ಬ್ರೇಕಿಂಗ್ ನ್ಯೂಸ್
23-02-23 02:05 pm Source: news18 ಕ್ರೀಡೆ
ಮೊದಲ ಸೀಸನ್ನಲ್ಲಿ ಯಾವುದೇ ನಿರೀಕ್ಷೆಯಿಲ್ಲದೆ ಆಡಿದ ಗುಜರಾತ್ ಟೈಟಾನ್ಸ್ ಐಪಿಎಲ್ 2022ರ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ತಂಡ ಅದ್ಭುತ ಪ್ರದರ್ಶನ ನೀಡಿತು. ಐಪಿಎಲ್ 2023 ಪ್ರಾರಂಭವಾಗಲು ಇನ್ನು ಒಂದು ತಿಂಗಳು ಬಾಕಿ ಉಳಿದಿದೆ. ಮಾರ್ಚ್ 31 ರಿಂದ ಐಪಿಎಲ್ ಲೀಗ್ ಆರಂಭವಾಗಲಿದೆ. ಬಿಸಿಸಿಐ ಈಗಾಗಲೇ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
ಕಳೆದ ಋತುವಿನಲ್ಲಿ ಗುಜರಾತ್ ಟೈಟಾನ್ಸ್ ಚಾಂಪಿಯನ್ ಆಗಲು ಹಾರ್ದಿಕ್ ಪಾಂಡ್ಯ ನಾಯಕತ್ವದ ಜೊತೆಗೆ ದಕ್ಷಿಣ ಆಫ್ರಿಕಾದ ಸ್ಟಾರ್ ಡೇವಿಡ್ ಮಿಲ್ಲರ್ ಕೂಡ ಕಾರಣ. ಫಿನಿಶರ್ ಆಗಿ ಅವರು ಅದ್ಭುತ ಪ್ರದರ್ಶನ ನೀಡಿದರು. ಇತ್ತೀಚೆಗೆ, ಮಿಲ್ಲರ್ ಪಾಕಿಸ್ತಾನ್ ಸೂಪರ್ ಲೀಗ್ 2023ರಲ್ಲಿ ಮುಲ್ತಾನ್ ಸುಲ್ತಾನ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಈ ವೇಳೆ ಮುಲ್ತಾನ್ ಸುಲ್ತಾನ್ ತಂಡ ಇಸ್ಲಾಮಾಬಾದ್ ಯುನೈಟೆಡ್ ತಂಡವನ್ನು 52 ರನ್ ಗಳಿಂದ ಸೋಲಿಸಿತು.


ಈ ಯಶಸ್ಸಿನಲ್ಲಿ ಮಿಲ್ಲರ್ ಪ್ರಮುಖ ಪಾತ್ರ ವಹಿಸಿದರು. ಅವರು ಕೇವಲ 25 ಎಸೆತಗಳಲ್ಲಿ 52 ರನ್ ಗಳಿಸಿದರು. ಇದರಲ್ಲಿ 3 ಬೌಂಡರಿ ಹಾಗೂ 4 ಸಿಕ್ಸರ್ಗಳು ಸೇರಿದ್ದವು. ಮಿಲ್ಲರ್ ಅವರ ಕಿಲ್ಲರ್ ಇನ್ನಿಂಗ್ಸ್ನಿಂದ ಮುಲ್ತಾನ್ ತಂಡ 20 ಓವರ್ಗಳಲ್ಲಿ 4 ವಿಕೆಟ್ಗೆ 190 ರನ್ ಗಳಿಸಿತು. ಬಳಿಕ ಇಸ್ಲಾಮಾಬಾದ್ 17.5 ಓವರ್ಗಳಲ್ಲಿ 138 ರನ್ಗಳಿಗೆ ಆಲೌಟಾಯಿತು. ರುಸ್ಸಿ ವ್ಯಾನ್ ಡೆರ್ ಡ್ಯುಸೆನ್ 49 ರನ್ ಗಳಿಸಿದರು. ಮುಲ್ತಾನ್ ಬೌಲರ್ ಆಗಿ ಅಬ್ಬಾಸ್ 4 ವಿಕೆಟ್ ಪಡೆದರು.



ಸದ್ಯದಲ್ಲೇ ಆರಂಭವಾಗಲಿರುವ ಐಪಿಎಲ್ 16ನೇ ಸೀಸನ್ಗೂ ಮುನ್ನ ಮಿಲ್ಲರ್ ಅವರ ಈ ಭರ್ಜರಿ ಆಟ ಗುಜರಾತ್ ತಂಡಕ್ಕೆ ಹೊಸ ಚೈತನ್ಯವನ್ನು ಮೂಡಿಸಿದೆ. ಕಳೆದ ಐಪಿಎಲ್ನಿಂದಲೂ ಮಿಲ್ಲರ್ ಸೂಪರ್ ಫಾರ್ಮ್ನಲ್ಲಿದ್ದರು. ಹಾಲಿ ಚಾಂಪಿಯನ್ ಆಗಿ ಪ್ರವೇಶಿಸುತ್ತಿರುವ ಗುಜರಾತ್ ಟೈಟಾನ್ಸ್ ತನ್ನ ಮೊದಲ ಪಂದ್ಯದಲ್ಲಿ ನಾಲ್ಕು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯ ಮಾರ್ಚ್ 31 ರಂದು ಅಹಮದಾಬಾದ್ ಮೈದಾನದಲ್ಲಿ ನಡೆಯಲಿದೆ.
IPL 2023 David Miller of Gujarat Titans batted Brilliantly in the PSL League.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am