ಬ್ರೇಕಿಂಗ್ ನ್ಯೂಸ್
21-04-23 12:57 pm Source: news18 ಕ್ರೀಡೆ
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ICC T20 ವಿಶ್ವಕಪ್ 2021 ರ ನಂತರ ತಂಡದ ನಾಯಕತ್ವವನ್ನು ತೊರೆದ ಈ ಸೂಪರ್ಸ್ಟಾರ್, ODI ಮತ್ತು ಟೆಸ್ಟ್ ನಾಯಕತ್ವದಿಂದಲೂ ಹಿಂದೆ ಸರಿದಿದ್ದರು. ಅವರು ಟೀಂ ಇಂಡಿಯಾದಲ್ಲಿ ಮಾತ್ರವಲ್ಲದೆ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲೂ ನಾಯಕತ್ವವನ್ನು ತೊರೆದಿದ್ದರು. ಇದೀಗ 1 ವರ್ಷದ ಅಂತರದ ನಂತರ ವಿರಾಟ್ ಮತ್ತೆ ಐಪಿಎಲ್ನಲ್ಲಿ ನಾಯಕತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.


ಇಂಡಿಯನ್ ಪ್ರೀಮಿಯರ್ ಲೀಗ್ನ ಹೊಸ ಸೀಸನ್ನಲ್ಲಿ ವಿರಾಟ್ ಕೊಹ್ಲಿ ವಿಭಿನ್ನ ಶೈಲಿಯಲ್ಲಿ ಕಾಣಿಸಿಕೊಂಡಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಓಪನರ್ ಆಗಿ ಕಣಕ್ಕಿಳಿಯುತ್ತಿರುವ ಅವರು ಆರೆಂಜ್ ಕ್ಯಾಪ್ ರೇಸ್ನಲ್ಲಿ 2ನೇ ಸ್ಥಾನದಲ್ಲಿದ್ದಾರೆ. ಒಂದಲ್ಲ ಎರಡಲ್ಲ ಇದುವರೆಗೆ ಒಟ್ಟು 4 ಅರ್ಧಶತಕ ಗಳಿಸಿದ್ದಾರೆ. ವಿರಾಟ್, ಫಾಫ್ ಡು ಪ್ಲೆಸಿಸ್ ಜೊತೆಗೂಡಿ ಈ ಋತುವಿನಲ್ಲಿ ತಂಡಕ್ಕೆ ಬಿರುಸಿನ ಆರಂಭವನ್ನು ನೀಡುತ್ತಿದ್ದಾರೆ. ವಿರಾಟ್ ಕೊಹ್ಲಿ ಈ ಋತುವಿನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಅರ್ಧಶತಕ ಸಿಡಿಸುವ ಮೂಲಕ ಆರಂಭಿಸಿದರು. ಇದುವರೆಗೆ 6 ಪಂದ್ಯಗಳಲ್ಲಿ ಬ್ಯಾಟಿಂಗ್ ಮಾಡುವಾಗ, ಈ ಬ್ಯಾಟ್ಸ್ಮನ್ ಒಟ್ಟು 4 ಅರ್ಧಶತಕಗಳನ್ನು ಗಳಿಸಿದ್ದಾರೆ.


ಇನ್ನು, ಪಂಜಾಭ್ ವಿರುದ್ಧ ನಾಯಕತ್ವದ ಜವಾಬ್ದಾರಿ ಪಡೆದ ನಂತರ ಮೊದಲ ಪಂದ್ಯದಲ್ಲಿಯೇ ಮತ್ತೊಂದು ಅರ್ಧಶತಕ ಗಳಿಸಿ ಕೊಹ್ಲಿ ಮಿಂಚಿದರು. ಇಂಡಿಯನ್ ಪ್ರೀಮಿಯರ್ ಲೀಗ್ನ ಕೊನೆಯ ಋತುವಿನಲ್ಲಿ, ತಂಡದ ನಾಯಕತ್ವದ ಜವಾಬ್ದಾರಿಯನ್ನು ಫಾಫ್ ಡು ಪ್ಲೆಸಿಸ್ಗೆ ನೀಡಲಾಗಿತ್ತು. ವಿರಾಟ್ ಕೊಹ್ಲಿ ಕಳೆದ ಋತುವಿನಲ್ಲಿ ಕೇವಲ ಆಟಗಾರನಾಗಿ ತಂಡದ ಭಾಗವಾಗಿದ್ದರು. ಈಗ ಹೊಸ ಋತುವಿನಲ್ಲಿ 5 ಪಂದ್ಯಗಳ ನಂತರ, ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಕಾಣಿಸಿಕೊಂಡಿದ್ದಾರೆ. ಪಂಜಾಬ್ ಕಿಂಗ್ಸ್ ವಿರುದ್ಧದ ತಂಡದಲ್ಲಿ ಫಾಫ್ ಡು ಪ್ಲೆಸಿಸ್ ಅವರನ್ನು ಬ್ಯಾಟ್ಸ್ಮನ್ ಆಗಿ ಕಾಣಿಸಿಕೊಂಡರು.

ಐಪಿಎಲ್ನ ಹೊಸ ಋತುವಿನಲ್ಲಿ 6 ಪಂದ್ಯಗಳನ್ನು ಆಡಿದ ನಂತರ ವಿರಾಟ್ ಕೊಹ್ಲಿ 55.80 ರ ಸರಾಸರಿಯಲ್ಲಿ 279 ರನ್ ಗಳಿಸಿದ್ದಾರೆ. ಈ ಸಮಯದಲ್ಲಿ, 82 ರನ್ ಅವರ ಗರಿಷ್ಠ ಸ್ಕೋರ್ ಆಗಿದೆ. 142 ಸ್ಟ್ರೈಕ್ ರೇಟ್ನಲ್ಲಿ ಬ್ಯಾಟಿಂಗ್ ಮಾಡಿದ ಕೊಹ್ಲಿ 24 ಬೌಂಡರಿ ಮತ್ತು 11 ಸಿಕ್ಸರ್ಗಳನ್ನು ಬಾರಿಸಿದ್ದಾರೆ. ಮತ್ತೆ ಐಪಿಎಲ್ ತಂಡದ ನಾಯಕತ್ವದ ಜವಾಬ್ದಾರಿಯನ್ನು ಹೊರುವ ಮೂಲಕ ವಿರಾಟ್ ಟೀಂ ಇಂಡಿಯಾಗೆ ಗುಡ್ ನ್ಯೂಸ್ ನೀಡಿದ್ದಾರೆ. ಐಸಿಸಿ ವಿಶ್ವಕಪ್ನಲ್ಲಿ ರೋಹಿತ್ ಶರ್ಮಾ ಜೊತೆಗೆ ಆಯ್ಕೆದಾರರು ಕೊಹ್ಲಿಯ ಹೆಸರನ್ನು ಪರಿಗಣಿಸಬಹುದು ಎಂಬ ಮಾತುಗಳಿ ಇದೀಗ ಕೇಳಿಬರುತ್ತಿದೆ.
virat kohli taking captaincy of rcb good news for team india ahead of the world cup 2023.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm