ಬ್ರೇಕಿಂಗ್ ನ್ಯೂಸ್
30-03-23 01:40 pm Source: news18 ಕ್ರೀಡೆ
ಐಪಿಎಲ್ 2023ರ 16ನೇ ಸೀಸನ್ ಇದೇ ಮಾರ್ಚ್ 31ರಿಂದ ಆರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಮತ್ತು ಚೆನ್ನೈ ತಂಡಗಳು ಸೆಣಸಾಡಲಿದೆ. ಹಾರ್ದಿಕ್ ಪಾಂಡ್ಯ ನಾಯಕನಾಗಿ ಮತ್ತೊಂದು ಐಪಿಎಲ್ಗೆ ಸಿದ್ಧರಾಗಿದ್ದಾರೆ. ಅವರ ನಾಯಕತ್ವದಲ್ಲಿ ಗುಜರಾತ್ ಟೈಟಾನ್ಸ್ ಮೊದಲ ಋತುವಿನಲ್ಲಿ p್ರಶಸ್ತಿಗೆ ಮುತ್ತಿಕ್ಕಿತ್ತು. ಐಪಿಎಲ್ 2022 ರಲ್ಲಿ ಗುಜರಾತ್ ಉತ್ತಮ ಪ್ರದರ್ಶನ ನೀಡುವ ಮೂಲಕ ಪ್ರಶಸ್ತಿಯನ್ನು ವಶಪಡಿಸಿಕೊಂಡಿತ್ತು.


ಐಪಿಎಲ್ 2023 ರ ಮೊದಲ ಪಂದ್ಯ ಗುಜರಾತ್ ಟೈಟಾನ್ಸ್ ಮತ್ತು ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯಲಿದೆ. CSK 4 ಬಾರಿ ಪ್ರಶಸ್ತಿ ಗೆದ್ದು ದಾಖಲೆ ಬರೆದಿತ್ತು, ಆದರೆ ಗುಜರಾತ್ ಟೈಟಾನ್ಸ್ ವಿರುದ್ಧ ತಂಡದ ದಾಖಲೆ ಉತ್ತಮವಾಗಿದೆ. ಕಳೆದ ಋತುವಿನಲ್ಲಿ ಧೋನಿ ನಾಯಕತ್ವದ ಚೆನ್ನೈ ತಂಡ 9ನೇ ಸ್ಥಾನದಲ್ಲಿತ್ತು. ಐಪಿಎಲ್ನಲ್ಲಿ ಇದುವರೆಗೆ ಗುಜರಾತ್ ಮತ್ತು ಸಿಎಸ್ಕೆ ನಡುವೆ 2 ಪಂದ್ಯಗಳು ನಡೆದಿದ್ದು, ಎರಡನ್ನೂ ಗೆಲ್ಲುವಲ್ಲಿ ಹಾರ್ದಿಕ್ ಪಾಂಡ್ಯ ತಂಡ ಯಶಸ್ವಿಯಾಗಿದೆ.


ಇವರಿಬ್ಬರ ನಡುವಿನ ಮೊದಲ ಪಂದ್ಯದಲ್ಲಿ ಚೆನ್ನೈ ಮೊದಲು ಆಡುವಾಗ 5 ವಿಕೆಟ್ಗೆ 169 ರನ್ ಗಳಿಸಿತು. ರಿತುರಾಜ್ ಗಾಯಕ್ವಾಡ್ 73 ರನ್ಗಳ ಅತ್ಯುತ್ತಮ ಇನ್ನಿಂಗ್ಸ್ ಆಡಿದರು.ಉತ್ತರವಾಗಿ ಗುಜರಾತ್ ಟೈಟಾನ್ಸ್ 19.5 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ದಕ್ಷಿಣ ಆಫ್ರಿಕಾದ ಬ್ಯಾಟ್ಸ್ಮನ್ ಡೇವಿಡ್ ಮಿಲ್ಲರ್ 51 ಎಸೆತಗಳಲ್ಲಿ 94 ರನ್ ಗಳಿಸಿ ಅಜೇಯರಾಗಿ ಉಳಿದರು. ಕೊನೆಯ ಓವರ್ನಲ್ಲಿ ಗುಜರಾತ್ 13 ರನ್ ಗಳಿಸಬೇಕಿತ್ತು. ಮಿಲ್ಲರ್ ಕ್ರಿಸ್ ಜೋರ್ಡಾನ್ ಅವರನ್ನು ಬೌಂಡರಿ ಮತ್ತು ಸಿಕ್ಸರ್ಗಳ ಮೂಲಕ ಗೆದ್ದರು.



ಎರಡನೇ ಪಂದ್ಯದಲ್ಲಿ ಗುಜರಾತ್ ಏಕಪಕ್ಷೀಯ ರೀತಿಯಲ್ಲಿ 7 ವಿಕೆಟ್ಗಳಿಂದ CSK ಅನ್ನು ಸೋಲಿಸಿತು. ಪಂದ್ಯದಲ್ಲಿ, ಸಿಎಸ್ಕೆ ತಂಡ ಮೊದಲು ಆಡುವಾಗ ಕೇವಲ 133 ರನ್ ಗಳಿಸಲಷ್ಟೇ ಶಕ್ತವಾಯಿತು. ರಿತುರಾಜ್ ಮತ್ತೊಮ್ಮೆ 53 ರನ್ ಗಳಿಸಿದರು. ಇದಕ್ಕೆ ಉತ್ತರವಾಗಿ ಗುಜರಾತ್ ತಂಡ ವೃದ್ಧಿಮಾನ್ ಸಹಾ ಅವರ ಅಜೇಯ 67 ರನ್ಗಳ ನೆರವಿನಿಂದ 3 ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ಧೋನಿ ಮುಂದಿರುವ ಮತ್ತೊಂದು ದೊಡ್ಡ ಸವಾಲೆಂದರೆ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್. ಐಪಿಎಲ್ನಲ್ಲಿ ಇಬ್ಬರ ನಡುವೆ ಇದುವರೆಗೆ 34 ಪಂದ್ಯಗಳು ನಡೆದಿವೆ. ಸಿಎಸ್ಕೆ ತಂಡ ಕೇವಲ 14 ಪಂದ್ಯಗಳನ್ನು ಗೆಲ್ಲಲು ಶಕ್ತವಾಗಿದೆ. ಮತ್ತೊಂದೆಡೆ ಮುಂಬೈ ತಂಡ 20 ಪಂದ್ಯಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ.
ipl 2023 csk vs gt hardik pandya won 100 per cent matches against ms dhoni.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am