ಬ್ರೇಕಿಂಗ್ ನ್ಯೂಸ್
16-03-23 12:58 pm Source: news18 ಕ್ರೀಡೆ
ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ RCB ತಂಡದ ಪಾಲಿಗೆ ಮರೀಚಿಕೆಯಾಗಿದ್ದ ಗೆಲುವು ಇಂದು ಅಂತಿಮವಾಗಿ ದೊರಕಿದೆ. WPL 2023ರ ಮೊದಲ ಗೆಲುವನ್ನು ಆರ್ಸಿಬಿ ದಕ್ಕಿಸಿಕೊಂಡಿದೆ. ಆಡಿರುವ 6 ಪಂದ್ಯಗಳಲ್ಲಿ ಸ್ಮೃತಿ ಮಂಧಾನ ಪಡೆ 1 ಗೆಲುವನ್ನು ದಾಖಲಿಸಿದೆ. ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್ನ 13ನೇ ಪಂದ್ಯದಲ್ಲಿ ಯುಪಿ ವಾರಿಯರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದವು. ಟಾಸ್ ಗೆದ್ದ ಆರ್ಸಿಬಿ ಮೊದಲು ಬೌಲಿಂಗ್ ಆಯ್ದುಕೊಂಡಿತು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಯುಪಿ ವಾರಿಯರ್ಸ್ ತಂಡವು 19.3 ಓವರ್ಗಳಲ್ಲಿ 135 ರನ್ಗಳಿಗೆ ತನ್ನೆಲ್ಲಾ 10 ವಿಕೆಟ್ ಕಳೆದುಕೊಂಡಿತು. ಯುಪಿ ಪರ ಗ್ರ್ಯಾಸಿ ಹಾರೀಸ್ 46 ರನ್ ಗಳಿಸಿದ್ದರು. ಬೆಂಗಳೂರು ಪರ ಸೋಫಿ ಡಿವೈನ್ ಮತ್ತು ಆಶಾ ಶೋಬನಾ ತಲಾ 2 ವಿಕೆಟ್, ಮೇಗನ್ ಶುಟ್ ಮತ್ತು ಶ್ರೇಯಾಂಕಾ ಪಾಟೀಲ್ 1 ವಿಕೆಟ್ ಪಡೆದರೆ ಎಲ್ಲಿಸ್ ಪೆರ್ರಿ 3 ವಿಕೆಟ್ ಪಡೆಯುವ ಮೂಲಕ ಯುಪಿ ಬ್ಯಾಟರ್ಗಳಿಗೆ ಕಡಿವಾಣ ಹಾಕುವಲ್ಲಿ ಯಶಸ್ವಿಯಾದರು.



ಯುಪಿ ವಿರುದ್ಧ ಅಂತಿಮವಾಗಿ ಆರ್ಸಿಬಿ ಚೊಚ್ಚಲ ಗೆಲುವನ್ನು ದಾಖಲಿಸಿದೆ. ಆರ್ಸಿಬಿ ತಂಡ 18 ಓವರ್ನಲ್ಲಿ 5 ವಿಕೆಟ್ ನಷ್ಟಕ್ಕೆ 136 ರನ್ ಗಳಿಸಿತು. ಆರ್ಸಿಬಿ ಪರ ಕನ್ನಿಕಾ 46 ರನ್ ಮತ್ತು ರಿಚಾ ಘೋಷ್ 31 ರನ್ ಗಳಿಸುವ ಮೂಲಕ ಪಂದ್ಯದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಇದರ ನಡುವೆ ಇಂದಿನ ಗೆಲುವಿನ ಜೊತೆ ಆರ್ಸಿಬಿ ತಂಡ ಉಳಿದಿರುವ 2 ಪಂದ್ಯಗಳಲ್ಲಿ ಗೆದ್ದರೆ ಎಲಿಮಿನೇಟರ್ ಹಂತಕ್ಕೇರಬಹುದು. ಇದು ಉಳಿದ ತಂಡಗಳ ಫಲಿತಾಂಶಗಳ ಮೇಲೆ ಅವಲಂಭಿತವಾಗಿದೆ. ಅಲ್ಲದೇ ಯುಪಿ ವಾರಿಯರ್ಸ್ ತಂಡವು ಮುಂದಿನ ಎಲ್ಲಾ ಪಂದ್ಯಗಳನ್ನೂ ಸೋಲಬೇಕು.

![,[object Object], ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ಹೀದರ್ ನೈಟ್, ರಿಚಾ ಘೋಷ್ (ವಿಕೆಟ್ ಕೀಪರ್), ಶ್ರೇಯಾಂಕಾ ಪಾಟೀಲ್, ದಿಶಾ ಕಸತ್, ಮೇಗನ್ ಶುಟ್, ಆಶಾ ಶೋಬನಾ, ರೇಣುಕಾ ಠಾಕೂರ್ ಸಿಂಗ್, ಕನಿಕಾ ಅಹುಜಾ.](https://images.news18.com/kannada/uploads/2023/03/8-149-16788978893x2.jpg?im=Resize,width=904,aspect=fit,type=normal)
ಜೊತೆಗೆ ಗುಜರಾತ್ ಜೈಂಟ್ಸ್ ಸಹ ಕನಿಷ್ಠ 2 ಪಂದ್ಯ ಸೋಲಬೇಕಿದೆ. ಆಗ ಮಾತ್ರ ಆರ್ಸಿಬಿಗೆ ನೆಟ್ ರನ್ ರೇಟ್ ಮೂಲಕ ಎಲಿಮಿನೇಟರ್ ಹಂತಕ್ಕೆ ತಲುಪಲಿದೆ. ಪಾಯಿಂಟ್ ಟೇಬಲ್ನಲ್ಲಿ 2ನೇ ಹಾಗೂ 3ನೇ ಸ್ಥಾನದ ತಂಡ ಎಲಿಮಿನೇಟರ್ ಪಂದ್ಯ ಆಡಲಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ 11: ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ಹೀದರ್ ನೈಟ್, ರಿಚಾ ಘೋಷ್ (ವಿಕೆಟ್ ಕೀಪರ್), ಶ್ರೇಯಾಂಕಾ ಪಾಟೀಲ್, ದಿಶಾ ಕಸತ್, ಮೇಗನ್ ಶುಟ್, ಆಶಾ ಶೋಬನಾ, ರೇಣುಕಾ ಠಾಕೂರ್ ಸಿಂಗ್, ಕನಿಕಾ ಅಹುಜಾ.
wpl 2023 up warriorz vs royal challengers bangaluru match rcb won by 5 wickets.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm