ಬ್ರೇಕಿಂಗ್ ನ್ಯೂಸ್
08-02-23 01:48 pm Source: news18 ಕ್ರೀಡೆ
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ (WTC 2023) ಅಂಗವಾಗಿ ಆಸೀಸ್ ವಿರುದ್ಧದ ಸರಣಿ ಭಾರತಕ್ಕೆ ಅತ್ಯಂತ ಮಹ್ವತದ್ದಾಗಿದೆ. ಫೈನಲ್ಗೆ ತಲುಪಬೇಕಾದರೆ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ ಗೆಲ್ಲಲೇಬೇಕಾಗಿದೆ. ಮೊದಲ ಟೆಸ್ಟ್ ಫೆಬ್ರವರಿ 9 ರಿಂದ ನಾಗ್ಪುರದಲ್ಲಿ ನಡೆಯಲಿದೆ. ಈ ಕ್ರಮದಲ್ಲಿ ಉಭಯ ತಂಡಗಳ ಆಟಗಾರರು ನಾಗ್ಪುರದಲ್ಲಿ ಅಭ್ಯಾಸ ಆರಂಭಿಸಿದ್ದಾರೆ. ಭಾರತ ತಂಡ ಸಹ ಈಗಾಗಲೇ ಸರಣಿಗಾಗಿ ಭರ್ಜರಿ ಸಿದ್ಧತೆ ನಡೆಸಿದೆ.
ಭಾರತೀಯ ಪಿಚ್ಗಳಲ್ಲಿ ಸಹಜ ಸ್ಪಿನ್ಗೆ ಸಿದ್ಧವಾಗಿದ್ದೇವೆ ಎಂದು ಆಸ್ಟ್ರೇಲಿಯಾ ತಂಡ ಹೇಳಿದೆ. ಈ ಕ್ರಮದಲ್ಲಿ ಉಭಯ ತಂಡಗಳ ನಡುವಿನ ಟೆಸ್ಟ್ ಸರಣಿ ಕುತೂಹಲ ಮೂಡಿಸುವುದು ಖಚಿತ ಎಂದಾಗಿದೆ. ಆಸ್ಟ್ರೇಲಿಯ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಅಂತಿಮ ತಂಡದ ಆಯ್ಕೆಯನ್ನು ನಿರ್ಧರಿಸಲು ರೋಹಿತ್ಗೆ ನಾಯಕನಾಗಿ ಕಷ್ಟಕರವಾಗಬಹುದು. ಯಾರನ್ನು ಆಡಿಸಬೇಕು, ಯಾರನ್ನು ಬೆಂಚ್ಗೆ ಸೀಮಿತಗೊಳಿಸಬೇಕು ಎಂಬ ಗೊಂದಲದಲ್ಲಿ ಕೋಚ್ ದ್ರಾವಿಡ್ ಹಾಗೂ ನಾಯಕ ಇದ್ದಾರೆ.


ಮೂವರು ಸ್ಪಿನ್ನರ್ಗಳು, ಇಬ್ಬರು ವೇಗಿಗಳ ಸೂತ್ರದಲ್ಲಿ ಭಾರತ ಕಣಕ್ಕಿಳಿಯಬಹುದು. ಇಲ್ಲವಾದರೆ ಮೂವರು ಸ್ಪಿನ್ನರ್ಗಳು, ಮೂವರು ವೇಗಿಗಳನ್ನು ಕಣಕ್ಕಿಳಿಸಬಹುದು. ಆದರೆ ಪಿಚ್ ಸ್ಪಿನ್ಗೆ ಹೆಚ್ಚು ಸಹಾಯಕವಾಗಿರುವುದರಿಂದ ಇಬ್ಬರು ವೇಗಿಗಳೊಂದಿಗೆ ಕಣಕ್ಕೆ ಇಳಿಯುವ ಸಾಧ್ಯತೆ ಇದೆ. ಆ ಮೂಲಕ ಮೊದಲ ಟೆಸ್ಟ್ ನ ಅಂತಿಮ ತಂಡದಲ್ಲಿ ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ ಮತ್ತು ಅಕ್ಷರ್ ಪಟೇಲ್ ಬೆಂಚ್ಗೆ ಸೀಮಿತವಾಗಲಿದ್ದಾರೆ. ರಿಷಭ್ ಪಂತ್ ಅನುಪಸ್ಥಿತಿಯಲ್ಲಿ ವಿಕೆಟ್ ಕೀಪರ್ ಆಗಿ ಇಶಾನ್ ಕಿಶನ್ ಬದಲಿಗೆ ಎಸ್. ಭರತ್ ಪದಾರ್ಪಣೆ ಮಾಡುವ ಸಾಧ್ಯತೆ ಇದೆ.


ಟಿ20 ಮಾದರಿಯಲ್ಲಿ ಅಬ್ಬರಿಸುವ ಮೂಲಕ ಆಲ್ ಫಾರ್ಮೆಟ್ ಆಟಗಾರ ಎನಿಸಿಕೊಂಡಿರುವ ಸೂರ್ಯಕುಮಾರ್ ಯಾದವ್ ಟೆಸ್ಟ್ ಗೆ ಪದಾರ್ಪಣೆ ಮಾಡಲು ಇನ್ನು ಕೆಲವು ದಿನ ಕಾಯಬೇಕಿದೆ. ಗಿಲ್ ಮತ್ತು ರೋಹಿತ್ ಶರ್ಮಾ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ರಾಹುಲ್ ಐದನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಸಾಧ್ಯತೆ ಇದೆ.
IND vs AUS 1st test border Gavaskar Trophy team India Predicted Playing 11.
14-01-26 01:34 pm
Bangalore Correspondent
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm