ಬ್ರೇಕಿಂಗ್ ನ್ಯೂಸ್
11-04-23 12:26 pm Source: news18 ಕ್ರೀಡೆ
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಐಪಿಎಲ್ನ ಅಗ್ರ ತಂಡಗಳಲ್ಲಿ ಒಂದಾಗಿದೆ. ವಿರಾಟ್ ಕೊಹ್ಲಿ (VIrat Kohli) ಸೇರಿದಂತೆ ಅನೇಕ ದಿಗ್ಗಜ ಆಟಗಾರರು ಈ ತಂಡದ ಪರ ಆಡಿದ್ದಾರೆ. ಆದರೆ ವಿಚಿತ್ರವೆಂದರೆ ಆರ್ಸಿಬಿ ಒಮ್ಮೆಯೂ ಐಪಿಎಲ್ ಚಾಂಪಿಯನ್ ಆಗಿಲ್ಲ. 2009 ಮತ್ತು 2016ರ ಸೀಸನ್ಗಳಲ್ಲಿ ಫೈನಲ್ ತಲುಪಿದ್ದರೂ, ಅಂತಿಮ ಹಂತದಲ್ಲಿ ಎಡವಿತ್ತು. ‘ಈ ಸಲ ಕಪ್ ನಮ್ದೆ’ ಎಂದು ಪ್ರತಿ ವರ್ಷ ಆರ್ಸಿಬಿ ಅಭಿಮಾನಿಗಳು ಹೇಳುತ್ತಿದ್ದಾರೆ.


ಐಪಿಎಲ್ 16ನೇ ಸೀಸನ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ರಶಸ್ತಿ ಗೆಲ್ಲುವ ಮೆಚ್ಚಿನ ತಂಡಗಲ್ಲಿ ಒಂದಾಗಿದ್ದು, ಅದಕ್ಕೆ ತಕ್ಕಂತೆ ಆಟವಾಡುತ್ತಿದೆ. ಇದುವರೆಗೂ ಕಪ್ ಗೆಲ್ಲದಿದ್ದರೂ ಆರ್ಸಿಬಿಗೆ ಅಪಾರ ಅಭಿಮಾನಿ ಬಳಗವಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆದರೆ ಮೈದಾನ ಕಿಕ್ಕಿರಿದು ತುಂಬಿರುತ್ತದೆ. ಇತ್ತೀಚೆಗೆ, ಅಭಿಮಾನಿಯೊಬ್ಬರ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.


ಕೆಲವು ಆರ್ಸಿಬಿ ಅಭಿಮಾನಿಗಳು ತಮ್ಮ ತಂಡ ಟ್ರೋಫಿ ಗೆಲ್ಲುವವರೆಗೆ ಮದುವೆಯಾಗುವುದಿಲ್ಲ ಎಂಬ ಫಲಕಗಳೊಂದಿಗೆ ಕ್ರೀಡಾಂಗಣದಲ್ಲಿ ಕಾಣಿಸಿಕೊಂಡಿದ್ದಾರೆ. ಇದನ್ನು ನೋಡಿದ ಹಲವರು ಮುಂದಿನ ಜನ್ಮದಲ್ಲಿ ಮದುವೆ ಆಗಬೇಕು ಎಂದು ಹಾಸ್ಯ ಚಟಾಕಿ ಹಾರಿಸುತ್ತಿದ್ದಾರೆ. ಕಳೆದ ವರ್ಷವೂ ಆರ್ಸಿಬಿ ಕಪ್ ಗೆಲ್ಲುವವರೆಗೂ ತಾನು ಮದುವೆಯಾಗುವುದಿಲ್ಲ ಎಂದು ಮಹಿಳಾ ಅಭಿಮಾನಿಯೊಬ್ಬರು ಮೈದಾನದಲ್ಲಿ ಪೋಸ್ಟರ್ ಪ್ರದರ್ಶಿಸಿದ್ದರು. ಆ ವೇಳೆ ಅದು ದೊಡ್ಡ ವೈರಲ್ ಆಗಿತ್ತು.


ಇತ್ತೀಚಿನವರೆಗೂ ವಿರಾಟ್ ಕೊಹ್ಲಿ 71ನೇ ಶತಕ ಸಿಡಿಸುವವರೆಗೂ ಮದುವೆಯಾಗುವುದಿಲ್ಲ ಎಂದು ಅಭಿಮಾನಿಯೊಬ್ಬರು ಪೋಸ್ಟರ್ ಪ್ರದರ್ಶಿಸಿದ್ದರು. ಈಗಲಾದರೂ ಆರ್ಸಿಬಿಗೆ ಐಪಿಎಲ್ ಪ್ರಶಸ್ತಿ ನೀಡಿ ಪರೋಕ್ಷವಾಗಿ ಕೆಲವರ ಮದುವೆಗೆ ಕಾರಣರಾಗುತ್ತಾರೋ ಅಥವಾ ಅವರ ಮದುವೆಯನ್ನು ಇನ್ನೂ ಕೆಲವು ವರ್ಷಗಳ ಕಾಲ ಮುಂದೂಡುತ್ತಾರೋ ಕಾದು ನೋಡಬೇಕಿದೆ.
RCB vs ISG match crazy fan poster goes viral on social media.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm