ಬ್ರೇಕಿಂಗ್ ನ್ಯೂಸ್
08-03-23 02:57 pm Source: news18 ಕ್ರೀಡೆ
ಬಹುನಿರೀಕ್ಷಿತ ಮಹಿಳಾ ಪ್ರೀಮಿಯರ್ ಲೀಗ್ (wpl 2023) ಈಗಾಗಲೇ ಮಾರ್ಚ್ 4 ರಿಂದ ಆರಂಭವಾಗಿದೆ. ಈಗಾಗಲೇ 5 ಪಂದ್ಯಗಳ ಯಶಸ್ವಿಯಾಗಿ ಮುಗಿದಿವೆ. ವುಮೆನ್ಸ್ ಪ್ರೀಮಿಯರ್ ಲೀಗ್ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಇಂದು ನಡೆಯುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಜೇಂಟ್ಸ್ ನಡುವಿನ ಪಂದ್ಯಕ್ಕೆ ಬಿಸಿಸಿಐ ಪ್ರತಿಯೊಬ್ಬರಿಗೂ ಉಚಿತ ಟಿಕೆಟ್ ಘೋಷಣೆ ಮಾಡಿದೆ.
ಮಹಿಳಾ ದಿನಾಚರಣೆಯನ್ನ ವಿಶೇಷವಾಗಿ ಆಚರಿಸಲು ಬಿಸಿಸಿಐ ನಿರ್ಧರಿಸಿದ್ದು ಇಂದಿನ ಪಂದ್ಯಕ್ಕೆ ಉಚಿತ ಪ್ರವೇಶ ಕಲ್ಪಿಸಿದೆ. ಇದು ವಿಶೇಷ ದಿನವನ್ನು ಮತ್ತಷ್ಟು ವಿಶೇಷವಾಗಿ ಮಾಡುವ ಮಾರ್ಗ ಎಂದು ಟ್ವಿಟರ್ನಲ್ಲಿ ಬರೆದುಕೊಂಡಿದೆ. ಮಹಿಳೆಯರ ಕ್ರಿಕೆಟ್ ಉತ್ತೇಜನಗೊಳಿಸಲು ಈಗಾಗಲೆ ಟೂರ್ನಿಯಲ್ಲಿ ಮಹಿಳೆಯರಿಗೆ ಉಚಿತ ಟಿಕೆಟ್ಗಳನ್ನು ನೀಡಲಾಗುತ್ತಿದೆ. ಪುರುಷರಿಗೆ ಮಾತ್ರ 100 ರಿಂದ 400 ರೂಗಳಿಗೆ ಟಿಕೆಟ್ ಮಾರಾಟ ಮಾಡಲಾಗುತ್ತಿದೆ.
ಇದೀಗ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಪುರುಷರಿಗೂ ಕೂಡ ಉಚಿತ ಟಿಕೆಟ್ ಸಿಗಲಿದೆ. ಮುಂಬೈನ ಬ್ರಬೌರ್ನ್ ಸ್ಟೇಡಿಯಂನಲ್ಲಿ ಇಂದು ಸಂಜೆ 8ಗಂಟೆಗ ಗುಜರಾತ್ ಮತ್ತು ಬೆಂಗಳೂರು ನಡುವೆ ಪಂದ್ಯ ನಡೆಯಲಿದೆ. ಮೊದಲು ಬಂದವರಿಗೆ ಮೊದಲ ಆದ್ಯತೆ ಎಂದು ತಿಳಿಸಲಾಗಿದೆ. ಹೀಗಾಗಿ ಸ್ಟೇಡಿಯಂ ತುಂಬಿದ ಬಳಿಕ ಬಂದವರಿಗೆ ಗ್ಯಾಲರಿಯಲ್ಲಿ ಕೂತು ಪಂದ್ಯವನ್ನು ವೀಕ್ಷಿಸಲು ಅವಕಾಶ ಇರುವುದಿಲ್ಲ. ಇನ್ನು ಟೂರ್ನಿಗೆ ಬರುವುದಾದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಎರಡು ಸೋಲುಗಳಿಂದ ಕಂಗೆಟ್ಟಿದೆ. ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 60 ರನ್ಗಳ ಸೋಲು ಕಂಡರೆ, 2ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 9 ವಿಕೆಟ್ಗಳ ಸೋಲು ಕಂಡಿತ್ತು.
ಇದೀಗ ಸೆಮಿಫೈನಲ್ ಪ್ರವೇಶಿಸಲು ಉಳಿದ ಎಲ್ಲಾ ಪಂದ್ಯಗಳನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಇತ್ತ ಗುಜರಾತ್ ಜೇಂಟ್ಸ್ ಕೂಡ ಆಡಿರುವ 2 ಪಂದ್ಯಗಳಲ್ಲಿ ಸೋಲು ಕಂಡಿದೆ. ಎರಡೂ ತಂಡಗಳೂ ಮೊದಲ ಗೆಲುವಿನ ನಿರೀಕ್ಷೆಯಲ್ಲಿವೆ.
WPL 2023 BCCI announces free tickets for GG vs RCB on international womens day.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 11:22 am
HK News Desk
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
14-10-25 11:19 am
Mangalore Correspondent
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm