ಬ್ರೇಕಿಂಗ್ ನ್ಯೂಸ್
09-02-23 12:31 pm Source: news18 ಕ್ರೀಡೆ
2023ರ ಮಹಿಳಾ ಟಿ20 ವಿಶ್ವಕಪ್ನ ಮೊದಲ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾ ಮಹಿಳಾ ತಂಡ ಕಳಪೆ ಪ್ರದರ್ಶನ ನೀಡಿದ್ದು ಗೊತ್ತೇ ಇದೆ. ಆಸ್ಟ್ರೇಲಿಯಾ ಕೈಯಲ್ಲಿ ಕೇವಲ 85 ರನ್ಗಳಿಗೆ ಕುಸಿದು ನಿರಾಸೆ ಮೂಡಿಸಿತು. ಆದರೆ, ಬಾಂಗ್ಲಾದೇಶ ವಿರುದ್ಧದ ಎರಡನೇ ಅಭ್ಯಾಸ ಪಂದ್ಯದಲ್ಲಿ ಭಾರತ ಭರ್ಜರಿ ಪ್ರದರ್ಶನ ನೀಡಿದೆ. ಅದರಲ್ಲೂ ವಿಕೆಟ್ ಕೀಪರ್ ಬ್ಯಾಟರ್ ರಿಚಾ ಘೋಷ್ ಅದ್ಭುತ ಪ್ರದರ್ಶನ ನೀಡಿದ್ದಾರೆ.
ಅವರು ಕೇವಲ 56 ಎಸೆತಗಳಲ್ಲಿ ಅಜೇಯ 91 ರನ್ ಗಳಿಸಿದರು. ಇದರಲ್ಲಿ 3 ಬೌಂಡರಿ ಹಾಗೂ 9 ಸಿಕ್ಸರ್ಗಳು ಬಂದಿದ್ದವು. ಇದೇ ವೇಳೆ ಬಾಂಗ್ಲಾದೇಶದ ಹಿರಿಯ ಬೌಲರ್ ಜಹನಾರಾ ಅವರಿಗೆ 4 ಓವರ್ಗಳಲ್ಲಿ 54 ರನ್ ನೀಡಿದರು. ರಿಚಾ ಘೋಷ್ ಇತ್ತೀಚೆಗೆ ಟಿ20 ಮಾದರಿಯಲ್ಲಿ ಸೂಪರ್ ಫಾರ್ಮ್ನಲ್ಲಿದ್ದಾರೆ. ಅದರಲ್ಲೂ ಟಿ20 ಮಾದರಿಯಲ್ಲಿ ಫಿನಿಶರ್ ಪಾತ್ರವನ್ನು ಉತ್ತಮವಾಗಿ ನಿರ್ವಹಿಸುತ್ತಿದ್ದಾರೆ. ರಿಚಾ ಘೋಷ್ ಕಳೆದ ವರ್ಷ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಫಿನಿಶರ್ ಆಗಿ ಉತ್ತಮ ಪ್ರದರ್ಶನ ನೀಡಿದ್ದರು.
ಇದೀಗ ಅಭಿಮಾನಿಗಳು ಅವರಿಗೆ ಲೇಡಿ ಧೋನಿ ಎಂಬ ಟ್ಯಾಗ್ ನೀಡಿದ್ದಾರೆ. ಈ ಪಂದ್ಯದಲ್ಲಿ ರಿಚಾ ಘೋಷ್ ಅವರೊಂದಿಗೆ ಜೆಮಿಮಾ ರಾಡ್ರಿಗಸ್ 27 ಎಸೆತಗಳಲ್ಲಿ 6 ಬೌಂಡರಿ, 1 ಸಿಕ್ಸರ್ ಮೂಲಕ 41 ರನ್ಗಳಿಸಿದರು. ಇದರಿಂದಾಗಿ ಭಾರತ 20 ಓವರ್ಗಳಲ್ಲಿ 5 ವಿಕೆಟ್ಗೆ 183 ರನ್ ಗಳಿಸಿತು. ಬಳಿಕ ಬಾಂಗ್ಲಾದೇಶ 20 ಓವರ್ಗಳಲ್ಲಿ 8 ವಿಕೆಟ್ಗೆ 131 ರನ್ಗಳಿಸುವ ಮೂಲಕ ಸೋಲನ್ನಪ್ಪಿತು. ಭಾರತದ ಬೌಲರ್ಗಳ ಪೈಕಿ ದೇವಿಕಾ ವೈದ್ಯ ಎರಡು ವಿಕೆಟ್ ಪಡೆದರು. ಈ ಟೂರ್ನಿಯಲ್ಲಿ ಭಾರತ ನೆಚ್ಚಿನ ತಂಡಗಳಲ್ಲಿ ಒಂದಾಗಿ ಕಣಕ್ಕಿಳಿಯುತ್ತಿದೆ.
ಆಸ್ಟ್ರೇಲಿಯಾದಲ್ಲಿ ನಡೆದ 2020ರ ಟಿ20 ವಿಶ್ವಕಪ್ನ ಫೈನಲ್ನಲ್ಲಿ ಟೀಂ ಇಂಡಿಯಾ ಸೋತಿತ್ತು. ನಂತರ ಆಸ್ಟ್ರೇಲಿಯಾ ವಿರುದ್ಧ ಸೋತ ಭಾರತ ರನ್ನರ್ ಅಪ್ ಆಗಿತ್ತು. ಹೀಗಾಗಿ ಈ ಬಾಋಇಯಾದರೂ ವಿಶ್ವಕಪ್ ಗೆಲ್ಲಬೇಕೆಂಬ ಹಠದಲ್ಲಿ ಟೀಂ ಇಂಡಿಯಾ ಕಣಕ್ಕಿಳಿದಿದೆ. ಭಾರತ ತನ್ನ ಮೊದಲ ಪಂದ್ಯದಲ್ಲಿ ತನ್ನ ಬಹುಕಾಲದ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ. ಫೆ.12ರಂದು ನಡೆಯಲಿರುವ ಈ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು ಎದುರಿಸಲಿದೆ. ಈ ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಸಂಜೆ ನಡೆಯಲಿದೆ. 6.30ಕ್ಕೆ ಆರಂಭವಾಗಲಿದೆ.
Womens T20 World Cup 2023 India Win against Bangladesh in Warm up Match.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
19-08-25 06:59 pm
HK News Desk
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm