ಬ್ರೇಕಿಂಗ್ ನ್ಯೂಸ್
25-02-23 01:17 pm Source: news18 ಕ್ರೀಡೆ
ಇಂಡಿಯನ್ ಪ್ರೀಮಿಯರ್ ಲೀಗ್ (IPL) 2023 ಸೀಸನ್ಗೆ ಕ್ಷಣಗಣನೆ ಆರಂಭವಾಗಿದೆ. ಐಪಿಎಲ್ 16ನೇ ಸೀಸನ್ ಮಾರ್ಚ್ 31ರಿಂದ ಮೇ 28ರ ವರೆಗೆ ನಡೆಯಲಿದೆ. ಬಿಸಿಸಿಐ ಈಗಾಗಲೇ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದೇ ಸಮಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡದ ಹೊಸ ನಾಯಕನನ್ನು ಘೋಷಿಸಿದೆ. ಇತ್ತೀಚೆಗೆ ಮುಕ್ತಾಯಗೊಂಡ ದಕ್ಷಿಣ ಆಫ್ರಿಕಾ 20 ಲೀಗ್ನಲ್ಲಿ, ಸನ್ರೈಸರ್ಸ್ ಈಸ್ಟರ್ನ್ ಕೇಪ್ಗೆ ನಾಯಕ ಮಾರ್ಕ್ರಾಮ್ ಅವರಿಗೆ ಎಸ್ಆರ್ಎಚ್ ನಾಯಕತ್ವ ನೀಡಿದೆ.
ಸನ್ ರೈಸರ್ಸ್ ಹೈದರಾಬಾದ್ ಅಭಿಮಾನಿಗಳಿಗೆ ಮತ್ತೊಂದು ಸಂತಸದ ಸುದ್ದಿ. ಇಂಗ್ಲೆಂಡ್ನ ಪವರ್ ಹಿಟರ್ ಹ್ಯಾರಿ ಬ್ರೂಕ್ ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ. 24 ಬೌಂಡರಿ ಹಾಗೂ 5 ಸಿಕ್ಸರ್ಗಳ ಸಹಿತ ಎದುರಾಳಿ ಬೌಲರ್ಗಳ ಬೆವರಿಳಿಸಿದ್ದಾರೆ. ಕಿವೀಸ್ ವಿರುದ್ಧದ ಎರಡನೇ ಟೆಸ್ಟ್ ನಲ್ಲಿ ಬ್ರೂಕ್ ಅವರು ಕೇವಲ 169 ಎಸೆತಗಳಲ್ಲಿ 184 ರನ್ ಗಳಿಸಿ ಅಜೇಯರಾಗುಳಿದರು. ಮೊದಲ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ 3 ವಿಕೆಟ್ಗೆ 315 ರನ್ ಗಳಿಸಲು ನೆರವಾದರು.



ಐಪಿಎಲ್ಗೆ ಮುಂಚಿತವಾಗಿ, ಬ್ರೂಕ್ ಅವರ ಈ ಭರ್ಜರಿ ಬ್ಯಾಟಿಂಗ್ ಸನ್ರೈಸರ್ಸ್ ಹೈದರಾಬಾದ್ಗೆ ಧನಾತ್ಮಕವಾಗಿದೆ. ಕಳೆದ ವರ್ಷ ಡಿಸೆಂಬರ್ ನಲ್ಲಿ ನಡೆದ ಮಿನಿ ಹರಾಜಿನಲ್ಲಿ ಸನ್ ರೈಸರ್ಸ್ ರೂ.13.25 ಕೋಟಿಗೆ ಬ್ರೂಕ್ ಅವರನ್ನು ಖರೀದಿಸಿತ್ತು. ಬ್ರೂಕ್ ಇತರ ಇಂಗ್ಲೆಂಡ್ ಆಟಗಾರರಂತೆ ಅಲ್ಲ. ಸ್ಪಿನ್ ಆಡುವುದರಲ್ಲಿ ನಿಸ್ಸಿಮರು. ಅದಕ್ಕಾಗಿಯೇ ಉಪಖಂಡದ ಪಿಚ್ಗಳಲ್ಲಿ ಬ್ರೂಕ್ ಸಿಡಿಯುತ್ತಿದ್ದಾರೆ. ಕಳೆದ ವರ್ಷ ನಡೆದ ಟಿ20 ವಿಶ್ವಕಪ್ಗೂ ಮುನ್ನ ಪಾಕಿಸ್ತಾನ ಪ್ರವಾಸ ಮಾಡಿದ್ದರು.



ಬ್ರೂಕ್ ಐಪಿಎಲ್ನಲ್ಲಿ ಇದೇ ರೇಂಜ್ನಲ್ಲಿ ಆಡಿದರೆ ಸನ್ರೈಸರ್ಸ್ ಹೈದರಾಬಾದ್ಗೆ ವರದಾನವಾಗಲಿದೆ. ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್, ರಾಹುಲ್ ತ್ರಿಪಾಠಿ, ಬ್ರೂಕ್ ಮತ್ತು ವಾಷಿಂಗ್ಟನ್ ಸುಂದರ್ ಅವರೊಂದಿಗೆ ಹೈದರಾಬಾದ್ ಬ್ಯಾಟಿಂಗ್ ಬಲಿಷ್ಠವಾಗಿದೆ. ಬೌಲಿಂಗ್ ನಲ್ಲಿ ಭುವನೇಶ್ವರ್ ಕುಮಾರ್, ನಟರಾಜನ್, ಉಮ್ರಾನ್ ಮಲಿಕ್ ಸಿಡಿಯಲು ಸಿದ್ಧರಾಗಿದ್ದಾರೆ. ಅವರ ಜೊತೆಗೆ ಜಾನ್ಸೆನ್ ಮತ್ತು ಫಾರೂಕಿ ಕೂಡ ಸೇರಿಕೊಳ್ಳಲಿದ್ದಾರೆ. ಸ್ಪಿನ್ ವಿಭಾಗದಲ್ಲಿ ರಶೀದ್ ತಂಡವನ್ನು ಮುನ್ನಡೆಸಲಿದ್ದಾರೆ.
IPL 2023 Sunrisers Hyderabad batter Harry brook hit 184 Runs New Zealand in 1st Test.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm