ಬ್ರೇಕಿಂಗ್ ನ್ಯೂಸ್
23-02-23 02:05 pm Source: news18 ಕ್ರೀಡೆ
ಮೊದಲ ಸೀಸನ್ನಲ್ಲಿ ಯಾವುದೇ ನಿರೀಕ್ಷೆಯಿಲ್ಲದೆ ಆಡಿದ ಗುಜರಾತ್ ಟೈಟಾನ್ಸ್ ಐಪಿಎಲ್ 2022ರ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ತಂಡ ಅದ್ಭುತ ಪ್ರದರ್ಶನ ನೀಡಿತು. ಐಪಿಎಲ್ 2023 ಪ್ರಾರಂಭವಾಗಲು ಇನ್ನು ಒಂದು ತಿಂಗಳು ಬಾಕಿ ಉಳಿದಿದೆ. ಮಾರ್ಚ್ 31 ರಿಂದ ಐಪಿಎಲ್ ಲೀಗ್ ಆರಂಭವಾಗಲಿದೆ. ಬಿಸಿಸಿಐ ಈಗಾಗಲೇ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
ಕಳೆದ ಋತುವಿನಲ್ಲಿ ಗುಜರಾತ್ ಟೈಟಾನ್ಸ್ ಚಾಂಪಿಯನ್ ಆಗಲು ಹಾರ್ದಿಕ್ ಪಾಂಡ್ಯ ನಾಯಕತ್ವದ ಜೊತೆಗೆ ದಕ್ಷಿಣ ಆಫ್ರಿಕಾದ ಸ್ಟಾರ್ ಡೇವಿಡ್ ಮಿಲ್ಲರ್ ಕೂಡ ಕಾರಣ. ಫಿನಿಶರ್ ಆಗಿ ಅವರು ಅದ್ಭುತ ಪ್ರದರ್ಶನ ನೀಡಿದರು. ಇತ್ತೀಚೆಗೆ, ಮಿಲ್ಲರ್ ಪಾಕಿಸ್ತಾನ್ ಸೂಪರ್ ಲೀಗ್ 2023ರಲ್ಲಿ ಮುಲ್ತಾನ್ ಸುಲ್ತಾನ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಈ ವೇಳೆ ಮುಲ್ತಾನ್ ಸುಲ್ತಾನ್ ತಂಡ ಇಸ್ಲಾಮಾಬಾದ್ ಯುನೈಟೆಡ್ ತಂಡವನ್ನು 52 ರನ್ ಗಳಿಂದ ಸೋಲಿಸಿತು.
ಈ ಯಶಸ್ಸಿನಲ್ಲಿ ಮಿಲ್ಲರ್ ಪ್ರಮುಖ ಪಾತ್ರ ವಹಿಸಿದರು. ಅವರು ಕೇವಲ 25 ಎಸೆತಗಳಲ್ಲಿ 52 ರನ್ ಗಳಿಸಿದರು. ಇದರಲ್ಲಿ 3 ಬೌಂಡರಿ ಹಾಗೂ 4 ಸಿಕ್ಸರ್ಗಳು ಸೇರಿದ್ದವು. ಮಿಲ್ಲರ್ ಅವರ ಕಿಲ್ಲರ್ ಇನ್ನಿಂಗ್ಸ್ನಿಂದ ಮುಲ್ತಾನ್ ತಂಡ 20 ಓವರ್ಗಳಲ್ಲಿ 4 ವಿಕೆಟ್ಗೆ 190 ರನ್ ಗಳಿಸಿತು. ಬಳಿಕ ಇಸ್ಲಾಮಾಬಾದ್ 17.5 ಓವರ್ಗಳಲ್ಲಿ 138 ರನ್ಗಳಿಗೆ ಆಲೌಟಾಯಿತು. ರುಸ್ಸಿ ವ್ಯಾನ್ ಡೆರ್ ಡ್ಯುಸೆನ್ 49 ರನ್ ಗಳಿಸಿದರು. ಮುಲ್ತಾನ್ ಬೌಲರ್ ಆಗಿ ಅಬ್ಬಾಸ್ 4 ವಿಕೆಟ್ ಪಡೆದರು.
ಸದ್ಯದಲ್ಲೇ ಆರಂಭವಾಗಲಿರುವ ಐಪಿಎಲ್ 16ನೇ ಸೀಸನ್ಗೂ ಮುನ್ನ ಮಿಲ್ಲರ್ ಅವರ ಈ ಭರ್ಜರಿ ಆಟ ಗುಜರಾತ್ ತಂಡಕ್ಕೆ ಹೊಸ ಚೈತನ್ಯವನ್ನು ಮೂಡಿಸಿದೆ. ಕಳೆದ ಐಪಿಎಲ್ನಿಂದಲೂ ಮಿಲ್ಲರ್ ಸೂಪರ್ ಫಾರ್ಮ್ನಲ್ಲಿದ್ದರು. ಹಾಲಿ ಚಾಂಪಿಯನ್ ಆಗಿ ಪ್ರವೇಶಿಸುತ್ತಿರುವ ಗುಜರಾತ್ ಟೈಟಾನ್ಸ್ ತನ್ನ ಮೊದಲ ಪಂದ್ಯದಲ್ಲಿ ನಾಲ್ಕು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯ ಮಾರ್ಚ್ 31 ರಂದು ಅಹಮದಾಬಾದ್ ಮೈದಾನದಲ್ಲಿ ನಡೆಯಲಿದೆ.
IPL 2023 David Miller of Gujarat Titans batted Brilliantly in the PSL League.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
19-08-25 06:59 pm
HK News Desk
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm