾಂಪಿಯನ್ ಆದ ಅರ್ಜೆಂಟೀನಾಗೆ ಅಭಿನಂದನೆ ಸಲ್ಲಿಸಿದ್ದರು. ಫಿಫಾ ವಿಶ್ವಕಪ್ 2022ರ ಅಂತಿಮ ಪಂದ್ಯವು ಫುಟ್ಬಾಲ್ನ ಅತ್ಯಂತ ರೋಚಕ ಪಂದ್ಯಗಳಲ್ಲಿ ಒಂದಾಗಿ ನೆನಪಿನಲ್ಲಿ ಉಳಿಯುತ್ತದೆ ಎಂದು ಅವರು ಹೇಳಿದ್ದರು. ಪ್ರಧಾನಿ ಮೋದಿ ಟ್ವೀಟ್ ಮಾಡಿ, 'ಇದು ಅತ್ಯಂತ ರೋಚಕ ಫುಟ್ಬಾಲ್ ಪಂದ್ಯಗಳಲ್ಲಿ ಒಂದಾಗಿದೆ. ಚಾಂಪಿಯನ್ಸ್ ಕಿರೀಟವನ್ನು ಅಲಂಕರಿಸಿದ ಅರ್ಜೆಂಟೀನಾಗೆ ಅಭಿನಂದನೆಗಳು. ಪಂದ್ಯಾವಳಿಯುದ್ದಕ್ಕೂ ಅವರು ಅದ್ಭುತ ಪ್ರದರ್ಶನ ನೀಡಿದರು. ಅರ್ಜೆಂಟೀನಾ ಮತ್ತು ಮೆಸ್ಸಿ ಅವರ ಲಕ್ಷಾಂತರ ಭಾರತೀಯ ಅಭಿಮಾನಿಗಳು ಈ ಅದ್ಭುತ ವಿಜಯದಿಂದ ತುಂಬಾ ಸಂತೋಷಪಟ್ಟಿದ್ದಾರೆ‘ ಎಂದು ಬರೆದುಕೊಂಡಿದ್ದರು.

ಮೆಸ್ಸಿ ಇದ್ದ ಹೋಟೆಲ್ ರೂಂ ಇದೀಗ ಮ್ಯೂಸಿಯಂ:
ಫುಟ್ಬಾಲ್ ಕೊನೆಯ ಪಂದ್ಯದ ದಿನ ಅರ್ಜೆಂಟೀನಾದ ಆಟಗಾರ ಮೆಸ್ಸಿ ಮತ್ತು ಸೆರ್ಗಿಯೋ ಅಗುರೊ ಅವರು ಒಂದೇ ಕೊಠಡಿಯಲ್ಲಿ ತಂಗಿದ್ದರು. 36 ವರ್ಷಗಳ ಬಳಿಕ ಅರ್ಜೆಂಟೀನಾ ಚಾಂಪಿಯನ್ಶಿಪ್ ಆಗಿದ್ದರ ಸವಿನೆನಪಿಗೆ ಮತ್ತು ಮೆಸ್ಸಿಯ ರೋಚಕ ಆಟಕ್ಕೆ ಗೌರವ ನೀಡಲು ಕತಾರ್ ವಿಶೇಷ ಮ್ಯೂಸಿಯಂ ಅನ್ನು ತೆರೆದಿದೆ. ಮೆಸ್ಸಿ ಉಳಿದುಕೊಂಡ ಕೋಣೆಗೆ ಇನ್ನುಮುಂದೆ ಉಳಿದುಕೊಳ್ಳಲು ಇತರರಿಗೆ ಪ್ರವೇಶ ನೀಡುವುದಿಲ್ಲ ಬದಲಿಗೆ ಅದನ್ನು ಮ್ಯೂಸಿಯಂ ಆಗಿ ಪರಿವರ್ತಿಸುವ ನಿರ್ಧಾರಕ್ಕೆ ಬಂದಿದೆ.
ಮೆಸ್ಸಿ ಉಳಿದುಕೊಂಡ ಕೋಣೆಯನ್ನು ಪ್ರವಾಸಿಗರಿಗೆ ಭೇಟಿ ನೀಡುವ ವಸ್ತುಸಂಗ್ರಹಾಲಯವನ್ನಾಗಿ ಮಾಡಲು ಯೋಜಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಹಾಗೆಯೇ ಕೆಲವು ಫೋಟೋಗಳನ್ನು ಸಹ ಫೇಸ್ಬುಕ್ನಲ್ಲಿ ಹಂಚಿಕೊಳ್ಳಲಾಗಿದೆ. ಮೆಸ್ಸಿಯ ವಸ್ತುಗಳು ವಿದ್ಯಾರ್ಥಿಗಳಿಗೆ ಮತ್ತು ಭವಿಷ್ಯದ ಪೀಳಿಗೆಗೆ ಪರಂಪರೆಯಾಗಿರುತ್ತವೆ ಎಂದಿದೆ.
PM Narendra Modi Presented with Lionel Messi Jersey Photo Viral.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm