ಬ್ರೇಕಿಂಗ್ ನ್ಯೂಸ್
09-02-23 12:31 pm Source: news18 ಕ್ರೀಡೆ
2023ರ ಮಹಿಳಾ ಟಿ20 ವಿಶ್ವಕಪ್ನ ಮೊದಲ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾ ಮಹಿಳಾ ತಂಡ ಕಳಪೆ ಪ್ರದರ್ಶನ ನೀಡಿದ್ದು ಗೊತ್ತೇ ಇದೆ. ಆಸ್ಟ್ರೇಲಿಯಾ ಕೈಯಲ್ಲಿ ಕೇವಲ 85 ರನ್ಗಳಿಗೆ ಕುಸಿದು ನಿರಾಸೆ ಮೂಡಿಸಿತು. ಆದರೆ, ಬಾಂಗ್ಲಾದೇಶ ವಿರುದ್ಧದ ಎರಡನೇ ಅಭ್ಯಾಸ ಪಂದ್ಯದಲ್ಲಿ ಭಾರತ ಭರ್ಜರಿ ಪ್ರದರ್ಶನ ನೀಡಿದೆ. ಅದರಲ್ಲೂ ವಿಕೆಟ್ ಕೀಪರ್ ಬ್ಯಾಟರ್ ರಿಚಾ ಘೋಷ್ ಅದ್ಭುತ ಪ್ರದರ್ಶನ ನೀಡಿದ್ದಾರೆ.
ಅವರು ಕೇವಲ 56 ಎಸೆತಗಳಲ್ಲಿ ಅಜೇಯ 91 ರನ್ ಗಳಿಸಿದರು. ಇದರಲ್ಲಿ 3 ಬೌಂಡರಿ ಹಾಗೂ 9 ಸಿಕ್ಸರ್ಗಳು ಬಂದಿದ್ದವು. ಇದೇ ವೇಳೆ ಬಾಂಗ್ಲಾದೇಶದ ಹಿರಿಯ ಬೌಲರ್ ಜಹನಾರಾ ಅವರಿಗೆ 4 ಓವರ್ಗಳಲ್ಲಿ 54 ರನ್ ನೀಡಿದರು. ರಿಚಾ ಘೋಷ್ ಇತ್ತೀಚೆಗೆ ಟಿ20 ಮಾದರಿಯಲ್ಲಿ ಸೂಪರ್ ಫಾರ್ಮ್ನಲ್ಲಿದ್ದಾರೆ. ಅದರಲ್ಲೂ ಟಿ20 ಮಾದರಿಯಲ್ಲಿ ಫಿನಿಶರ್ ಪಾತ್ರವನ್ನು ಉತ್ತಮವಾಗಿ ನಿರ್ವಹಿಸುತ್ತಿದ್ದಾರೆ. ರಿಚಾ ಘೋಷ್ ಕಳೆದ ವರ್ಷ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಫಿನಿಶರ್ ಆಗಿ ಉತ್ತಮ ಪ್ರದರ್ಶನ ನೀಡಿದ್ದರು.


ಇದೀಗ ಅಭಿಮಾನಿಗಳು ಅವರಿಗೆ ಲೇಡಿ ಧೋನಿ ಎಂಬ ಟ್ಯಾಗ್ ನೀಡಿದ್ದಾರೆ. ಈ ಪಂದ್ಯದಲ್ಲಿ ರಿಚಾ ಘೋಷ್ ಅವರೊಂದಿಗೆ ಜೆಮಿಮಾ ರಾಡ್ರಿಗಸ್ 27 ಎಸೆತಗಳಲ್ಲಿ 6 ಬೌಂಡರಿ, 1 ಸಿಕ್ಸರ್ ಮೂಲಕ 41 ರನ್ಗಳಿಸಿದರು. ಇದರಿಂದಾಗಿ ಭಾರತ 20 ಓವರ್ಗಳಲ್ಲಿ 5 ವಿಕೆಟ್ಗೆ 183 ರನ್ ಗಳಿಸಿತು. ಬಳಿಕ ಬಾಂಗ್ಲಾದೇಶ 20 ಓವರ್ಗಳಲ್ಲಿ 8 ವಿಕೆಟ್ಗೆ 131 ರನ್ಗಳಿಸುವ ಮೂಲಕ ಸೋಲನ್ನಪ್ಪಿತು. ಭಾರತದ ಬೌಲರ್ಗಳ ಪೈಕಿ ದೇವಿಕಾ ವೈದ್ಯ ಎರಡು ವಿಕೆಟ್ ಪಡೆದರು. ಈ ಟೂರ್ನಿಯಲ್ಲಿ ಭಾರತ ನೆಚ್ಚಿನ ತಂಡಗಳಲ್ಲಿ ಒಂದಾಗಿ ಕಣಕ್ಕಿಳಿಯುತ್ತಿದೆ.


ಆಸ್ಟ್ರೇಲಿಯಾದಲ್ಲಿ ನಡೆದ 2020ರ ಟಿ20 ವಿಶ್ವಕಪ್ನ ಫೈನಲ್ನಲ್ಲಿ ಟೀಂ ಇಂಡಿಯಾ ಸೋತಿತ್ತು. ನಂತರ ಆಸ್ಟ್ರೇಲಿಯಾ ವಿರುದ್ಧ ಸೋತ ಭಾರತ ರನ್ನರ್ ಅಪ್ ಆಗಿತ್ತು. ಹೀಗಾಗಿ ಈ ಬಾಋಇಯಾದರೂ ವಿಶ್ವಕಪ್ ಗೆಲ್ಲಬೇಕೆಂಬ ಹಠದಲ್ಲಿ ಟೀಂ ಇಂಡಿಯಾ ಕಣಕ್ಕಿಳಿದಿದೆ. ಭಾರತ ತನ್ನ ಮೊದಲ ಪಂದ್ಯದಲ್ಲಿ ತನ್ನ ಬಹುಕಾಲದ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ. ಫೆ.12ರಂದು ನಡೆಯಲಿರುವ ಈ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು ಎದುರಿಸಲಿದೆ. ಈ ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಸಂಜೆ ನಡೆಯಲಿದೆ. 6.30ಕ್ಕೆ ಆರಂಭವಾಗಲಿದೆ.
Womens T20 World Cup 2023 India Win against Bangladesh in Warm up Match.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm