ಬ್ರೇಕಿಂಗ್ ನ್ಯೂಸ್
16-03-23 12:58 pm Source: news18 ಕ್ರೀಡೆ
ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ RCB ತಂಡದ ಪಾಲಿಗೆ ಮರೀಚಿಕೆಯಾಗಿದ್ದ ಗೆಲುವು ಇಂದು ಅಂತಿಮವಾಗಿ ದೊರಕಿದೆ. WPL 2023ರ ಮೊದಲ ಗೆಲುವನ್ನು ಆರ್ಸಿಬಿ ದಕ್ಕಿಸಿಕೊಂಡಿದೆ. ಆಡಿರುವ 6 ಪಂದ್ಯಗಳಲ್ಲಿ ಸ್ಮೃತಿ ಮಂಧಾನ ಪಡೆ 1 ಗೆಲುವನ್ನು ದಾಖಲಿಸಿದೆ. ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್ನ 13ನೇ ಪಂದ್ಯದಲ್ಲಿ ಯುಪಿ ವಾರಿಯರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದವು. ಟಾಸ್ ಗೆದ್ದ ಆರ್ಸಿಬಿ ಮೊದಲು ಬೌಲಿಂಗ್ ಆಯ್ದುಕೊಂಡಿತು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಯುಪಿ ವಾರಿಯರ್ಸ್ ತಂಡವು 19.3 ಓವರ್ಗಳಲ್ಲಿ 135 ರನ್ಗಳಿಗೆ ತನ್ನೆಲ್ಲಾ 10 ವಿಕೆಟ್ ಕಳೆದುಕೊಂಡಿತು. ಯುಪಿ ಪರ ಗ್ರ್ಯಾಸಿ ಹಾರೀಸ್ 46 ರನ್ ಗಳಿಸಿದ್ದರು. ಬೆಂಗಳೂರು ಪರ ಸೋಫಿ ಡಿವೈನ್ ಮತ್ತು ಆಶಾ ಶೋಬನಾ ತಲಾ 2 ವಿಕೆಟ್, ಮೇಗನ್ ಶುಟ್ ಮತ್ತು ಶ್ರೇಯಾಂಕಾ ಪಾಟೀಲ್ 1 ವಿಕೆಟ್ ಪಡೆದರೆ ಎಲ್ಲಿಸ್ ಪೆರ್ರಿ 3 ವಿಕೆಟ್ ಪಡೆಯುವ ಮೂಲಕ ಯುಪಿ ಬ್ಯಾಟರ್ಗಳಿಗೆ ಕಡಿವಾಣ ಹಾಕುವಲ್ಲಿ ಯಶಸ್ವಿಯಾದರು.



ಯುಪಿ ವಿರುದ್ಧ ಅಂತಿಮವಾಗಿ ಆರ್ಸಿಬಿ ಚೊಚ್ಚಲ ಗೆಲುವನ್ನು ದಾಖಲಿಸಿದೆ. ಆರ್ಸಿಬಿ ತಂಡ 18 ಓವರ್ನಲ್ಲಿ 5 ವಿಕೆಟ್ ನಷ್ಟಕ್ಕೆ 136 ರನ್ ಗಳಿಸಿತು. ಆರ್ಸಿಬಿ ಪರ ಕನ್ನಿಕಾ 46 ರನ್ ಮತ್ತು ರಿಚಾ ಘೋಷ್ 31 ರನ್ ಗಳಿಸುವ ಮೂಲಕ ಪಂದ್ಯದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಇದರ ನಡುವೆ ಇಂದಿನ ಗೆಲುವಿನ ಜೊತೆ ಆರ್ಸಿಬಿ ತಂಡ ಉಳಿದಿರುವ 2 ಪಂದ್ಯಗಳಲ್ಲಿ ಗೆದ್ದರೆ ಎಲಿಮಿನೇಟರ್ ಹಂತಕ್ಕೇರಬಹುದು. ಇದು ಉಳಿದ ತಂಡಗಳ ಫಲಿತಾಂಶಗಳ ಮೇಲೆ ಅವಲಂಭಿತವಾಗಿದೆ. ಅಲ್ಲದೇ ಯುಪಿ ವಾರಿಯರ್ಸ್ ತಂಡವು ಮುಂದಿನ ಎಲ್ಲಾ ಪಂದ್ಯಗಳನ್ನೂ ಸೋಲಬೇಕು.

![,[object Object], ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ಹೀದರ್ ನೈಟ್, ರಿಚಾ ಘೋಷ್ (ವಿಕೆಟ್ ಕೀಪರ್), ಶ್ರೇಯಾಂಕಾ ಪಾಟೀಲ್, ದಿಶಾ ಕಸತ್, ಮೇಗನ್ ಶುಟ್, ಆಶಾ ಶೋಬನಾ, ರೇಣುಕಾ ಠಾಕೂರ್ ಸಿಂಗ್, ಕನಿಕಾ ಅಹುಜಾ.](https://images.news18.com/kannada/uploads/2023/03/8-149-16788978893x2.jpg?im=Resize,width=904,aspect=fit,type=normal)
ಜೊತೆಗೆ ಗುಜರಾತ್ ಜೈಂಟ್ಸ್ ಸಹ ಕನಿಷ್ಠ 2 ಪಂದ್ಯ ಸೋಲಬೇಕಿದೆ. ಆಗ ಮಾತ್ರ ಆರ್ಸಿಬಿಗೆ ನೆಟ್ ರನ್ ರೇಟ್ ಮೂಲಕ ಎಲಿಮಿನೇಟರ್ ಹಂತಕ್ಕೆ ತಲುಪಲಿದೆ. ಪಾಯಿಂಟ್ ಟೇಬಲ್ನಲ್ಲಿ 2ನೇ ಹಾಗೂ 3ನೇ ಸ್ಥಾನದ ತಂಡ ಎಲಿಮಿನೇಟರ್ ಪಂದ್ಯ ಆಡಲಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ 11: ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ಹೀದರ್ ನೈಟ್, ರಿಚಾ ಘೋಷ್ (ವಿಕೆಟ್ ಕೀಪರ್), ಶ್ರೇಯಾಂಕಾ ಪಾಟೀಲ್, ದಿಶಾ ಕಸತ್, ಮೇಗನ್ ಶುಟ್, ಆಶಾ ಶೋಬನಾ, ರೇಣುಕಾ ಠಾಕೂರ್ ಸಿಂಗ್, ಕನಿಕಾ ಅಹುಜಾ.
wpl 2023 up warriorz vs royal challengers bangaluru match rcb won by 5 wickets.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am