ಬ್ರೇಕಿಂಗ್ ನ್ಯೂಸ್
09-03-23 11:17 am HK News Desk ಕ್ರೀಡೆ
ಅಹಮದಾಬಾದ್, ಮಾ.9: ಬಾರ್ಡರ್- ಗವಾಸ್ಕರ್ ಟ್ರೋಫಿಯ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಅಂತಿಮ 4ನೇ ಟೆಸ್ಟ್ ಪಂದ್ಯಕ್ಕೆ ಅಹ್ಮದಾಬಾದ್ನ ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಚಾಲನೆ ದೊರೆತಿದ್ದು, ಈಗಾಗಲೇ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಸರಣಿಯಲ್ಲಿ ರೋಹಿತ್ ಬಳಗ 2-1ರಿಂದ ಮುನ್ನಡೆಯಲ್ಲಿದ್ದರೂ ಈ ಪಂದ್ಯದಲ್ಲಿ ಗೆದ್ದರೆ ಮಾತ್ರ ಯಾರನ್ನು ಅವಲಂಬಿಸದೆ ಟೆಸ್ಟ್ ವಿಶ್ವಕಪ್ ಫೈನಲ್ ಗೇರಲು ಸಾಧ್ಯವಾಗುತ್ತದೆ. ಅತ್ತ ಆಸೀಸ್ ಇಂದೋರ್ ಟೆಸ್ಟ್ ಜಯದೊಂದಿಗೆ ವಿಶ್ವಕಪ್ಪ ಫೈನಲ್ ಸ್ಥಾನ ಖಚಿತ ಪಡಿಸಿಕೊಂಡಿದ್ದು, ಮತ್ತೊಂದು ಗೆಲುವಿನೊಂದಿಗೆ ಸರಣಿಯಲ್ಲಿ ಸಮಬಲ ಸಾಧಿಸಲು ಕಾಯುತ್ತಿದೆ.

ವಿಶೇಷ ಎಂದರೆ ಈ ಟೆಸ್ಟ್ ಪಂದ್ಯ ವೀಕ್ಷಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಆಲ್ಬನೀಸ್ ಉಪಸ್ಥಿತರಿದ್ದಾರೆ. ಲಕ್ಷಕ್ಕೂ ಹೆಚ್ಚು ಜನರ ಸಮ್ಮುಖದಲ್ಲಿ ಉಭಯ ರಾಷ್ಟ್ರಗಳ ಪ್ರಧಾನಮಮಂತ್ರಿಗಳು ಪಂದ್ಯ ವೀಕ್ಷಣೆ ಮಾಡಲಿದ್ದಾರೆ.

ಎರಡು ದೇಶಗಳ ಪ್ರಧಾನಿಗಳು ಹಾಗೂ ಲಕ್ಷಾಂತರ ಕ್ರೀಡಾಭಿಮಾನಿಗಳು ಸೇರುವ ಹಿನ್ನಲೆ ಕ್ರೀಡಾಂಗಣ ಸೇರಿದಂತೆ ನಗರದಾದ್ಯಂತ ಪೊಲೀಸರು ಬಿಗಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಸುಮಾರು 3,000 ಖಾಕಿ ಪಡೆಯನ್ನು ನಿಯೋಜನೆ ಮಾಡಲಾಗಿದೆ.

4ನೇ ಟೆಸ್ಟ್ ನಲ್ಲಿ ಭಾರತ ಗೆದ್ದಿದ್ದೇ ಆದರೆ, ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್'ಗೇರುವುದರ ಜೊತೆಗೆ ಟೆಸ್ಟ್ ರ್ಯಾಂಕಿಂಗ್ ನಲ್ಲೂ ಅಗ್ರಸ್ಥಾನಕ್ಕೇರಲಿದೆ. ಇದರೊಂದಿಗೆ ಏಕಕಾಲದಲ್ಲಿ ಮೂರು ಮಾದರಿಯಲ್ಲಿ ನ.1 ಸ್ಥಾನ ಪಡೆದ ಸಾಧನೆ ಮಾಡಲಿದೆ. ಸತತ 4ನೇ ಬಾರಿ ಬಾರ್ಡರ್-ಗವಾಸ್ತರ್ ಟ್ರೋಫಿ ಭಾರತದ ಪಾಲಾಗಲಿದೆ.
Indian prime minister Narendra Modi and his Australian counterpart Anthony Albanese were in attendance on Day 1 of the Border-Gavaskar Trophy Test in Ahmedabad on Thursday. The two prime ministers were felicitated upon their arrival at the stadium, and then proceeded to present Test caps to their respective country's cricket captains before taking a lap of honour around the stadium.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm