ಬ್ರೇಕಿಂಗ್ ನ್ಯೂಸ್
25-02-23 01:17 pm Source: news18 ಕ್ರೀಡೆ
ಇಂಡಿಯನ್ ಪ್ರೀಮಿಯರ್ ಲೀಗ್ (IPL) 2023 ಸೀಸನ್ಗೆ ಕ್ಷಣಗಣನೆ ಆರಂಭವಾಗಿದೆ. ಐಪಿಎಲ್ 16ನೇ ಸೀಸನ್ ಮಾರ್ಚ್ 31ರಿಂದ ಮೇ 28ರ ವರೆಗೆ ನಡೆಯಲಿದೆ. ಬಿಸಿಸಿಐ ಈಗಾಗಲೇ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದೇ ಸಮಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡದ ಹೊಸ ನಾಯಕನನ್ನು ಘೋಷಿಸಿದೆ. ಇತ್ತೀಚೆಗೆ ಮುಕ್ತಾಯಗೊಂಡ ದಕ್ಷಿಣ ಆಫ್ರಿಕಾ 20 ಲೀಗ್ನಲ್ಲಿ, ಸನ್ರೈಸರ್ಸ್ ಈಸ್ಟರ್ನ್ ಕೇಪ್ಗೆ ನಾಯಕ ಮಾರ್ಕ್ರಾಮ್ ಅವರಿಗೆ ಎಸ್ಆರ್ಎಚ್ ನಾಯಕತ್ವ ನೀಡಿದೆ.
ಸನ್ ರೈಸರ್ಸ್ ಹೈದರಾಬಾದ್ ಅಭಿಮಾನಿಗಳಿಗೆ ಮತ್ತೊಂದು ಸಂತಸದ ಸುದ್ದಿ. ಇಂಗ್ಲೆಂಡ್ನ ಪವರ್ ಹಿಟರ್ ಹ್ಯಾರಿ ಬ್ರೂಕ್ ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ. 24 ಬೌಂಡರಿ ಹಾಗೂ 5 ಸಿಕ್ಸರ್ಗಳ ಸಹಿತ ಎದುರಾಳಿ ಬೌಲರ್ಗಳ ಬೆವರಿಳಿಸಿದ್ದಾರೆ. ಕಿವೀಸ್ ವಿರುದ್ಧದ ಎರಡನೇ ಟೆಸ್ಟ್ ನಲ್ಲಿ ಬ್ರೂಕ್ ಅವರು ಕೇವಲ 169 ಎಸೆತಗಳಲ್ಲಿ 184 ರನ್ ಗಳಿಸಿ ಅಜೇಯರಾಗುಳಿದರು. ಮೊದಲ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ 3 ವಿಕೆಟ್ಗೆ 315 ರನ್ ಗಳಿಸಲು ನೆರವಾದರು.
ಐಪಿಎಲ್ಗೆ ಮುಂಚಿತವಾಗಿ, ಬ್ರೂಕ್ ಅವರ ಈ ಭರ್ಜರಿ ಬ್ಯಾಟಿಂಗ್ ಸನ್ರೈಸರ್ಸ್ ಹೈದರಾಬಾದ್ಗೆ ಧನಾತ್ಮಕವಾಗಿದೆ. ಕಳೆದ ವರ್ಷ ಡಿಸೆಂಬರ್ ನಲ್ಲಿ ನಡೆದ ಮಿನಿ ಹರಾಜಿನಲ್ಲಿ ಸನ್ ರೈಸರ್ಸ್ ರೂ.13.25 ಕೋಟಿಗೆ ಬ್ರೂಕ್ ಅವರನ್ನು ಖರೀದಿಸಿತ್ತು. ಬ್ರೂಕ್ ಇತರ ಇಂಗ್ಲೆಂಡ್ ಆಟಗಾರರಂತೆ ಅಲ್ಲ. ಸ್ಪಿನ್ ಆಡುವುದರಲ್ಲಿ ನಿಸ್ಸಿಮರು. ಅದಕ್ಕಾಗಿಯೇ ಉಪಖಂಡದ ಪಿಚ್ಗಳಲ್ಲಿ ಬ್ರೂಕ್ ಸಿಡಿಯುತ್ತಿದ್ದಾರೆ. ಕಳೆದ ವರ್ಷ ನಡೆದ ಟಿ20 ವಿಶ್ವಕಪ್ಗೂ ಮುನ್ನ ಪಾಕಿಸ್ತಾನ ಪ್ರವಾಸ ಮಾಡಿದ್ದರು.
ಬ್ರೂಕ್ ಐಪಿಎಲ್ನಲ್ಲಿ ಇದೇ ರೇಂಜ್ನಲ್ಲಿ ಆಡಿದರೆ ಸನ್ರೈಸರ್ಸ್ ಹೈದರಾಬಾದ್ಗೆ ವರದಾನವಾಗಲಿದೆ. ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್, ರಾಹುಲ್ ತ್ರಿಪಾಠಿ, ಬ್ರೂಕ್ ಮತ್ತು ವಾಷಿಂಗ್ಟನ್ ಸುಂದರ್ ಅವರೊಂದಿಗೆ ಹೈದರಾಬಾದ್ ಬ್ಯಾಟಿಂಗ್ ಬಲಿಷ್ಠವಾಗಿದೆ. ಬೌಲಿಂಗ್ ನಲ್ಲಿ ಭುವನೇಶ್ವರ್ ಕುಮಾರ್, ನಟರಾಜನ್, ಉಮ್ರಾನ್ ಮಲಿಕ್ ಸಿಡಿಯಲು ಸಿದ್ಧರಾಗಿದ್ದಾರೆ. ಅವರ ಜೊತೆಗೆ ಜಾನ್ಸೆನ್ ಮತ್ತು ಫಾರೂಕಿ ಕೂಡ ಸೇರಿಕೊಳ್ಳಲಿದ್ದಾರೆ. ಸ್ಪಿನ್ ವಿಭಾಗದಲ್ಲಿ ರಶೀದ್ ತಂಡವನ್ನು ಮುನ್ನಡೆಸಲಿದ್ದಾರೆ.
IPL 2023 Sunrisers Hyderabad batter Harry brook hit 184 Runs New Zealand in 1st Test.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
19-08-25 06:59 pm
HK News Desk
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm