ಬ್ರೇಕಿಂಗ್ ನ್ಯೂಸ್
31-03-23 01:18 pm Source: news18 ಕ್ರೀಡೆ
ಈ ವರ್ಷ 52 ದಿನಗಳ ಅವಧಿಯಲ್ಲಿ 12 ಸ್ಥಳಗಳಲ್ಲಿ ಒಟ್ಟು 70 ಲೀಗ್ ಹಂತದ ಪಂದ್ಯಗಳು ನಡೆಯಲಿದೆ. ಐಪಿಎಲ್ 2023 ರ ವೇಳಾಪಟ್ಟಿಯಂತೆ ಎಲ್ಲಾ ತಂಡಗಳು ಲೀಗ್ ಹಂತದಲ್ಲಿ ಕ್ರಮವಾಗಿ 7 ಹೋಮ್ ಪಂದ್ಯಗಳನ್ನು ಮತ್ತು 7 ಬೇರೆಡೆ ಪಂದ್ಯಗಳನ್ನು ಆಡುತ್ತವೆ.
ಐಪಿಎಲ್ 16ನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟನ್ಸ್ ತಂಡಗಳು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯವು ರಾತ್ರಿ 7:30ಕ್ಕೆ ಪಂದ್ಯ ಆರಂಭವಾಗಲಿದ್ದು, 7 ಗಂಟೆಗೆ ಟಾಸ್ ಆಗಲಿದೆ. ಈ ಪಂದ್ಯವನ್ನು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ ಮತ್ತು ಜಿಯೋ ಸಿನಿಮಾದಲ್ಲಿ ಡಿಜಿಟಲ್ನಲ್ಲಿ ನೇರ ಪ್ರಸಾರ ಆಗಲಿದೆ.
ಪಿಚ್ ರಿಪೋರ್ಟ್:
ನರೇಂದ್ರ ಮೋದಿ ಸ್ಟೇಡಿಯಂನ ಪಿಚ್ ಬ್ಯಾಟಿಂಗ್ಗೆ ಉತ್ತಮವಾಗಿದೆ. ಚೆಂಡು ಚೆನ್ನಾಗಿ ಬ್ಯಾಟ್ಗೆ ಬರುತ್ತದೆ. ಬ್ಯಾಟರ್ಗಳು ತಮ್ಮ ಇನ್ನಿಂಗ್ಸ್ನ ಆರಂಭದಿಂದಲೇ ತಮ್ಮ ಸಾಮರ್ಥ್ಯ ತೋರಿಸಬಹುದು. ಹೀಗಾಗಿ ಇಂದಿನ ಪಂದ್ಯದಲ್ಲಿ ಟಾಸ್ ಗೆದ್ದ ನಾಯಕ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಇದೆ. ಇಂದು ಅಹಮದಾಬಾದ್ನಲ್ಲಿ ತಾಪಮಾನವು 22 ಮತ್ತು 33 ಡಿಗ್ರಿ ಸೆಲ್ಸಿಯಸ್ ನಡುವೆ ಇರುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ ಇಲ್ಲ.

CSK vs GT ಹೆಡ್ ಟು ಹೆಡ್:
ಐಪಿಎಲ್ ಇತಿಹಾಸದಲ್ಲಿ ಚೆನ್ನೈ ಎರಡನೇ ಯಶಸ್ವಿ ಫ್ರಾಂಚೈಸಿ ಆಗಿದೆ. ಗುಜರಾತ್ ಟೈಟಾನ್ಸ್ ಕಳೆದ ವರ್ಷ ಪಾದಾರ್ಪಣೆ ಮಾಡಿದರೂ ಚೊಚ್ಚಲ ಆವೃತ್ತಿಯಲ್ಲಿಯೇ ಪ್ರಶಸ್ತಿ ಜಯಸಿತು. ಕಳೆದ ಋತುವಿನಲ್ಲಿ ಉಭಯ ತಂಡಗಳು ಎರಡು ಬಾರಿ ಮುಖಾಮುಖಿಯಾಗಿದ್ದವು. ಈ ಎರಡೂ ಬಾರಿಯೂ ಚೆನ್ನೈ ತಂಡವನ್ನು ಗುಜರಾತ್ ವಿರುದ್ಧ ಸೋತಿತ್ತು. ಜಿಟಿ ಮೊದಲ ಪಂದ್ಯವನ್ನು ಮೂರು ವಿಕೆಟ್ಗಳಿಂದ ಮತ್ತು ಎರಡನೇ ಪಂದ್ಯವನ್ನು ಏಳು ವಿಕೆಟ್ಗಳಿಂದ ಗೆದ್ದುಕೊಂಡಿತು. ಕಳೆದ ಋತುವಿನಲ್ಲಿ ಗುಜರಾತ್ ಟೈಟಾನ್ಸ್ 14 ಪಂದ್ಯ ಆಡಿದ್ದು, 10ರಲ್ಲಿ ಗೆಲುವು ಸಾಧಿಸಿತ್ತು. CSK 14ರಲ್ಲಿ 4 ಪಂದ್ಯ ಗೆದ್ದಿತ್ತು.
ಚೆನ್ನೈ ಸೂಪರ್ ಕಿಂಗ್ಸ್ ಸಂಭಾವ್ಯ ಪ್ಲೇಯಿಂಗ್ 11: ಧೋನಿ (ನಾಯಕ), ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಬೆನ್ ಸ್ಟೋಕ್ಸ್, ಅಂಬಟಿ ರಾಯುಡು, ಮೊಯಿನ್ ಅಲಿ, ರವೀಂದ್ರ ಜಡೇಜಾ, ಶಿವಂ ದುಬೆ, ದೀಪಕ್ ಚಾಹರ್, ಡ್ವೇನ್ ಪ್ರಿಟೋರಿಯಸ್, ಸಿಮ್ರಾನ್ ಜೀತ್
ಗುಜರಾತ್ ಟೈಟಾನ್ಸ್ ಸಂಭಾವ್ಯ ಪ್ಲೇಯಿಂಗ್ 11: ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ಸಹಾ, ಕೇನ್ ವಿಲಿಯಮ್ಸನ್, ವೇಡ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಸಾಯಿ ಕಿಶೋರ್, ಯಶ್ ದಯಾಳ್, ಜೋಸೆಫ್, ಶಮಿ.
csk vs gt ipl 2023 playing 11 pitch report and weather forecast.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm