ಬ್ರೇಕಿಂಗ್ ನ್ಯೂಸ್
25-03-23 01:57 pm Source: news18 ಕ್ರೀಡೆ
ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇಂದು (WPL 2023) ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಯುಪಿ ವಾರಿಯರ್ಸ್ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಯುಪಿ ವಿರುದ್ಧ ಮುಂಬೈ ಬರೋಬ್ಬರಿ 72 ರನ್ ಗಳಿಸುವ ಮೂಲಕ ಫೈನಲ್ಗೆ ಲಗ್ಗೆ ಇಟ್ಟಿದೆ. ಈಗಾಗಲೇ ಡೆಲ್ಲಿ ಕ್ಯಾಪಿಟಲ್ಸ್ ಫೈನಲ್ ಸ್ಥಾನ ಪಡೆದುಕೊಂಡಿದೆ. ಇದೀಗ ಫೈನಲ್ನಲ್ಲಿ ಡೆಲ್ಲಿ ಮತ್ತು ಮುಂಬೈ ತಂಡಗಳು ಅಂತಿಮ ಫೈನಲ್ಗಾಗಿ ಸೆಣಸಾಡಲಿದೆ. ಗೆದ್ದ ತಂಡ ಚೊಚ್ಚಲ ಬಾರಿಗೆ ಮಹಿಳಾ ಐಪಿಎಲ್ ಟ್ರೋಫಿಗೆ ಮುತ್ತಿಕ್ಕಲಿದೆ.


ಟಾಸ್ ಗೆದ್ದ ಯುಪಿ ಮೊದಲು ಬೌಲಿಂಗ್ ಮಾಡಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ತಂಡ ನಿಗದಿತ 20 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 182 ರನ್ ಗಳಿಸಿತು. ಈ ಮೊತ್ತ ಬೆನ್ನಟ್ಟಿದ ಯುಪಿ 17.4 ಓವರ್ನಲ್ಲಿ 110 ರನ್ಗೆ ಆಲೌಟ್ ಆಗುವ ಮೂಲಕ 72 ರನ್ನಿಂದ ಸೋಲನ್ನಪ್ಪಿತು. ಇಸ್ಸಿ ವಾಂಗ್ ಅವರ ಓವರ್ನಲ್ಲಿ ಸತತ ಮೂರು ವಿಕೆಟ್ ಪಡೆಯುವ ಮೂಲಕ ದಾಖಲೆ ಬರೆದಿದ್ದಾರೆ. ಇದರೊಂದಿಗೆ ಲೀಗ್ನ ಮೊದಲ ಹ್ಯಾಟ್ರಿಕ್ ಪಡೆದ ಬೌಲರ್ ಎಂಬ ದಾಖಲೆಯನ್ನು ವಾಂಗ್ ಬರೆದಿದ್ದಾರೆ.


ನೇಟ್ ಸಿವರ್-ಬ್ರಂಟ್ ಅವರ ಭರ್ಜರಿ ಪ್ರದರ್ಶನ ಮತ್ತು ಈಸಿ ವಾಂಗ್ ಅವರ ಹ್ಯಾಟ್ರಿಕ್ ವಿಕೆಟ್ ಮುಂಬೈ ಇಂಡಿಯನ್ಸ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವನ್ನು ವಹಿಸಿದರು. ಮುಂಬೈ ಇಂಡಿಯನ್ಸ್ ಪರ ಇಂದು ಇಸ್ಸಿ ವಾಂಗ್ 4 ಓವರ್ ಮಾಡಿ 15 ರನ್ ನೀಡಿ ಪ್ರಮುಖ 4 ವಿಕೆಟ್ ಪಡೆದರು. ಇತ್ತ ಬ್ಯಾಟಿಂಗ್ನಲ್ಲಿ ನ್ಯಾಟ್ ಸಿವರ್-ಬ್ರಂಟ್ 38 ಎಸೆತದಲ್ಲಿ 2 ಸಿಕ್ಸ್ ಮತ್ತು 9 ಪೋರ್ ಮೂಲಕ 72 ರನ್ ಗಳಿಸಿ ಮಿಂಚಿದರು.



ಮುಂಬೈ ಇಂಡಿಯನ್ಸ್: ಹೇಲಿ ಮ್ಯಾಥ್ಯೂಸ್, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ನ್ಯಾಟ್ ಸಿವರ್-ಬ್ರಂಟ್, ಹರ್ಮನ್ಪ್ರೀತ್ ಕೌರ್ (ಕ್ಯಾಪ್ಟನ್), ಅಮೆಲಿಯಾ ಕೆರ್, ಪೂಜಾ ವಸ್ತಕರ್, ಇಸ್ಸಿ ವಾಂಗ್, ಅಮನ್ಜೋತ್ ಕೌರ್, ಹುಮೈರಾ ಕಾಜಿ,ಜಿಂತಿಮಣಿ ಕಲಿತಾ, ಸೈಕಾ ಇಸಾಕ್. ಇನ್ನು, ರವಿವಾರ 26ರಂದು ವುಮೆನ್ಸ್ ಪ್ರೀಮಿಯರ್ ಲೀಗ್ ನ ಫೈನಲ್ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪ್ರಶಸ್ತಿಗಾಗಿ ಸೆಣಸಾಡಲಿದೆ.
mi vs upw wpl 2023 mumbai indians won by 72 runs.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm