ಬ್ರೇಕಿಂಗ್ ನ್ಯೂಸ್
13-04-23 01:00 pm Source: news18 ಕ್ರೀಡೆ
ಐಪಿಎಲ್ 17ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ರಾಜಸ್ಥಾನ ರಾಯಲ್ಸ್ ತಂಡವನ್ನು (CSK vs RR)ಎದುರಿಸಿತು. ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ 20 ಓವರ್ಗಳಲ್ಲಿ 8 ವಿಕೆಟ್ಗೆ 175 ರನ್ ಗಳಿಸಿತು. ಈ ಮೊತ್ತ ಬೆನ್ನಟ್ಟಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ನಿಗದಿತ 20 ಓವರ್ನಲ್ಲಿ 6 ವಿಕೆಟ್ ನಷ್ಟಕ್ಕೆ 172 ರನ್ ಗಳಿಸುವ ಮೂಲಕ 3 ರನ್ಗಳಿಂದ ಸೋಲನ್ನಪ್ಪಿತು.


ಆದರೆ ಈ ಪಂದ್ಯವು ಐಪಿಎಲ್ನಲ್ಲಿ ಹೊಸ ದಾಖಲೆ ನಿರ್ಮಿಸಿದೆ. ಈ ವರ್ಷದಲ್ಲಿ ಒಂದು ಪಂದ್ಯದ ಲೈವ್ ವೀಕ್ಷಣೆಯ ದಾಖಲೆಯನ್ನು ನಿರ್ಮಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಖತ್ ಟ್ರೆಂಡ್ ಆಗುತ್ತಿದೆ. ಹೌದು, 2ನೇ ಬ್ಯಾಟಿಂಗ್ ಮಾಡಿದ ಚೆನ್ನೈ ತಂಡದ ಪರ ಧೋನಿ ಬ್ಯಾಟಿಂಗ್ಗೆ ಆಗಮಿಸುವಾಗ ಐಪಿಎಲ್ 2023ರ ಲೈವ್ ಸ್ಟ್ರೀಮಿಂಗ್ನ್ನು ಜಿಯೋ ಸಿನಿಮಾದಲ್ಲಿ 1.5 ಕೋಟಿ ವೀಕ್ಷಣೆ ಪಡೆಯುತ್ತಿತ್ತು.

ಆದರೆ ಧೋನಿ ಕ್ರೀಸ್ಗೆ ಬಂದ ನಂತರ ಅದೆಲ್ಲಿಯೂ ಕೊನೆಯ 20 ಓವರ್ ವೇಳೆಗೆ ಈ ವೀಕ್ಷಣೆ ಬರೋಬ್ಬರಿ 2.2 ಕೋಟಿಗೆ ತಲುಪುವ ಮೂಲಕ ಈ ಸೀಸನ್ನಲ್ಇ ಅತಿ ಹೆಚ್ಚು ವೀಕ್ಷಣೆ ಪಡೆದ ಪಂದ್ಯ ಎಂಬ ದಾಖಲೆ ನಿರ್ಮಿಸಿದೆ.

ಇದಕ್ಕೂ ಮುನ್ನ ಲಕ್ನೋ ವಿರುದ್ಧ ಆರ್ಸಿಬಿ ಪಂದ್ಯದಲ್ಲಿ ಫಾಫ್ ಡುಪ್ಲೇಸಿಸ್ ಮತ್ತು ಗ್ಲೇನ್ ಮ್ಯಾಕ್ಸ್ವೆಲ್ ಬ್ಯಾಟಿಂಗ್ ಮಾಡುವಾಗ ಬರೋಬ್ಬರಿ 1.8 ಕೋಟಿ ವೀಕ್ಷಣೆ ಪಡೆಯುವ ಮೂಲಕ ಅಗ್ರಸ್ಥಾನದಲ್ಲಿತ್ತು. ಇದೀಗ ಈ ದಾಖಲೆಯನ್ನು ಚೆನ್ನೈ ಪಂದ್ಯ ಮುರಿದಿದೆ.

ಇನ್ನು, ವಿರಾಟ್ ಕೊಹ್ಲಿ ಸಹ ಬ್ಯಾಟಿಂಗ್ ಮಾಡುವ ವೇಳೆ 1.5 ಕೋಟಿ ವೀಕ್ಷಣೆ ಪಡೆಯುವ ಮೂಲಕ 4ನೇ ಅತಿ ಹೆಚ್ಚು ವೀಕ್ಷಣೆ ಪಡೆದ ಪಮದ್ಯ ಎಂಬ ಖ್ಯಾತಿಗೆ ಪಾತ್ರವಾಗಿದೆ. ಒಟ್ಟಾರೆಯಾಗಿ ಧೋನಿ ಆಗಮನದ ವೇಳೆ ಜಿಯೋ ಸಿನಿಮಾದಲ್ಲಿ ವೀಕ್ಷಣೆ ಹೆಚ್ಚುತ್ತಿದೆ.

ಧೋನಿ ಆಗಮನದ ವೇಳೆ ಈ ಬಾರಿ ಜಿಯೋ ಸಿನಿಮಾ ವೀಕ್ಷಣೆ ದಾಖಲೆಯ ಮೇಲೆ ದಾಖಲೆ ಸೃಷ್ಟಿಸುತ್ತಿದೆ. ಕಳೆದ ಕೋಲ್ಕತ್ತಾ ಪಂದ್ಯದ ವೇಳೆ ಧೋನಿ ಅಬ್ಬರದ 2 ಸಿಕ್ಸ್ ಸಿಡಿಸುವ ವೇಳೆ 1.7 ಕೋಟಿ ಹಾಗೂ ಮೊದಲ ಪಂದ್ಯದ ವೇಳೆ 1.7 ಕೋಟಿ ವೀಕ್ಷಣೆ ಪಡೆದಿತ್ತು.
highest viewership on jiocinema for ipl 2023 csk vs rr match.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm