ಬ್ರೇಕಿಂಗ್ ನ್ಯೂಸ್
23-02-23 02:05 pm Source: news18 ಕ್ರೀಡೆ
ಮೊದಲ ಸೀಸನ್ನಲ್ಲಿ ಯಾವುದೇ ನಿರೀಕ್ಷೆಯಿಲ್ಲದೆ ಆಡಿದ ಗುಜರಾತ್ ಟೈಟಾನ್ಸ್ ಐಪಿಎಲ್ 2022ರ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ತಂಡ ಅದ್ಭುತ ಪ್ರದರ್ಶನ ನೀಡಿತು. ಐಪಿಎಲ್ 2023 ಪ್ರಾರಂಭವಾಗಲು ಇನ್ನು ಒಂದು ತಿಂಗಳು ಬಾಕಿ ಉಳಿದಿದೆ. ಮಾರ್ಚ್ 31 ರಿಂದ ಐಪಿಎಲ್ ಲೀಗ್ ಆರಂಭವಾಗಲಿದೆ. ಬಿಸಿಸಿಐ ಈಗಾಗಲೇ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
ಕಳೆದ ಋತುವಿನಲ್ಲಿ ಗುಜರಾತ್ ಟೈಟಾನ್ಸ್ ಚಾಂಪಿಯನ್ ಆಗಲು ಹಾರ್ದಿಕ್ ಪಾಂಡ್ಯ ನಾಯಕತ್ವದ ಜೊತೆಗೆ ದಕ್ಷಿಣ ಆಫ್ರಿಕಾದ ಸ್ಟಾರ್ ಡೇವಿಡ್ ಮಿಲ್ಲರ್ ಕೂಡ ಕಾರಣ. ಫಿನಿಶರ್ ಆಗಿ ಅವರು ಅದ್ಭುತ ಪ್ರದರ್ಶನ ನೀಡಿದರು. ಇತ್ತೀಚೆಗೆ, ಮಿಲ್ಲರ್ ಪಾಕಿಸ್ತಾನ್ ಸೂಪರ್ ಲೀಗ್ 2023ರಲ್ಲಿ ಮುಲ್ತಾನ್ ಸುಲ್ತಾನ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಈ ವೇಳೆ ಮುಲ್ತಾನ್ ಸುಲ್ತಾನ್ ತಂಡ ಇಸ್ಲಾಮಾಬಾದ್ ಯುನೈಟೆಡ್ ತಂಡವನ್ನು 52 ರನ್ ಗಳಿಂದ ಸೋಲಿಸಿತು.


ಈ ಯಶಸ್ಸಿನಲ್ಲಿ ಮಿಲ್ಲರ್ ಪ್ರಮುಖ ಪಾತ್ರ ವಹಿಸಿದರು. ಅವರು ಕೇವಲ 25 ಎಸೆತಗಳಲ್ಲಿ 52 ರನ್ ಗಳಿಸಿದರು. ಇದರಲ್ಲಿ 3 ಬೌಂಡರಿ ಹಾಗೂ 4 ಸಿಕ್ಸರ್ಗಳು ಸೇರಿದ್ದವು. ಮಿಲ್ಲರ್ ಅವರ ಕಿಲ್ಲರ್ ಇನ್ನಿಂಗ್ಸ್ನಿಂದ ಮುಲ್ತಾನ್ ತಂಡ 20 ಓವರ್ಗಳಲ್ಲಿ 4 ವಿಕೆಟ್ಗೆ 190 ರನ್ ಗಳಿಸಿತು. ಬಳಿಕ ಇಸ್ಲಾಮಾಬಾದ್ 17.5 ಓವರ್ಗಳಲ್ಲಿ 138 ರನ್ಗಳಿಗೆ ಆಲೌಟಾಯಿತು. ರುಸ್ಸಿ ವ್ಯಾನ್ ಡೆರ್ ಡ್ಯುಸೆನ್ 49 ರನ್ ಗಳಿಸಿದರು. ಮುಲ್ತಾನ್ ಬೌಲರ್ ಆಗಿ ಅಬ್ಬಾಸ್ 4 ವಿಕೆಟ್ ಪಡೆದರು.



ಸದ್ಯದಲ್ಲೇ ಆರಂಭವಾಗಲಿರುವ ಐಪಿಎಲ್ 16ನೇ ಸೀಸನ್ಗೂ ಮುನ್ನ ಮಿಲ್ಲರ್ ಅವರ ಈ ಭರ್ಜರಿ ಆಟ ಗುಜರಾತ್ ತಂಡಕ್ಕೆ ಹೊಸ ಚೈತನ್ಯವನ್ನು ಮೂಡಿಸಿದೆ. ಕಳೆದ ಐಪಿಎಲ್ನಿಂದಲೂ ಮಿಲ್ಲರ್ ಸೂಪರ್ ಫಾರ್ಮ್ನಲ್ಲಿದ್ದರು. ಹಾಲಿ ಚಾಂಪಿಯನ್ ಆಗಿ ಪ್ರವೇಶಿಸುತ್ತಿರುವ ಗುಜರಾತ್ ಟೈಟಾನ್ಸ್ ತನ್ನ ಮೊದಲ ಪಂದ್ಯದಲ್ಲಿ ನಾಲ್ಕು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯ ಮಾರ್ಚ್ 31 ರಂದು ಅಹಮದಾಬಾದ್ ಮೈದಾನದಲ್ಲಿ ನಡೆಯಲಿದೆ.
IPL 2023 David Miller of Gujarat Titans batted Brilliantly in the PSL League.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm