ಬ್ರೇಕಿಂಗ್ ನ್ಯೂಸ್
10-02-23 01:28 pm Source: news18 ಕ್ರೀಡೆ
ನಾಯಕ ರೋಹಿತ್ ಶರ್ಮಾ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ (IND vs AUS) ಅದ್ಭುತ ಶತಕ ಬಾರಿಸುವ ಮೂಲಕ ಭಾರತ ತಂಡದ ಸ್ಕೋರ್ ಹೆಚ್ಚಿಸುವಲ್ಲಿ ನೆರವಾಗಿದ್ದಾರೆ. ರೋಹಿತ್ ನಾಯಕನಾಗಿ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಮೊದಲ ಬಾರಿಗೆ ಆಡುತ್ತಿದ್ದು, ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ರೋಹಿತ್ ತಮ್ಮ ಟೆಸ್ಟ್ ವೃತ್ತಿಜೀವನದ 9ನೇ ಶತಕ ಸಿಡಿಸಿದ್ದಾರೆ. ಸುದೀರ್ಘ ಅವಧಿಯ ಬಳಿಕ ರೋಹಿತ್ ಶತಕ ಸಿಡಿಸಿದ್ದಾರೆ.
ರೋಹಿತ್ ಈ ಹಿಂದೆ 2021ರ ಸೆಪ್ಟೆಂಬರ್ನಲ್ಲಿ ಓವಲ್ನಲ್ಲಿ ಇಂಗ್ಲೆಂಡ್ ವಿರುದ್ಧ ಕೊನೆಯ ಶತಕ ದಾಖಲಿಸಿದ್ದರು. ರೋಹಿತ್ 171 ಎಸೆತಗಳಲ್ಲಿ ಶತಕ ಪೂರೈಸಿದರು. ಅವರು ತಮ್ಮ ಶತಕದಲ್ಲಿ 14 ಬೌಂಡರಿ ಮತ್ತು 2 ಸಿಕ್ಸರ್ಗಳನ್ನು ಬಾರಿಸಿದರು. ಇನ್ನು, ರೋಹಿತ್ ಮೊದಲ ವಿಕೆಟ್ಗೆ ಕೆಎಲ್ ರಾಹುಲ್ ಜೊತೆ 76 ರನ್ ಜೊತೆಯಾಟ ನಡೆಸಿದರು. ಬಳಿಕ ಆರ್ ಅಶ್ವಿನ್ ಜೊತೆ ಎರಡನೇ ವಿಕೆಟ್ ಗೆ 42 ರನ್ ಸೇರಿಸಿದರು.
ಕೆಎಲ್ ರಾಹುಲ್ 71 ಎಸೆತಗಳಲ್ಲಿ 20 ರನ್ ಗಳಿಸಿದರೆ, ಆರ್ ಅಶ್ವಿನ್ 23 ರನ್ ಗಳಿಸಿ ಔಟಾದರು. ಚೇತೇಶ್ವರ ಪೂಜಾರ ಸಹ ಕೇವಲ 7 ರನ್ ಗಳಿಸಿ ಪೆವಿಲಿಯನ್ ಗೆ ಮರಳಿದರು. ವಿರಾಟ್ ಕೊಹ್ಲಿ ಕೂಡ ನಿರಾಸೆ ಮೂಡಿಸಿದ್ದಾರೆ. ಕೊಹ್ಲಿ 26 ಎಸೆತಗಳಲ್ಲಿ 12 ರನ್ ಕೊಡುಗೆ ನೀಡಿದರು. ರೋಹಿತ್ ಶರ್ಮಾ ಟೆಸ್ಟ್ ಮಾದರಿಯಲ್ಲಿ ಕಳೇದ ಕೆಲ ವರ್ಷಗಳಿಂದ ಶತಕ ಗಳಿಸಲು ಪರದಾಡುತ್ತಿದ್ದರು. ಹೀಗಾಗಿ ಆಸೀಸ್ ವಿರುದ್ಧದ ಸರಣಿಯಲ್ಲಿ ಅವರ ಮೇಲೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆಯನ್ನು ಇಟ್ಟಿದ್ದರು. ಅದರಂತೆ ಇಂದು ಭರ್ಜರಿ ಶತಕ ಸಿಡಿಸಿ ಮಿಂಚಿದರು.
ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಎಸ್.ಭರತ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಆರ್. ಅಶ್ವಿನ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.
IND vs AUS 1st 2nd Day Rohit Sharma hits 9th Test Century against Australia Nagpur Test.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 11:22 am
HK News Desk
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
14-10-25 11:19 am
Mangalore Correspondent
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm