ಬ್ರೇಕಿಂಗ್ ನ್ಯೂಸ್
08-03-23 02:57 pm Source: news18 ಕ್ರೀಡೆ
ಬಹುನಿರೀಕ್ಷಿತ ಮಹಿಳಾ ಪ್ರೀಮಿಯರ್ ಲೀಗ್ (wpl 2023) ಈಗಾಗಲೇ ಮಾರ್ಚ್ 4 ರಿಂದ ಆರಂಭವಾಗಿದೆ. ಈಗಾಗಲೇ 5 ಪಂದ್ಯಗಳ ಯಶಸ್ವಿಯಾಗಿ ಮುಗಿದಿವೆ. ವುಮೆನ್ಸ್ ಪ್ರೀಮಿಯರ್ ಲೀಗ್ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಇಂದು ನಡೆಯುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಜೇಂಟ್ಸ್ ನಡುವಿನ ಪಂದ್ಯಕ್ಕೆ ಬಿಸಿಸಿಐ ಪ್ರತಿಯೊಬ್ಬರಿಗೂ ಉಚಿತ ಟಿಕೆಟ್ ಘೋಷಣೆ ಮಾಡಿದೆ.
ಮಹಿಳಾ ದಿನಾಚರಣೆಯನ್ನ ವಿಶೇಷವಾಗಿ ಆಚರಿಸಲು ಬಿಸಿಸಿಐ ನಿರ್ಧರಿಸಿದ್ದು ಇಂದಿನ ಪಂದ್ಯಕ್ಕೆ ಉಚಿತ ಪ್ರವೇಶ ಕಲ್ಪಿಸಿದೆ. ಇದು ವಿಶೇಷ ದಿನವನ್ನು ಮತ್ತಷ್ಟು ವಿಶೇಷವಾಗಿ ಮಾಡುವ ಮಾರ್ಗ ಎಂದು ಟ್ವಿಟರ್ನಲ್ಲಿ ಬರೆದುಕೊಂಡಿದೆ. ಮಹಿಳೆಯರ ಕ್ರಿಕೆಟ್ ಉತ್ತೇಜನಗೊಳಿಸಲು ಈಗಾಗಲೆ ಟೂರ್ನಿಯಲ್ಲಿ ಮಹಿಳೆಯರಿಗೆ ಉಚಿತ ಟಿಕೆಟ್ಗಳನ್ನು ನೀಡಲಾಗುತ್ತಿದೆ. ಪುರುಷರಿಗೆ ಮಾತ್ರ 100 ರಿಂದ 400 ರೂಗಳಿಗೆ ಟಿಕೆಟ್ ಮಾರಾಟ ಮಾಡಲಾಗುತ್ತಿದೆ.


ಇದೀಗ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಪುರುಷರಿಗೂ ಕೂಡ ಉಚಿತ ಟಿಕೆಟ್ ಸಿಗಲಿದೆ. ಮುಂಬೈನ ಬ್ರಬೌರ್ನ್ ಸ್ಟೇಡಿಯಂನಲ್ಲಿ ಇಂದು ಸಂಜೆ 8ಗಂಟೆಗ ಗುಜರಾತ್ ಮತ್ತು ಬೆಂಗಳೂರು ನಡುವೆ ಪಂದ್ಯ ನಡೆಯಲಿದೆ. ಮೊದಲು ಬಂದವರಿಗೆ ಮೊದಲ ಆದ್ಯತೆ ಎಂದು ತಿಳಿಸಲಾಗಿದೆ. ಹೀಗಾಗಿ ಸ್ಟೇಡಿಯಂ ತುಂಬಿದ ಬಳಿಕ ಬಂದವರಿಗೆ ಗ್ಯಾಲರಿಯಲ್ಲಿ ಕೂತು ಪಂದ್ಯವನ್ನು ವೀಕ್ಷಿಸಲು ಅವಕಾಶ ಇರುವುದಿಲ್ಲ. ಇನ್ನು ಟೂರ್ನಿಗೆ ಬರುವುದಾದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಎರಡು ಸೋಲುಗಳಿಂದ ಕಂಗೆಟ್ಟಿದೆ. ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 60 ರನ್ಗಳ ಸೋಲು ಕಂಡರೆ, 2ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 9 ವಿಕೆಟ್ಗಳ ಸೋಲು ಕಂಡಿತ್ತು.


ಇದೀಗ ಸೆಮಿಫೈನಲ್ ಪ್ರವೇಶಿಸಲು ಉಳಿದ ಎಲ್ಲಾ ಪಂದ್ಯಗಳನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಇತ್ತ ಗುಜರಾತ್ ಜೇಂಟ್ಸ್ ಕೂಡ ಆಡಿರುವ 2 ಪಂದ್ಯಗಳಲ್ಲಿ ಸೋಲು ಕಂಡಿದೆ. ಎರಡೂ ತಂಡಗಳೂ ಮೊದಲ ಗೆಲುವಿನ ನಿರೀಕ್ಷೆಯಲ್ಲಿವೆ.
WPL 2023 BCCI announces free tickets for GG vs RCB on international womens day.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am